2:15 PM Wednesday17 - June 2026
ಬ್ರೇಕಿಂಗ್ ನ್ಯೂಸ್
ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ

ಇತ್ತೀಚಿನ ಸುದ್ದಿ

ಸಿ.ಟಿ. ರವಿ ಬಂಧನ: ಬೆಳಗಾವಿಯಲ್ಲಿ ಬಿಜೆಪಿಯಿಂದ ಭಾರೀ ಪ್ರತಿಭಟನೆ

20/12/2024, 22:22

ಬೆಳಗಾವಿ(reporterkarnataka.com): ಮಾಜಿ ಸಚಿವ ಹಾಗೂ ವಿಧಾನ ಪರಿಷತ್ ಸದಸ್ಯ ಸಿ. ಟಿ.ರವಿ ಅವರ ಬಂಧನ ಖಂಡಿಸಿ ಬಿಜೆಪಿಯಿಂದ ಬೆಳಗಾವಿಯ ಚನ್ನಮ್ಮ ವೃತ್ತದ ಬಳಿ ಪ್ರತಿಭಟನೆ ನಡೆಸಲಾಯಿತು.


ಸುವರ್ಣಸೌಧದೊಳಕ್ಕೆ ನುಗ್ಗಿ ಕೆಲವು ಕಾಂಗ್ರೆಸ್ ಪುಡಾರಿಗಳು, ರೌಡಿಗಳು ದಾಂಧಲೆ ನಡೆಸಿದವರು ಹಾಗೂ ನಡುರಸ್ತೆಯಲ್ಲಿ ಹಲ್ಲೆ ಮಾಡಲು ಪ್ರಚೋದನೆ ನೀಡಿದವರನ್ನೂ ಸಹ ಬಂಧಿಸಬೇಕು. ಅಲ್ಲದೇ ಸಭಾಪತಿಗಳ ಗಮನಕ್ಕೂ ತರದೆ ಏಕಾಏಕಿ ಸಿ.ಟಿ. ರವಿ ಅವರನ್ನು ಬಂಧಿಸಿದ್ದು ಅಕ್ಷಮ್ಯ ಅಪರಾಧ. ಅವರು ಗಾಯವಾಗಿದ್ದರೂ ಆಸ್ಪತ್ರೆಗೆ ಕರೆದುಕೊಂಡು ಹೋಗದೇ ರಾತ್ರಿಯೆಲ್ಲಾ 400-500 ಕಿ.ಮೀ ಸುತ್ತಾಡಿಸಿ ಬೆಂಗಳೂರಿನ ನ್ಯಾಯಾಲಯಕ್ಕೆ ಹಾಜರು ಪಡಿಸುತ್ತೇವೆ ಎಂದು ಗದಗ, ರಾಮದುರ್ಗ ಸೇರಿ ಎಲ್ಲಾ ಪೊಲೀಸ್ ಸ್ಟೇಷನ್ ಸುತ್ತಾಡಿಸಿ ದ್ವೇಷ ಹಾಗೂ ಕೀಳುಮಟ್ಟದ ರಾಜಕೀಯ ಮಾಡುವ ಮೂಲಕ ಪ್ರಜಾಪ್ರಭುತ್ವಕ್ಕೆ ಕೊಳ್ಳಿ ಇಡಲು ಹೊರಟಿರುವ ಕಾಂಗ್ರೆಸ್ ಸರ್ಕಾರದ ನಡೆ ಖಂಡಿಸಲಾಯಿತು.
ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಪ್ರತಿಪಕ್ಷ ನಾಯಕ ಆರ್. ಅಶೋಕ್, ಉಪ ನಾಯಕ ಅರವಿಂದ ಬೆಲ್ಲದ್, ರಾಜ್ಯ ಪ್ರಧಾನ ಕಾರ್ಯದರ್ಶಿ ವಿ. ಸುನಿಲ್ ಕುಮಾರ್, ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್, ಮಾಜಿ ಶಾಸಕ ಸಂಜಯ್ ಪಾಟೀಲ್, ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ್, ಗೀತಾ ಸುತಾರ್, ಸತೀಶ್ ಅಪ್ಪಾಜಿಗೋಳ ಸೇರಿದಂತೆ ಪದಾಧಿಕಾರಿಗಳು, ಪ್ರಮುಖರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು