3:17 PM Friday30 - January 2026
ಬ್ರೇಕಿಂಗ್ ನ್ಯೂಸ್
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ಉದ್ಘಾಟನೆ ಕೊಡಗು: ಮುಂದುವರಿದ ಆನೆ- ಮಾನವ ಸಂಘರ್ಷ; ಕಾಡಾನೆ ದಾಳಿಗೆ ಕಾರ್ಮಿಕ ಬಲಿ ಆರ್ಥಿಕ ಬೆಳವಣಿಗೆಗೆ ಕೇಂದ್ರದ ಆರ್ಥಿಕ ನೀತಿಗಳೇ ಕಾರಣ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ನಮ್ಮ ಸರ್ಕಾರ ಯಾರ ಪೋನ್ ಟ್ಯಾಪ್ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ ಕನ್ನಡ ಭಾಷೆ ಎಂದರೆ ಹಲವು ಆಯಾಮಗಳ ಸಾಧ್ಯತೆ: ಪುರುಷೋತ್ತಮ ಬಿಳಿಮಲೆ 600ಕ್ಕೂ ಹೆಚ್ಚು ಜಿಟಿಸಿಸಿ ವಿದ್ಯಾರ್ಥಿಗಳಿಗೆ ಉದ್ಯೋಗ ನೀಡಲಿರುವ ರ‍್ಯಾಂಗ್‌ಸನ್ಸ್‌ ಏರೋಸ್ಪೇಸ್, ​​ಎಕ್ಸೈಡ್ ಎನರ್ಜಿ ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ…

ಇತ್ತೀಚಿನ ಸುದ್ದಿ

ನಂಜನಗೂಡು: ಅಯ್ಯಪ್ಪ ಸ್ವಾಮಿ ಉತ್ಸವ, ಬೃಹತ್ ಅನ್ನ ಸಂತರ್ಪಣೆ

21/12/2024, 13:01

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಚಿಕ್ಕ ಶಬರಿಮಲೆ ಎಂದೇ ಕರೆಯಲ್ಪಡುವ ದಕ್ಷಿಣ ಕಾಶಿ ನಂಜನಗೂಡಿನ ಕಪಿಲಾ ನದಿ ತೀರದಲ್ಲಿರುವ ಪವಿತ್ರ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ನಡೆಯುತ್ತಿರುವ 27ನೇ ಬ್ರಹ್ಮೋತ್ಸವದ ಅಂಗವಾಗಿ ಶ್ರೀ ಅಯ್ಯಪ್ಪ ಸ್ವಾಮಿಯವರ ಮೆರವಣಿಗೆ ಹಾಗೂ ಬೃಹತ್ ಅನ್ನಸಂತರ್ಪಣೆ ಕಾರ್ಯಕ್ರಮವು ಸಡಗರ ಸಂಭ್ರಮ ಹಾಗೂ ಶ್ರದ್ಧಾಭಕ್ತಿಯಿಂದ ನೆರವೇರಿತು.
ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದಿಂದ ತಂದ ಅಲಂಕೃತ ಶ್ರೀ ಅಯ್ಯಪ್ಪ ಸ್ವಾಮಿ ಉತ್ಸವ ಮೂರ್ತಿಯನ್ನು ಕುದುರೆ ಸಾರೋಟು ಮಾದರಿಯಲ್ಲಿರುವ ಮಂಟಪದಲ್ಲಿ ಕೂರಿಸಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಯಿತು. ಸಾವಿರಾರು ಭಕ್ತರ ಹರ್ಷೋದ್ಗಾರದೊಂದಿಗೆ ಗುರುಸ್ವಾಮಿಗಳು ಕರ್ಪೂರ ಹಚ್ಚಿ ಈಡು ಗಾಯಿ ಹೊಡೆದು ಪುಷ್ಪಾರ್ಚನೆ ಮಾಡುವ ಮೂಲಕ ಮೆರವಣಿಗೆಗೆ ಚಾಲನೆ ನೀಡಿದರು.


ಮೆರವಣಿಗೆಯಲ್ಲಿ ಮಂಗಳವಾದ್ಯ, ಕೇರಳದ ಪ್ರಸಿದ್ಧ ಚಂಡೇವಾದ್ಯ, ತಮಟೆ ವಾದ್ಯ, ಬ್ಯಾಂಡ್ ವಾದನ,ವೀರಗಾಸೆ ಕುಣಿತ, ಪೂಜಾ ಕುಣಿತ, ನವಿಲು ಕುಣಿತ, ಹುಲಿ ವೇಷ, ಗಾರುಡಿಗೊಂಬೆ ಸೇರಿದಂತೆ ವಿವಿಧ ಜಾನಪದ ಕಲಾತಂಡಗಳು ಭಾಗವಹಿಸಿ ಮೆರವಣಿಗೆಯಲ್ಲಿ ಮೆರುಗು ತಂದವು. ಇದಕ್ಕೂ ಮುನ್ನ ಬೆಳಗ್ಗೆ 10 ಗಂಟೆಯಿಂದಲೇ ಬೃಹತ್ ಅನ್ನ ಸಂತರ್ಪಣೆ ಪ್ರಾರಂಭವಾಗಿ ಸಂಜೆ ಐದು ಗಂಟೆವರೆಗೂ ಸುಮಾರು 10,000ಕ್ಕೂ ಹೆಚ್ಚು ಭಕ್ತರು ಪಾಲ್ಗೊಂಡು ಪ್ರಸಾದ ಸ್ವೀಕರಿಸಿದರು.
ದೇವಾಲಯದ ವತಿಯಿಂದ ದೊಡ್ಡ ದೊಡ್ಡ ಕೊಪ್ಪರಿಕೆಗಳಲ್ಲಿ ಅನ್ನ, ಸಾಂಬಾರ್, ಹುಳಿ, ಪಾಯಸ, ರೈಸ್ ಬಾತ್, ಬೋಂದಿ ಪ್ರಸಾದವನ್ನು ತಯಾರು ಮಾಡಲಾಗಿತ್ತು.
ತಯಾರಾದ ಬೃಹತ್ ಪ್ರಸಾದಕ್ಕೆ ಸುಕ್ಷೇತ್ರ ಶ್ರೀ ಮಲ್ಲನ ಮೂಲೆಮಠದ ಕಿರಿಯ ಶ್ರೀಗಳು ಸೇರಿದಂತೆ ದೇವಾಲಯದ ಗುರುಸ್ವಾಮಿ ಗಳು ಪೂಜೆ ಸಲ್ಲಿಸಿದರು.
ಬಳಿಕ ಗುರುಸ್ವಾಮಿ ಗಳಾದ ದೇವರಾಜಸ್ವಾಮಿಗಳು ಸೇರಿದಂತೆ ಕೆಲವು ದಾನಿಗಳು ಭಕ್ತರಿಗೆ ಸಿಹಿ ಬಡಿಸುವ ಮೂಲಕ ಬೃಹತ್ ಅನ್ನ ಸಂತರ್ಪಣೆಗೆ ಚಾಲನೆ ನೀಡಿದರು.
ನಂಜನಗೂಡು ಪಟ್ಟಣವು ಸೇರಿದಂತೆ ರಾಜ್ಯದ ವಿವಿಧಡೆಯಿಂದ ಸಾವಿರಾರು ಅಯ್ಯಪ್ಪ ಭಕ್ತರು ಅನ್ನ ಸಂತರ್ಪಣೆ ಹಾಗೂ ಮೆರವಣಿಗೆ ಕಾರ್ಯದಲ್ಲಿ ಭಾಗವಹಿಸಿ ತಮ್ಮ ಭಕ್ತಿ ಭಾವ ಮೆರೆದರು.
ಬಳಿಕ ಗುರುಸ್ವಾಮಿಗಳಾದ ದೇವರಾಜ ಸ್ವಾಮಿ ಮಾತನಾಡಿ ಕಾರ್ಯಕ್ರಮದ ಬಗ್ಗೆ ವಿವರಿಸಿ ಇಂದು ದೇವಾಲಯದಲ್ಲಿ ಬೃಹತ್ ಅನುಸಂಪರ್ಪಣೆ ನಡೆದು ಬಳಿಕ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಹಲವು ಜಾನಪದ ಕಲಾ ತಂಡಗಳೊಂದಿಗೆ ಶ್ರೀ ಅಯ್ಯಪ್ಪ ಸ್ವಾಮಿಯವರ ಮೆರವಣಿಗೆಯನ್ನು ಅದ್ದೂರಿಯಾಗಿ ಮಾಡಲಾಗುವುದು. ಮೆರವಣಿಗೆ ಮುಗಿದ ಬಳಿಕ ಸಾಯಂಕಾಲ ಕಪಿಲಾ ನದಿಯಲ್ಲಿ ಸ್ವಾಮಿಯವರ ತೆಪ್ಪೋತ್ಸವವು ನಡೆಯಲಿದೆ. ಹಾಗೆಯೇ 24ರಂದು ಮೈಸೂರಿನಿಂದ ನಂಜನಗೂಡಿಗೆ ಪಾದಯಾತ್ರೆ, ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಾರ್ಯಕ್ರಮದ ಬಗ್ಗೆ ವಿವರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು