10:49 PM Monday10 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ಕೆಲರಾಯಿ ಸಂತ ಅನ್ನಾ ಆಂಗ್ಲ ಮಾದ್ಯಮ ಶಾಲೆ ವಾರ್ಷಿಕೋತ್ಸವ: ವೈವಿಧ್ಯಮಯ ಸಾಂಸ್ಕೃತಿಕ ರಂಗು

20/12/2024, 15:02

ಮಂಗಳೂರು(reporterKarnataka.com): ಕೆಲರಾಯಿ ಸಂತ ಅನ್ನಾ ಆಂಗ್ಲ ಮಾದ್ಯಮ ಶಾಲೆಯ ವಾರ್ಷಿಕೋತ್ಸವ ಇತ್ತೀಚೆಗೆ ಬಹಳ ವಿಜೃಂಭಣೆಯದ ಜರುಗಿತು.
ಬೆಳಿಗ್ಗೆ ಸಂತ ಅನ್ನಾ ಚರ್ಚಿನ ಸಭಾಂಗಣದಲ್ಲಿ ನಡೆದ ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಉದ್ಯಮಿ ಬ್ಯಾಪ್ಟಿಸ್ಟ್ ಕ್ರಾಸ್ತ ಮಕ್ಕಳಲ್ಲಿ ಸ್ಪರ್ಧಾತ್ಮಕ ಮನೋಭಾವವನ್ನು ಬೆಳೆಸುವ ಮೂಲಕ, ಅವರಲ್ಲಿರುವ ಸುಪ್ತ ಪ್ರತಿಭೆಗಳನ್ನು ಗುರುತಿಸಿ, ಅವರ ಸರ್ವತೋಮುಖ ಬೆಳವಣೆಗೆಗೆ ಪೂರಕವಾದ ವಾತಾವರಣವನ್ನು ಕಲ್ಪಿಸಿದಂತಾಗುತ್ತದೆ ಎಂದು ತಿಳಿಸಿದರು.
ಅದೇ ದಿನ ಸಂಜೆ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಲೂರ್ಡ್ಸ್ ಕೇಂದ್ರೀಯ ವಿದ್ಯಾಲಯದ ಪ್ರಾಂಶುಪಾಲರಾದ ವಂ। ಜಾನ್ಸಾನ್ ಸಿಕ್ವೇರಾ ಅವರು ಮಕ್ಕಳು ತಮ್ಮ ಹೆಚ್ಚಿನ ಅವಧಿಯನ್ನು ಶಾಲೆಯಲ್ಲಿ ಕಳೆಯುವ ಕಾರಣ, ಅವರ ಭವಿಷ್ಯವನ್ನು ರೂಪಿಸಿಕೊಳ್ಳುವಲ್ಲಿ ಶಿಕ್ಷಕರು ಪ್ರಮುಖ ಪಾತ್ರ ವಹಿಸುತ್ತಾರೆ. ಮಕ್ಕಳ ಪೋಷಕರು ಕೂಡ ಅವರೊಂದಿಗೆ ಕೈ ಜೋಡಿಸಿ ಸಕಾರಾತ್ಮಕವಾಗಿ ಸ್ಪಂದಿಸಿದರೆ, ಖಂಡಿತವಾಗಿ ಮಕ್ಕಳ ಭವಿಷ್ಯ ಉಜ್ವಲವಾಗಲು ಸಾಧ್ಯ ಎಂದು ತಿಳಿಸಿದರು.
೨೦೨೩- ೨೪ ನೇ ಸಾಲಿನ, ೧೦ನೇ ತರಗತಿಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಅಂದು ಸನ್ಮಾನಿಸಲಾಯಿತು. ಬಳಿಕ ನಡೆದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಎಲ್ಲಾ ವಿದ್ಯಾರ್ಥಿಗಳು ಭಾಗವಹಿಸಿ ತಮ್ಮ ಕಲಾ ಪ್ರತಿಭೆಯನ್ನು ಮೆರೆದರು. ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ವಿದ್ಯಾಸಂಸ್ಥೆಯ ಸಂಚಾಲಕರಾದ ವಂ| ಗುರು ಸಿಲ್ವೆಸ್ಟರ್ ಡಿ’ ಕೋಸ್ತಾ ವಹಿಸಿದ್ದರು. ಶಾಲಾ ಮುಖ್ಯೋಪಾಧ್ಯಾಯರಾದ ಜೋನ್ ಪಾಯ್ಸ್ ಸರ್ವರನ್ನು ಸ್ವಾಗತಿಸಿದರು.ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ
ಐರಿನ್ ಮಿನೇಜಸ್ ವರದಿಯನ್ನು ವಾಚಿಸಿದರು. ವಿದ್ಯಾರ್ಥಿಗಳಾದ ಮಾ|ಗಲೇನ್ಸನ್ ಡಿ’ಸೋಜಾ ಹಾಗೂ ಡೆನಿಕಾ ಡಿ’ಸೋಜಾ ಕಾರ್ಯಕ್ರಮವನ್ನು ನಿರೂಪಿಸಿ, ಹಿರಿಯ ಶಿಕ್ಷಕಿ ಹೇಮಾವತಿ ವಂದನಾರ್ಪಣೆಗೈದರು. ಕಾರ್ಯಕ್ರಮದಲ್ಲಿ ಗೌರವ ಅತಿಥಿಯಾಗಿ ವಂ| ಗುರು ಜೋಸೆಫ್ ಮಸ್ಕರೇನಸ್, ಸಂತೋಷ್ ಡಿ’ಕೋಸಾ, ಕಾರ್ಯದರ್ಶಿ ಸೆಲಿಸ್ ಡಿ’ಮೆಲ್ಲೊ, ಶಾಲಾ ಆಡಳಿತ ಮಂಡಳಿಯ ಸದಸ್ಯರಾದ ಮೈಕಲ್ ಲೋಬೋ, ಶಿಕ್ಷಕ – ರಕ್ಷಕ ಸಂಘದ ಉಪಾಧ್ಯಕ್ಷರಾದ ವಿನೋದ್ ರೇಗೋ ಹಾಗೂ ಶಾಲಾ ನಾಯಕ ಸೋಹನ್ ಜೋಶ್ವಾ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು