12:55 PM Tuesday27 - January 2026
ಬ್ರೇಕಿಂಗ್ ನ್ಯೂಸ್
ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ… ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ

ಇತ್ತೀಚಿನ ಸುದ್ದಿ

ಕಲರ್ಸ್ ಕನ್ನಡ ವಾಹಿನಿಯಲ್ಲಿ ಮತ್ತೊಂದು ಹೊಸ ದೈನಿಕ ‘ನೂರು ಜನ್ಮಕೂ’ ಧಾರಾವಾಹಿ ಆರಂಭ

20/12/2024, 15:46

ಹೃದಯಸ್ಪರ್ಶಿ ಧಾರಾವಾಹಿಗಳ ಮೂಲಕ ಕನ್ನಡ ಪ್ರೇಕ್ಷಕನ ಮನಸೂರೆಗೊಂಡಿರುವ ಕಲರ್ಸ್ ಕನ್ನಡ ವಾಹಿನಿಯು ಮತ್ತೊಂದು ಹೊಸ ದೈನಿಕ ಧಾರಾವಾಹಿಯನ್ನು ಆರಂಭಿಸುತ್ತಿದೆ. ಡಿ.23ರಿಂದ ಪ್ರತಿ ರಾತ್ರಿ 8:30ಕ್ಕೆ ಪ್ರಸಾರಗೊಳ್ಳಲಿರುವ ಈ ಹೊಸ ಧಾರಾವಾಹಿ ‘ನೂರು ಜನ್ಮಕೂ’ ವಿಭಿನ್ನವಾದ ರೋಚಕ ಕತೆಯನ್ನು ಹೊಂದಿದೆ.
ಮೊದಲ ನೋಟಕ್ಕೆ ‘ನೂರು ಜನ್ಮಕೂ’ ಒಂದು ಉತ್ಕಟ ಪ್ರೇಮಕತೆ. ಪ್ರತಿಷ್ಠಿತ ಕದಂಬ ವಂಶದ ಉತ್ತರಾಧಿಕಾರಿ ಚಿರಂಜೀವಿ ಹಾಗೂ ಮೈತ್ರಿ ಎಂಬ ಸಾಧಾರಣ ಕುಟುಂಬದ ಹುಡುಗಿಯ ನಡುವಿನ ಪ್ರೇಮದ ಕಥೆಯಿದು. ಚಿರಂಜೀವಿ ಅತಿಮಾನುಷ ಶಕ್ತಿಗಳ ಹಿಡಿತಕ್ಕೆ ಸಿಕ್ಕು ನಲುಗುವಾಗ ರಾಘವೇಂದ್ರಸ್ವಾಮಿಯ ಪರಮಭಕ್ತೆಯಾದ ಮೈತ್ರಿ ತನ್ನ ಶ್ರದ್ಧೆ ಹಾಗೂ ನಂಬಿಕೆಗಳ ಮುಖಾಂತರ ಅವನನ್ನು ರಕ್ಷಿಸಲು ಪಣತೊಡುತ್ತಾಳೆ. ಚಿರಂಜೀವಿಯ ಜೀವ ಕಾಪಾಡುತ್ತಲೇ ತಮ್ಮ ಪ್ರೀತಿಯನ್ನೂ ಉಳಿಸಿಕೊಳ್ಳಲು ಒದ್ದಾಡುವ ಹೆಣ್ಣಾಗಿ ಮೈತ್ರಿ ನೋಡುಗರ ಮನಸನ್ನು ಆವರಿಸಿಕೊಳ್ಳುವುದರಲ್ಲಿ ಸಂಶಯವಿಲ್ಲ. ಧಾರಾವಾಹಿಯ ಕತೆಯನ್ನು ಚಿಕ್ಕಮಗಳೂರಿನ ಚೆಂದದ ಹಿನ್ನೆಲೆಯಲ್ಲಿ ಚಿತ್ರೀಕರಿಸಲಾಗಿದ್ದು, ‘ನೂರು ಜನ್ಮಕೂ’ ಮಾನವೀಯ ಅಂತಃಕರಣ ಹಾಗೂ ಅತಿಮಾನುಷ ಶಕ್ತಿಗಳ ಅಟ್ಟಹಾಸವನ್ನು ಮುಖಾಮುಖಿಯಾಗಿಸುತ್ತದೆ. ಹಾಗಾಗಿ ರೋಚಕ ತಿರುವುಗಳನ್ನು ಪಡೆಯುತ್ತಾ ವೀಕ್ಷಕರನ್ನು ರಂಜಿಸುತ್ತದೆ. ಸಂಬಂಧಗಳು, ಕುಟುಂಬ ನಾಟಕಗಳು ಅದನ್ನು ಮತ್ತಷ್ಟು ರಸವತ್ತಾಗಿಸುತ್ತವೆ. ಉನ್ನತ ಮಟ್ಟದ ಗ್ರಾಫಿಕ್ಸ್ ಹೊಂದಿರುವ ಈ ಧಾರವಾಹಿ ಕನ್ನಡ ಪ್ರೇಕ್ಷಕರ ಮನಸೂರೆಗೊಳಿಸುತ್ತದೆ. ಕನ್ನಡ ಧಾರಾವಾಹಿಗಳಲ್ಲಿ ಅತಿಮಾನುಷ ಶಕ್ತಿಯ ಕತೆಗಳು ಕಡಿಮೆ. ಆ ಕೊರತೆಯನ್ನು ‘ನೂರು ಜನ್ಮಕೂ’ ಸಮರ್ಥವಾಗಿ ತುಂಬಲಿದೆ. ಶ್ರವಂತ್ ರಾಧಿಕಾ ನಿರ್ದೇಶನದ ಈ ಧಾರಾವಾಹಿಯಲ್ಲಿ ಹೆಸರಾಂತ ನಟನಟಿಯರ ದಂಡೇ ಇದೆ. ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ಗೀತಾ’ ಧಾರಾವಾಹಿಯಲ್ಲಿ ನಾಯಕ ವಿಜಯ್ ಆಗಿ ನಟಿಸಿದ್ದ ಧನುಷ್ ಗೌಡ ಇದೀಗ ‘ನೂರು ಜನ್ಮಕೂ’ ಧಾರಾವಾಹಿಯಲ್ಲಿ ಚಿರಂಜೀವಿ ಪಾತ್ರದಲ್ಲಿ ನಿಮ್ಮ ಮುಂದೆ ಬರಲಿದ್ದಾರೆ.ಮಿಸ್ ಮಂಗಳೂರು ಕಿರೀಟ ಮುಡಿಗೇರಿಸಿಕೊಂಡಿದ್ದ ಶಿಲ್ಪಾ ಕಾಮತ್ ನಾಯಕಿಯಾಗಿ ಮೈತ್ರಿ ಪಾತ್ರದಲ್ಲಿ ನಿಮ್ಮನ್ನು ರಂಜಿಸಲಿದ್ದಾರೆ. ಕಥಾ ನಾಯಕಿ ಮೈತ್ರಿ, ರಾಘವೇಂದ್ರ ಸ್ವಾಮಿ ಭಕ್ತೆ. ಆಶಾವಾದಿ, ಸ್ವಾಭಿಮಾನಿ ಹಾಗೂ ತ್ಯಾಗಮಯಿ.
ವಿಶೇಷ ಪಾತ್ರ ಅಂದ್ರೆ, ದೆವ್ವದ ಪಾತ್ರದಲ್ಲಿ ಚಂದನ ಗೌಡ ನಟಿಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು