12:36 AM Wednesday4 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ಚಳ್ಳಕೆರೆ ಮೂಲ ಸೌಕರ್ಯ ಸಮಸ್ಯೆ: ನಗರಸಭೆ ಆಯುಕ್ತರಿಗೆ ಕರ್ನಾಟಕ ಯುವ ರಕ್ಷಣಾ ವೇದಿಕೆ ಮನವಿ

21/12/2024, 22:47

ಮುರುಡೇಗೌಡ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಕರ್ನಾಟಕ ಯುವ ರಕ್ಷಣಾ ವೇದಿಕೆ ಚಳ್ಳಕೆರೆ ತಾಲೂಕು ಸಮಿತಿ ವತಿಯಿಂದ ಶನಿವಾರ ನಗರಸಭಾ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು.
ಕರ್ನಾಟಕ ಯುವರಕ್ಷಣಾ ವೇದಿಕೆ ಅಧ್ಯಕ್ಷರ ಹಾಗೂ ಸಂಸ್ಥಾಪಕ ಸುನಿಲ್ ಎಂ.ಎಸ್. ಅವರು ಮನವಿ ಸಲ್ಲಿಸಿದರು.
ಇತ್ತೀಚಿನ ದಿನಗಳಲ್ಲಿ ಚಳ್ಳಕೆರೆ ವೈಜ್ಞಾನಿಕವಾಗಿ ಉತ್ತಮ ಮಟ್ಟ ಅಭಿವೃದ್ಧಿ ಹೊಂದಿದ್ದು ಇಲ್ಲಿನ ಅನೇಕ ಸಮಸ್ಯೆಗಳಾದ ನಗರದ ರಸ್ತೆಗಳು ಹಾಗೂ ನಾಮಫಲಕದ ಅಳವಡಿಕೆ ಮತ್ತು ನಗರ ಸ್ವಚ್ಛತೆ ಕಾಪಾಡುವುದು ಹಾಗೆ ಖಾಸಗಿ ಬಸ್ ನಿಲ್ದಾಣ ಅರ್ಧ ಕೆಲಸವಾಗಿ ನಿಂತಿದೆ. ಇದರಿಂದ ಸಾರ್ವಜನಿಕರಿಗೆ, ವಿದ್ಯಾರ್ಥಿಗಳಿಗೆ ಓಡಾಲು ತುಂಬಾ ಸಮಸ್ಯೆಯಾಗುತ್ತಿದೆ. ಸ್ವಚ್ಛತೆ ಇಲ್ಲದೆ ಅವ್ಯವಸ್ಥೆ ನಿರ್ಮಾಣವಾಗಿದೆ. ಹಾಗೆ ರೈತರ ಮಾರುಕಟ್ಟೆ ಅವ್ಯವಸ್ಥೆಯಿಂದ ಕೂಡಿದ್ದು ಮಾರುಕಟ್ಟೆಗೆ ಬರುವ ರೈತರು ತುಂಬಾ ಇರುಸು ಮರುಸು ಆಗಿದೆ. ಸುಖ ಸುಮ್ಮನೆ ಫ್ಲೆಕ್ಸ್ ಗಳನ್ನು ದಾರಿಗಳಿಗೆ ಅಡ್ಡಗಟ್ಟಿ ಹಾಕುತ್ತಿದ್ದಾರೆ. ದಯವಿಟ್ಟು ಸಮಸ್ಯೆಗಳನ್ನು ಶೀಘ್ರದಲ್ಲೇ ಬಗೆಹರಿಸಬೇಕೆಂದು ನಗರ ಆಯುಕ್ತರಿಗೆ ಮನವಿ ಅರ್ಪಿಸಿದರು.
ಚಿತ್ರದುರ್ಗದ ಜಿಲ್ಲಾಧ್ಯಕ್ಷ ಪಿ. ಮೋಹನ್ ಕುಮಾರ್, ಚಳ್ಳಕೆರೆ ತಾಲೂಕು ಅಧ್ಯಕ್ಷ ಮೈಲಾರ ಸ್ವಾಮಿ, ನಗರ ಘಟಕದ ಅಧ್ಯಕ್ಷ ಮಾರುತಿ ಜಿ., ತಾಲೂಕು ಪ್ರಧಾನ ಕಾರ್ಯದರ್ಶಿ ಹಾಲೇಶ್ ಯಾದವ್ ಬೆಳಗೆರೆ,
ಕಾರ್ಮಿಕ ಘಟಕದ ಅಧ್ಯಕ್ಷ ಉಪೇಂದ್ರ ಯಾದವ್,
ನಗರ ಸಹ ಕಾರದರ್ಶಿ ಶ್ರೀನಿವಾಸ್, ಕರ್ನಾಟಕ ರಕ್ಷಣಾ ವೇದಿಕೆ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು