2:18 PM Wednesday13 - August 2025
ಬ್ರೇಕಿಂಗ್ ನ್ಯೂಸ್
ಸ್ಮಶಾನ ಜಾಗ ಒತ್ತುವರಿ ಮಾಡಿಕೊಂಡಿರುವವರ ವಿರುದ್ಧ ಕ್ರಮ: ವಿಧಾನಸಭೆಯಲ್ಲಿ ಸಚಿವ ಕೃಷ್ಣ ಬೈರೇಗೌಡ ಬಂಡೀಪುರ: ಕಾಡಾನೆ ಜತೆ ಸೆಲ್ಫಿಗೆ ಹೋಗಿ ದಾಳಿಗೊಳಗಾಗಿದ್ದ ವ್ಯಕ್ತಿಗೆ 25 ಸಾವಿರ ರೂ.… ವಿಶ್ವ ವಿಖ್ಯಾತ ಮೈಸೂರು ದಸರಾ: ಗಜಪಡೆಯ ತೂಕ ಪರೀಕ್ಷೆ; ಯಾರ್ಯಾರು, ಎಷ್ಟೆಷ್ಟು ಕೆಜಿ? ವಿಧಾನ ಮಂಡಲ ಮುಂಗಾರು ಅಧಿವೇಶನ: ಧರ್ಮಸ್ಥಳ ಪ್ರಕರಣ ಪ್ರಸ್ತಾಪ; ಸನಾತನ ಧರ್ಮದ ಪಾವಿತ್ರ್ಯಕ್ಕೆ… ಬೆಂಗಳೂರು ಟೆಕ್ ಸಮ್ಮಿತ್-2025: 100ಕ್ಕೂ ಹೆಚ್ಚು ಕಂಪನಿಗಳ ಸಿಇಒಗಳ ಜತೆ ಮುಖ್ಯಮಂತ್ರಿ Breakfast… Kodagu | ವಿರಾಜಪೇಟೆ: ಚೆಂಬು ವ್ಯಾಪ್ತಿಯಲ್ಲಿ ಪುoಡಾನೆ ಸೆರೆಗೆ ಸರ್ಕಾರದ ಅನುಮತಿ; ತಂಡ… ಮೈಸೂರು -ಕೊಡಗು ಲೋಕಸಭೆ ಕ್ಷೇತ್ರದಲ್ಲೂ ಮತಗಳ್ಳತನ: ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಆರೋಪ Bangalore | ಆರ್.ವಿ. ರಸ್ತೆಯಿಂದ ಬೊಮ್ಮಸಂದ್ರಕ್ಕೆ: ಬೆಂಗಳೂರು ಮೆಟ್ರೋ 2ರ ಹಳದಿ ಮಾರ್ಗ… ಧರ್ಮಸ್ಥಳ: ಯೂಟ್ಯೂಬರ್ ಗಳ ಮೇಲೆ ಹಲ್ಲೆ ಪ್ರಕರಣ; 6 ಮಂದಿಯ ಬಂಧನ Bangalore | ಪ್ರಧಾನಿ ಮೋದಿಯವರ ಬೆಂಗಳೂರು ಕಾರ್ಯಕ್ರಮ; ಪ್ರತಿಪಕ್ಷದ ನಾಯಕ ಆರ್. ಅಶೋಕ್…

ಇತ್ತೀಚಿನ ಸುದ್ದಿ

ಚಳ್ಳಕೆರೆ ಮೂಲ ಸೌಕರ್ಯ ಸಮಸ್ಯೆ: ನಗರಸಭೆ ಆಯುಕ್ತರಿಗೆ ಕರ್ನಾಟಕ ಯುವ ರಕ್ಷಣಾ ವೇದಿಕೆ ಮನವಿ

21/12/2024, 22:47

ಮುರುಡೇಗೌಡ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಕರ್ನಾಟಕ ಯುವ ರಕ್ಷಣಾ ವೇದಿಕೆ ಚಳ್ಳಕೆರೆ ತಾಲೂಕು ಸಮಿತಿ ವತಿಯಿಂದ ಶನಿವಾರ ನಗರಸಭಾ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು.
ಕರ್ನಾಟಕ ಯುವರಕ್ಷಣಾ ವೇದಿಕೆ ಅಧ್ಯಕ್ಷರ ಹಾಗೂ ಸಂಸ್ಥಾಪಕ ಸುನಿಲ್ ಎಂ.ಎಸ್. ಅವರು ಮನವಿ ಸಲ್ಲಿಸಿದರು.
ಇತ್ತೀಚಿನ ದಿನಗಳಲ್ಲಿ ಚಳ್ಳಕೆರೆ ವೈಜ್ಞಾನಿಕವಾಗಿ ಉತ್ತಮ ಮಟ್ಟ ಅಭಿವೃದ್ಧಿ ಹೊಂದಿದ್ದು ಇಲ್ಲಿನ ಅನೇಕ ಸಮಸ್ಯೆಗಳಾದ ನಗರದ ರಸ್ತೆಗಳು ಹಾಗೂ ನಾಮಫಲಕದ ಅಳವಡಿಕೆ ಮತ್ತು ನಗರ ಸ್ವಚ್ಛತೆ ಕಾಪಾಡುವುದು ಹಾಗೆ ಖಾಸಗಿ ಬಸ್ ನಿಲ್ದಾಣ ಅರ್ಧ ಕೆಲಸವಾಗಿ ನಿಂತಿದೆ. ಇದರಿಂದ ಸಾರ್ವಜನಿಕರಿಗೆ, ವಿದ್ಯಾರ್ಥಿಗಳಿಗೆ ಓಡಾಲು ತುಂಬಾ ಸಮಸ್ಯೆಯಾಗುತ್ತಿದೆ. ಸ್ವಚ್ಛತೆ ಇಲ್ಲದೆ ಅವ್ಯವಸ್ಥೆ ನಿರ್ಮಾಣವಾಗಿದೆ. ಹಾಗೆ ರೈತರ ಮಾರುಕಟ್ಟೆ ಅವ್ಯವಸ್ಥೆಯಿಂದ ಕೂಡಿದ್ದು ಮಾರುಕಟ್ಟೆಗೆ ಬರುವ ರೈತರು ತುಂಬಾ ಇರುಸು ಮರುಸು ಆಗಿದೆ. ಸುಖ ಸುಮ್ಮನೆ ಫ್ಲೆಕ್ಸ್ ಗಳನ್ನು ದಾರಿಗಳಿಗೆ ಅಡ್ಡಗಟ್ಟಿ ಹಾಕುತ್ತಿದ್ದಾರೆ. ದಯವಿಟ್ಟು ಸಮಸ್ಯೆಗಳನ್ನು ಶೀಘ್ರದಲ್ಲೇ ಬಗೆಹರಿಸಬೇಕೆಂದು ನಗರ ಆಯುಕ್ತರಿಗೆ ಮನವಿ ಅರ್ಪಿಸಿದರು.
ಚಿತ್ರದುರ್ಗದ ಜಿಲ್ಲಾಧ್ಯಕ್ಷ ಪಿ. ಮೋಹನ್ ಕುಮಾರ್, ಚಳ್ಳಕೆರೆ ತಾಲೂಕು ಅಧ್ಯಕ್ಷ ಮೈಲಾರ ಸ್ವಾಮಿ, ನಗರ ಘಟಕದ ಅಧ್ಯಕ್ಷ ಮಾರುತಿ ಜಿ., ತಾಲೂಕು ಪ್ರಧಾನ ಕಾರ್ಯದರ್ಶಿ ಹಾಲೇಶ್ ಯಾದವ್ ಬೆಳಗೆರೆ,
ಕಾರ್ಮಿಕ ಘಟಕದ ಅಧ್ಯಕ್ಷ ಉಪೇಂದ್ರ ಯಾದವ್,
ನಗರ ಸಹ ಕಾರದರ್ಶಿ ಶ್ರೀನಿವಾಸ್, ಕರ್ನಾಟಕ ರಕ್ಷಣಾ ವೇದಿಕೆ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು