9:27 PM Monday22 - June 2026
ಬ್ರೇಕಿಂಗ್ ನ್ಯೂಸ್
ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್…

ಇತ್ತೀಚಿನ ಸುದ್ದಿ

ಕೆಲರಾಯಿ ಸಂತ ಅನ್ನಾ ಆಂಗ್ಲ ಮಾದ್ಯಮ ಶಾಲೆ ವಾರ್ಷಿಕೋತ್ಸವ: ವೈವಿಧ್ಯಮಯ ಸಾಂಸ್ಕೃತಿಕ ರಂಗು

20/12/2024, 15:02

ಮಂಗಳೂರು(reporterKarnataka.com): ಕೆಲರಾಯಿ ಸಂತ ಅನ್ನಾ ಆಂಗ್ಲ ಮಾದ್ಯಮ ಶಾಲೆಯ ವಾರ್ಷಿಕೋತ್ಸವ ಇತ್ತೀಚೆಗೆ ಬಹಳ ವಿಜೃಂಭಣೆಯದ ಜರುಗಿತು.
ಬೆಳಿಗ್ಗೆ ಸಂತ ಅನ್ನಾ ಚರ್ಚಿನ ಸಭಾಂಗಣದಲ್ಲಿ ನಡೆದ ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಉದ್ಯಮಿ ಬ್ಯಾಪ್ಟಿಸ್ಟ್ ಕ್ರಾಸ್ತ ಮಕ್ಕಳಲ್ಲಿ ಸ್ಪರ್ಧಾತ್ಮಕ ಮನೋಭಾವವನ್ನು ಬೆಳೆಸುವ ಮೂಲಕ, ಅವರಲ್ಲಿರುವ ಸುಪ್ತ ಪ್ರತಿಭೆಗಳನ್ನು ಗುರುತಿಸಿ, ಅವರ ಸರ್ವತೋಮುಖ ಬೆಳವಣೆಗೆಗೆ ಪೂರಕವಾದ ವಾತಾವರಣವನ್ನು ಕಲ್ಪಿಸಿದಂತಾಗುತ್ತದೆ ಎಂದು ತಿಳಿಸಿದರು.
ಅದೇ ದಿನ ಸಂಜೆ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಲೂರ್ಡ್ಸ್ ಕೇಂದ್ರೀಯ ವಿದ್ಯಾಲಯದ ಪ್ರಾಂಶುಪಾಲರಾದ ವಂ। ಜಾನ್ಸಾನ್ ಸಿಕ್ವೇರಾ ಅವರು ಮಕ್ಕಳು ತಮ್ಮ ಹೆಚ್ಚಿನ ಅವಧಿಯನ್ನು ಶಾಲೆಯಲ್ಲಿ ಕಳೆಯುವ ಕಾರಣ, ಅವರ ಭವಿಷ್ಯವನ್ನು ರೂಪಿಸಿಕೊಳ್ಳುವಲ್ಲಿ ಶಿಕ್ಷಕರು ಪ್ರಮುಖ ಪಾತ್ರ ವಹಿಸುತ್ತಾರೆ. ಮಕ್ಕಳ ಪೋಷಕರು ಕೂಡ ಅವರೊಂದಿಗೆ ಕೈ ಜೋಡಿಸಿ ಸಕಾರಾತ್ಮಕವಾಗಿ ಸ್ಪಂದಿಸಿದರೆ, ಖಂಡಿತವಾಗಿ ಮಕ್ಕಳ ಭವಿಷ್ಯ ಉಜ್ವಲವಾಗಲು ಸಾಧ್ಯ ಎಂದು ತಿಳಿಸಿದರು.
೨೦೨೩- ೨೪ ನೇ ಸಾಲಿನ, ೧೦ನೇ ತರಗತಿಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಅಂದು ಸನ್ಮಾನಿಸಲಾಯಿತು. ಬಳಿಕ ನಡೆದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಎಲ್ಲಾ ವಿದ್ಯಾರ್ಥಿಗಳು ಭಾಗವಹಿಸಿ ತಮ್ಮ ಕಲಾ ಪ್ರತಿಭೆಯನ್ನು ಮೆರೆದರು. ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ವಿದ್ಯಾಸಂಸ್ಥೆಯ ಸಂಚಾಲಕರಾದ ವಂ| ಗುರು ಸಿಲ್ವೆಸ್ಟರ್ ಡಿ’ ಕೋಸ್ತಾ ವಹಿಸಿದ್ದರು. ಶಾಲಾ ಮುಖ್ಯೋಪಾಧ್ಯಾಯರಾದ ಜೋನ್ ಪಾಯ್ಸ್ ಸರ್ವರನ್ನು ಸ್ವಾಗತಿಸಿದರು.ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ
ಐರಿನ್ ಮಿನೇಜಸ್ ವರದಿಯನ್ನು ವಾಚಿಸಿದರು. ವಿದ್ಯಾರ್ಥಿಗಳಾದ ಮಾ|ಗಲೇನ್ಸನ್ ಡಿ’ಸೋಜಾ ಹಾಗೂ ಡೆನಿಕಾ ಡಿ’ಸೋಜಾ ಕಾರ್ಯಕ್ರಮವನ್ನು ನಿರೂಪಿಸಿ, ಹಿರಿಯ ಶಿಕ್ಷಕಿ ಹೇಮಾವತಿ ವಂದನಾರ್ಪಣೆಗೈದರು. ಕಾರ್ಯಕ್ರಮದಲ್ಲಿ ಗೌರವ ಅತಿಥಿಯಾಗಿ ವಂ| ಗುರು ಜೋಸೆಫ್ ಮಸ್ಕರೇನಸ್, ಸಂತೋಷ್ ಡಿ’ಕೋಸಾ, ಕಾರ್ಯದರ್ಶಿ ಸೆಲಿಸ್ ಡಿ’ಮೆಲ್ಲೊ, ಶಾಲಾ ಆಡಳಿತ ಮಂಡಳಿಯ ಸದಸ್ಯರಾದ ಮೈಕಲ್ ಲೋಬೋ, ಶಿಕ್ಷಕ – ರಕ್ಷಕ ಸಂಘದ ಉಪಾಧ್ಯಕ್ಷರಾದ ವಿನೋದ್ ರೇಗೋ ಹಾಗೂ ಶಾಲಾ ನಾಯಕ ಸೋಹನ್ ಜೋಶ್ವಾ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು