1:07 PM Saturday5 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಚಳ್ಳಕೆರೆ ಮೂಲ ಸೌಕರ್ಯ ಸಮಸ್ಯೆ: ನಗರಸಭೆ ಆಯುಕ್ತರಿಗೆ ಕರ್ನಾಟಕ ಯುವ ರಕ್ಷಣಾ ವೇದಿಕೆ ಮನವಿ

21/12/2024, 22:47

ಮುರುಡೇಗೌಡ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಕರ್ನಾಟಕ ಯುವ ರಕ್ಷಣಾ ವೇದಿಕೆ ಚಳ್ಳಕೆರೆ ತಾಲೂಕು ಸಮಿತಿ ವತಿಯಿಂದ ಶನಿವಾರ ನಗರಸಭಾ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು.
ಕರ್ನಾಟಕ ಯುವರಕ್ಷಣಾ ವೇದಿಕೆ ಅಧ್ಯಕ್ಷರ ಹಾಗೂ ಸಂಸ್ಥಾಪಕ ಸುನಿಲ್ ಎಂ.ಎಸ್. ಅವರು ಮನವಿ ಸಲ್ಲಿಸಿದರು.
ಇತ್ತೀಚಿನ ದಿನಗಳಲ್ಲಿ ಚಳ್ಳಕೆರೆ ವೈಜ್ಞಾನಿಕವಾಗಿ ಉತ್ತಮ ಮಟ್ಟ ಅಭಿವೃದ್ಧಿ ಹೊಂದಿದ್ದು ಇಲ್ಲಿನ ಅನೇಕ ಸಮಸ್ಯೆಗಳಾದ ನಗರದ ರಸ್ತೆಗಳು ಹಾಗೂ ನಾಮಫಲಕದ ಅಳವಡಿಕೆ ಮತ್ತು ನಗರ ಸ್ವಚ್ಛತೆ ಕಾಪಾಡುವುದು ಹಾಗೆ ಖಾಸಗಿ ಬಸ್ ನಿಲ್ದಾಣ ಅರ್ಧ ಕೆಲಸವಾಗಿ ನಿಂತಿದೆ. ಇದರಿಂದ ಸಾರ್ವಜನಿಕರಿಗೆ, ವಿದ್ಯಾರ್ಥಿಗಳಿಗೆ ಓಡಾಲು ತುಂಬಾ ಸಮಸ್ಯೆಯಾಗುತ್ತಿದೆ. ಸ್ವಚ್ಛತೆ ಇಲ್ಲದೆ ಅವ್ಯವಸ್ಥೆ ನಿರ್ಮಾಣವಾಗಿದೆ. ಹಾಗೆ ರೈತರ ಮಾರುಕಟ್ಟೆ ಅವ್ಯವಸ್ಥೆಯಿಂದ ಕೂಡಿದ್ದು ಮಾರುಕಟ್ಟೆಗೆ ಬರುವ ರೈತರು ತುಂಬಾ ಇರುಸು ಮರುಸು ಆಗಿದೆ. ಸುಖ ಸುಮ್ಮನೆ ಫ್ಲೆಕ್ಸ್ ಗಳನ್ನು ದಾರಿಗಳಿಗೆ ಅಡ್ಡಗಟ್ಟಿ ಹಾಕುತ್ತಿದ್ದಾರೆ. ದಯವಿಟ್ಟು ಸಮಸ್ಯೆಗಳನ್ನು ಶೀಘ್ರದಲ್ಲೇ ಬಗೆಹರಿಸಬೇಕೆಂದು ನಗರ ಆಯುಕ್ತರಿಗೆ ಮನವಿ ಅರ್ಪಿಸಿದರು.
ಚಿತ್ರದುರ್ಗದ ಜಿಲ್ಲಾಧ್ಯಕ್ಷ ಪಿ. ಮೋಹನ್ ಕುಮಾರ್, ಚಳ್ಳಕೆರೆ ತಾಲೂಕು ಅಧ್ಯಕ್ಷ ಮೈಲಾರ ಸ್ವಾಮಿ, ನಗರ ಘಟಕದ ಅಧ್ಯಕ್ಷ ಮಾರುತಿ ಜಿ., ತಾಲೂಕು ಪ್ರಧಾನ ಕಾರ್ಯದರ್ಶಿ ಹಾಲೇಶ್ ಯಾದವ್ ಬೆಳಗೆರೆ,
ಕಾರ್ಮಿಕ ಘಟಕದ ಅಧ್ಯಕ್ಷ ಉಪೇಂದ್ರ ಯಾದವ್,
ನಗರ ಸಹ ಕಾರದರ್ಶಿ ಶ್ರೀನಿವಾಸ್, ಕರ್ನಾಟಕ ರಕ್ಷಣಾ ವೇದಿಕೆ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು