7:38 AM Monday6 - October 2025
ಬ್ರೇಕಿಂಗ್ ನ್ಯೂಸ್
ಕುಶಾಲನಗರ: ಸಂಬಂಧಿಕರ ಸಾವಿಗೆ ತೆರಳಿದ್ದ ಯುವಕ ಹಾರಂಗಿ ಮುಖ್ಯ ನಾಲೆಯಲ್ಲಿ ಈಜಲು ಹೋಗಿ… ಮೈಸೂರು ದಸರಾ ಜಂಬೂ ಸವಾರಿ: ಚಿತ್ರದುರ್ಗದ ಸ್ತಬ್ದಚಿತ್ರಕ್ಕೆ ಪ್ರಥಮ ಸ್ಥಾನ ಗ್ಯಾರಂಟಿ ಯೋಜನೆಗಳ ಯಶಸ್ಸು ಬಿಜೆಪಿಗರ ಆತಂಕಗೊಳಿಸಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ Kodagu | ಡಿವೈಎಸ್ಪಿ ಮೇಲೆ ಹಲ್ಲೆ ಪ್ರಕರಣ: ಆರೋಪಿಗೆ ಅ. 16 ರವರೆಗೆ… ಹೆತ್ತಬ್ಬೆಯನ್ನೇ ಕೊಂದ ಪಾಪಿ ಪುತ್ರ: ಅಡುಗೆ ಮಾಡಿಲ್ಲ ಎಂಬ ಕಾರಣಕ್ಕೆ ಹತ್ಯೆ; ಆರೋಪಿಯ… Kodagu | ಮಂಜಿನ ನಗರಿ ಮಡಿಕೇರಿಯಲ್ಲಿ ಜನೋತ್ಸವಕ್ಕೆ ಜನಜoಗುಳಿ: ದಶ ಮಂಟಪಗಳಿಂದ ಶೋಭಾ… Bangaluru | ವೈದ್ಯ ದಂಪತಿಯಿಂದ ಮನೆಯಲ್ಲೇ ನವದುರ್ಗೆಯರ ಆರಾಧನೆ: ಸಾಲು ಸಾಲು ದಸರಾ… ಮಡಿಕೇರಿ ದಸರಾ ಶೋಭಯಾತ್ರೆಗೆ ತೆರೆ: ದಶಮoಟಪಗಳ ತೀರ್ಪುಗಾರರ ವಿರುದ್ದ ಆಕ್ರೋಶ; ಪ್ರತಿಭಟನೆ ಮುಂದಿನ ವರ್ಷವೂ ನಾನೇ ದಸರಾ ಪುಷ್ಪಾರ್ಚನೆ ಮಾಡುತ್ತೇನೆ: ಸಿಎಂ ಸಿದ್ದರಾಮಯ್ಯ ಭರವಸೆಯ ನುಡಿ ಮೈಸೂರು ದಸರಾ: ಅರಮನೆ ಆವರಣದಲ್ಲಿ ಯದುವೀರ್ ಒಡೆಯರ್ ರಿಂದ ಶಮಿ ಪೂಜೆ

ಇತ್ತೀಚಿನ ಸುದ್ದಿ

ಕೆಲರಾಯಿ ಸಂತ ಅನ್ನಾ ಆಂಗ್ಲ ಮಾದ್ಯಮ ಶಾಲೆ ವಾರ್ಷಿಕೋತ್ಸವ: ವೈವಿಧ್ಯಮಯ ಸಾಂಸ್ಕೃತಿಕ ರಂಗು

20/12/2024, 15:02

ಮಂಗಳೂರು(reporterKarnataka.com): ಕೆಲರಾಯಿ ಸಂತ ಅನ್ನಾ ಆಂಗ್ಲ ಮಾದ್ಯಮ ಶಾಲೆಯ ವಾರ್ಷಿಕೋತ್ಸವ ಇತ್ತೀಚೆಗೆ ಬಹಳ ವಿಜೃಂಭಣೆಯದ ಜರುಗಿತು.
ಬೆಳಿಗ್ಗೆ ಸಂತ ಅನ್ನಾ ಚರ್ಚಿನ ಸಭಾಂಗಣದಲ್ಲಿ ನಡೆದ ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಉದ್ಯಮಿ ಬ್ಯಾಪ್ಟಿಸ್ಟ್ ಕ್ರಾಸ್ತ ಮಕ್ಕಳಲ್ಲಿ ಸ್ಪರ್ಧಾತ್ಮಕ ಮನೋಭಾವವನ್ನು ಬೆಳೆಸುವ ಮೂಲಕ, ಅವರಲ್ಲಿರುವ ಸುಪ್ತ ಪ್ರತಿಭೆಗಳನ್ನು ಗುರುತಿಸಿ, ಅವರ ಸರ್ವತೋಮುಖ ಬೆಳವಣೆಗೆಗೆ ಪೂರಕವಾದ ವಾತಾವರಣವನ್ನು ಕಲ್ಪಿಸಿದಂತಾಗುತ್ತದೆ ಎಂದು ತಿಳಿಸಿದರು.
ಅದೇ ದಿನ ಸಂಜೆ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಲೂರ್ಡ್ಸ್ ಕೇಂದ್ರೀಯ ವಿದ್ಯಾಲಯದ ಪ್ರಾಂಶುಪಾಲರಾದ ವಂ। ಜಾನ್ಸಾನ್ ಸಿಕ್ವೇರಾ ಅವರು ಮಕ್ಕಳು ತಮ್ಮ ಹೆಚ್ಚಿನ ಅವಧಿಯನ್ನು ಶಾಲೆಯಲ್ಲಿ ಕಳೆಯುವ ಕಾರಣ, ಅವರ ಭವಿಷ್ಯವನ್ನು ರೂಪಿಸಿಕೊಳ್ಳುವಲ್ಲಿ ಶಿಕ್ಷಕರು ಪ್ರಮುಖ ಪಾತ್ರ ವಹಿಸುತ್ತಾರೆ. ಮಕ್ಕಳ ಪೋಷಕರು ಕೂಡ ಅವರೊಂದಿಗೆ ಕೈ ಜೋಡಿಸಿ ಸಕಾರಾತ್ಮಕವಾಗಿ ಸ್ಪಂದಿಸಿದರೆ, ಖಂಡಿತವಾಗಿ ಮಕ್ಕಳ ಭವಿಷ್ಯ ಉಜ್ವಲವಾಗಲು ಸಾಧ್ಯ ಎಂದು ತಿಳಿಸಿದರು.
೨೦೨೩- ೨೪ ನೇ ಸಾಲಿನ, ೧೦ನೇ ತರಗತಿಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಅಂದು ಸನ್ಮಾನಿಸಲಾಯಿತು. ಬಳಿಕ ನಡೆದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಎಲ್ಲಾ ವಿದ್ಯಾರ್ಥಿಗಳು ಭಾಗವಹಿಸಿ ತಮ್ಮ ಕಲಾ ಪ್ರತಿಭೆಯನ್ನು ಮೆರೆದರು. ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ವಿದ್ಯಾಸಂಸ್ಥೆಯ ಸಂಚಾಲಕರಾದ ವಂ| ಗುರು ಸಿಲ್ವೆಸ್ಟರ್ ಡಿ’ ಕೋಸ್ತಾ ವಹಿಸಿದ್ದರು. ಶಾಲಾ ಮುಖ್ಯೋಪಾಧ್ಯಾಯರಾದ ಜೋನ್ ಪಾಯ್ಸ್ ಸರ್ವರನ್ನು ಸ್ವಾಗತಿಸಿದರು.ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ
ಐರಿನ್ ಮಿನೇಜಸ್ ವರದಿಯನ್ನು ವಾಚಿಸಿದರು. ವಿದ್ಯಾರ್ಥಿಗಳಾದ ಮಾ|ಗಲೇನ್ಸನ್ ಡಿ’ಸೋಜಾ ಹಾಗೂ ಡೆನಿಕಾ ಡಿ’ಸೋಜಾ ಕಾರ್ಯಕ್ರಮವನ್ನು ನಿರೂಪಿಸಿ, ಹಿರಿಯ ಶಿಕ್ಷಕಿ ಹೇಮಾವತಿ ವಂದನಾರ್ಪಣೆಗೈದರು. ಕಾರ್ಯಕ್ರಮದಲ್ಲಿ ಗೌರವ ಅತಿಥಿಯಾಗಿ ವಂ| ಗುರು ಜೋಸೆಫ್ ಮಸ್ಕರೇನಸ್, ಸಂತೋಷ್ ಡಿ’ಕೋಸಾ, ಕಾರ್ಯದರ್ಶಿ ಸೆಲಿಸ್ ಡಿ’ಮೆಲ್ಲೊ, ಶಾಲಾ ಆಡಳಿತ ಮಂಡಳಿಯ ಸದಸ್ಯರಾದ ಮೈಕಲ್ ಲೋಬೋ, ಶಿಕ್ಷಕ – ರಕ್ಷಕ ಸಂಘದ ಉಪಾಧ್ಯಕ್ಷರಾದ ವಿನೋದ್ ರೇಗೋ ಹಾಗೂ ಶಾಲಾ ನಾಯಕ ಸೋಹನ್ ಜೋಶ್ವಾ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು