8:17 AM Sunday21 - June 2026
ಬ್ರೇಕಿಂಗ್ ನ್ಯೂಸ್
ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ…

ಇತ್ತೀಚಿನ ಸುದ್ದಿ

ರಾಜಕಾರಣ ಕಲುಷಿತಗೊಂಡು ದ್ವೇಷದ ರಾಜಕಾರಣ ಹೆಚ್ಚಿದೆ; ಶುದ್ಧೀಕರಣ ಅಗತ್ಯವಿದೆ: ಸಭಾಪತಿ ಬಸವರಾಜ ಹೊರಟ್ಟಿ ಅಭಿಮತ

21/12/2024, 21:50

ಧಾರವಾಡ(reporterkarnataka.com): ಇಂದಿನ ರಾಜಕಾರಣ ಬಹಳ ಕಲುಷಿತಗೊಂಡು, ದ್ವೇಷದ ರಾಜಕಾರಣ ಹೆಚ್ಚಿದೆ. ಹಿಂದಿನ ಆದರ್ಶದ ರಾಜಕಾರಣಿಗಳು ಇಲ್ಲ. ರಾಜಕಾರಣ ಶುದ್ಧೀಕರಣಗೊಳ್ಳುವ ಅಗತ್ಯವಿದೆ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.
ನಗರದ‌ ಕರ್ನಾಟಕ ವಿದ್ಯಾವರ್ಧಕ ಸಂಘದ ನಾಡೋಜ ಡಾ.ಪಾಟೀಲ ಪುಟ್ಟಪ್ಪ ಭವನದಲ್ಲಿ ಶುಕ್ರವಾರ ನಡೆದ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಪತ್ರಕರ್ತರ ಶಂಕರ ಪಾಗೋಜಿ ವಿರಚಿತ ‘ಗಾಂಧಿ ಮಂದಿರ’ ಕಥಾ ಸಂಕಲನ ಬಿಡುಗಡೆಗೊಳಿಸಿ ಅವರು ಮಾತನಾಡಿದರು.


ಸಾರ್ವಜನಿಕರು ಎಲಿಯವರೆಗೂ ಹಣ ಪಡೆದು ಓಟ್ ಹಾಕುತ್ತಿರೋ, ಅಲ್ಲಿಯವರೆಗೂ ವ್ಯವಸ್ಥೆಯನ್ನು ಬದಲಾಣೆ ಮಾಡುವುದು ಅಸಾಧ್ಯ. ಈ ವ್ಯವಸ್ಥೆಯೊಂದಿಗೆ ಬದುಕುವ ಸಂದಿಗ್ಧೆ ಎದುರಾಗಿದೆ. ಹೀಗಾಗಿ ಹಣ ಪಡೆದು ಮತ ಹಾಕುವ ಕೆಟ್ಟ ಪ್ರವೃತ್ತಿ ಬಿಡಬೇಕು ಎಂದು ನೆರದ ಜನರಿಗೆ ಸಲಹೆ ನೀಡಿದರು.
ಜಗತ್ತಿನಲ್ಲಿ ಮಹಾತ್ಮ ಗಾಂಧೀಜಿ ಅತ್ಯಂತ ಶ್ರೇಷ್ಠ ವ್ಯಕ್ತಿ. ತಮ್ಮ ಮೈಮೇಲೆ ಬಟ್ಟೆ ಹಾಕದೆ, ಇಡೀ ದೇಶಕ್ಕಾಗಿ ಜೀವನ ಮುಡುಪು ಇಟ್ಟವರು. ಇಂತಹ ಅನೇಕ ಮಹನೀಯರ ಹೋರಾಟದ ಫಲದಿಂದ ಬಂದ ಸ್ವಾತಂತ್ರ್ಯ ದುರ್ಬಳಕೆಗೆ ವಿಷಾದಿಸಿದರಲ್ಲೇ, ಯುವಜನ ದೇಶ ಕಟ್ಟುವ ಕಾಯಕ ಮಾಡಲು ಹೇಳಿದರು.
ಬದಲಾದ ಕಾಲಘಟ್ಟದಲ್ಲಿ ಹಾಗೂ ಮೊಬೈಲ್ ಜಗತ್ತಿನಲ್ಲಿ ಪುಸ್ತಕ ಓದುವುದು ಹಾಗೂ ಪುಸಕ್ತ ಬರೆಯುವವರ ಸಂಖ್ಯೆಯೂ ಕಡಿಮೆ. ಕಲೆ, ಸಾಹಿತ್ಯ, ಸಂಗೀತ ಹೀಗೆ ಎಲ್ಲ ಕಲೆಗಳು ನಶಿಸುತ್ತಿವೆ. ಪತ್ರಕರ್ತ ಶಂಕರ ಪಾಗೋಜಿ ಒತ್ತಡದ ನಡುವೆಯೂ ಗಾಂಧಿ ಮಂದಿರ ಪುಸ್ತಕ ಬರೆದಿರುವುದು ಶ್ಲಾಘನೀಯ ಎಂದರು.
ಕೃತಿ ಪರಿಚಯಸಿದ ನಟರಾಜ ಮೂರಶಿಹಳ್ಳಿ, ಗಾಂಧಿ ಮಂದಿರ ಶಂಕರ ಪಾಗೋಜಿ ಅವರ ಬದುಕು -ಬರಹದ ಕುರಿತು 17 ಕಥೆಗಳು ಒಳಗೊಂಡಿದೆ. ಕೃತಿಯ ಬರಹದ ಭಾವ, ಸಂಸ್ಕೃತಿ, ಗ್ರಾಮೀಣರ ಜನಜೀವನ, ಅಂತರ್ ಜಾತಿ ಮತ್ತು ಪ್ರೇಮ ವಿವಾಹ ಚಿತ್ರಣ ಕೃತಿಯಲ್ಲಿ ಕಟ್ಟಿಕೊಟ್ಟ ಪ್ರಯತ್ನ ಅದ್ಭುತ ಎಂದರು.
ಸಾಹಿತಿಗಳನ್ನು ಪರಿಚಯಿಸುವ ಕೈಂಕರ್ಯ ಹೆಚ್ಚೆಚ್ಚು ನಡೆಬೇಕು. ಮುಖ್ಯವಾಗಿ ಯುವಜನ ಮೊಬೈಲ್ ಜಗತ್ತಿನಿಂದ ಹೊರಬಂದು, ಪುಸ್ತಕ ಓದುವ ಹವ್ಯಾದ ಬೆಳೆಸಿಕೊಂಡು ಜ್ಞಾನದ ಕ್ಷಿತಿಜ ಹೆಚ್ಚಿಸಿಕೊಳ್ಳಬೇಕು. ನಶಿಸುತ್ತಿರುವ ಸಂಸ್ಕೃತಿ, ಸಂಸ್ಕಾರ ಉಳಿಸುವಂತೆ ಕರೆ ನೀಡಿದರು.
ಬೆಂಗಳೂರಿನ ಸಿರಿವರ ಪ್ರಕಾಶನದ ಪ್ರಕಾಶಕ ರವೀಂದ್ರನಾಥ ಸಿರಿವರ, ಜಿಲ್ಲಾ ಕನ್ನಡ-ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ ಇದ್ದರು. ಕೃತಿಕಾರ ಶಂಕರ ಪಾಗೋಜಿ ಪ್ರಾಸ್ತಾವಿಕ ಸ್ವಾಗತಿಸಿ, ಮಾತನಾಡಿದರು. ಡಾ.ಬಸವರಾಜ ಹೊಂಗಲ್ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು