10:58 AM Monday21 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ಸಿ.ಟಿ. ರವಿ ಬಂಧನ: ಬೆಳಗಾವಿಯಲ್ಲಿ ಬಿಜೆಪಿಯಿಂದ ಭಾರೀ ಪ್ರತಿಭಟನೆ

20/12/2024, 22:22

ಬೆಳಗಾವಿ(reporterkarnataka.com): ಮಾಜಿ ಸಚಿವ ಹಾಗೂ ವಿಧಾನ ಪರಿಷತ್ ಸದಸ್ಯ ಸಿ. ಟಿ.ರವಿ ಅವರ ಬಂಧನ ಖಂಡಿಸಿ ಬಿಜೆಪಿಯಿಂದ ಬೆಳಗಾವಿಯ ಚನ್ನಮ್ಮ ವೃತ್ತದ ಬಳಿ ಪ್ರತಿಭಟನೆ ನಡೆಸಲಾಯಿತು.


ಸುವರ್ಣಸೌಧದೊಳಕ್ಕೆ ನುಗ್ಗಿ ಕೆಲವು ಕಾಂಗ್ರೆಸ್ ಪುಡಾರಿಗಳು, ರೌಡಿಗಳು ದಾಂಧಲೆ ನಡೆಸಿದವರು ಹಾಗೂ ನಡುರಸ್ತೆಯಲ್ಲಿ ಹಲ್ಲೆ ಮಾಡಲು ಪ್ರಚೋದನೆ ನೀಡಿದವರನ್ನೂ ಸಹ ಬಂಧಿಸಬೇಕು. ಅಲ್ಲದೇ ಸಭಾಪತಿಗಳ ಗಮನಕ್ಕೂ ತರದೆ ಏಕಾಏಕಿ ಸಿ.ಟಿ. ರವಿ ಅವರನ್ನು ಬಂಧಿಸಿದ್ದು ಅಕ್ಷಮ್ಯ ಅಪರಾಧ. ಅವರು ಗಾಯವಾಗಿದ್ದರೂ ಆಸ್ಪತ್ರೆಗೆ ಕರೆದುಕೊಂಡು ಹೋಗದೇ ರಾತ್ರಿಯೆಲ್ಲಾ 400-500 ಕಿ.ಮೀ ಸುತ್ತಾಡಿಸಿ ಬೆಂಗಳೂರಿನ ನ್ಯಾಯಾಲಯಕ್ಕೆ ಹಾಜರು ಪಡಿಸುತ್ತೇವೆ ಎಂದು ಗದಗ, ರಾಮದುರ್ಗ ಸೇರಿ ಎಲ್ಲಾ ಪೊಲೀಸ್ ಸ್ಟೇಷನ್ ಸುತ್ತಾಡಿಸಿ ದ್ವೇಷ ಹಾಗೂ ಕೀಳುಮಟ್ಟದ ರಾಜಕೀಯ ಮಾಡುವ ಮೂಲಕ ಪ್ರಜಾಪ್ರಭುತ್ವಕ್ಕೆ ಕೊಳ್ಳಿ ಇಡಲು ಹೊರಟಿರುವ ಕಾಂಗ್ರೆಸ್ ಸರ್ಕಾರದ ನಡೆ ಖಂಡಿಸಲಾಯಿತು.
ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಪ್ರತಿಪಕ್ಷ ನಾಯಕ ಆರ್. ಅಶೋಕ್, ಉಪ ನಾಯಕ ಅರವಿಂದ ಬೆಲ್ಲದ್, ರಾಜ್ಯ ಪ್ರಧಾನ ಕಾರ್ಯದರ್ಶಿ ವಿ. ಸುನಿಲ್ ಕುಮಾರ್, ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್, ಮಾಜಿ ಶಾಸಕ ಸಂಜಯ್ ಪಾಟೀಲ್, ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ್, ಗೀತಾ ಸುತಾರ್, ಸತೀಶ್ ಅಪ್ಪಾಜಿಗೋಳ ಸೇರಿದಂತೆ ಪದಾಧಿಕಾರಿಗಳು, ಪ್ರಮುಖರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು