4:54 PM Tuesday22 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ…

ಇತ್ತೀಚಿನ ಸುದ್ದಿ

ಎಲ್ಲರನ್ನೂ ಒಳಗೊಳ್ಳುವ ಸಮಾಜ ನಿರ್ಮಿಸೋಣ: ಆರ್ಚ್ ಬಿಷಪ್ಸ್ ಹೌಸ್ ಕ್ರಿಸ್ಮಸ್ ಆಚರಣೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ

21/12/2024, 22:53

ಬೆಂಗಳೂರು(reporterkarnataka.com): ಎಲ್ಲರನ್ನೂ ಒಳಗೊಳ್ಳುವ ಸಮಾಜವನ್ನು ನಿರ್ಮಾಣ ಮಾಡೋಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.
ಅವರು ಇಂದು ಮಿಲ್ಲರ್ಸ್ ರಸ್ತೆಯ ಆರ್ಚ್ ಬಿಷಪ್ಸ್ ಹೌಸ್ ನ ಕ್ರಿಸ್ಮಸ್ ಆಚರಣೆಯಲ್ಲಿ ಭಾಗವಹಿಸಿ ಮಾತನಾಡಿದರು.
ಜಗತ್ತಿನಲ್ಲಿ ಹಾಗೂ ನಮ್ಮ ದೇಶದಲ್ಲಿ ಅನೇಕ ಧರ್ಮಗಳಿವೆ. ಎಲ್ಲಾ ಧರ್ಮಗಳ ಸಾರ ಮನುಷ್ಯರು ಒಂದೇ ಎನ್ನುವುದು. ಅವರ ಮಧ್ಯೆ ಯಾವುದೇ ಬೇಧ ಭಾವ ಇರದೆ ಪರಸ್ಪರ ಪ್ರೀತಿಸಿ ಗೌರವಿಸಬೇಕು ಎಂದರು.


*ಎಲ್ಲರನ್ನೂ ಸಮಾನವಾಗಿ ಕಾಣಬೇಕಿದೆ:*
ಎಲ್ಲರನ್ನೂ ಸಮಾನವಾಗಿ ಕಾಣುವ ವ್ಯವಸ್ಥೆ ನಮ್ಮ ಸಮಾಜದಲ್ಲಿ ನಿರ್ಮಾಣವಾಗಬೇಕು ಪ್ರತಿಯೊಬ್ಬ ಮಾನವನೂ ಕೂಡ ಇದನ್ನು ಅನುಸರಿಸಬೇಕು. ಹಿಂದೂ, ಕ್ರೈಸ್ತ, ಇಸ್ಲಾಂ, ಬೌದ್ಧ, ಜೈನ ಸೇರಿದಂತೆ ಎಲ್ಲಾ ಧರ್ಮಗಳೂ ಅದನ್ನೇ ಹೇಳುತ್ತವೆ. ಯಾವ ಧರ್ಮವೂ ಧ್ವೇಷವನ್ನು ಬೋಧಿಸುವುದಿಲ್ಲ ಎಂದು ಅವರು ನುಡಿದರು.
*ವೈವಿಧ್ಯತೆಯಲ್ಲಿ ಏಕತೆ ಕಾಣಬೇಕು:*
ಕ್ರೈಸ್ತ ಶಾಂತಿದೂತನಾಗಿ ಜನ್ಮತಾಳಿದನು. ಶಾಂತಿ ನೆಲಸಬೇಕಾದರೆ ಮನುಷ್ಯ ಇನ್ನೊಬ್ಬ ಮನುಷ್ಯನನ್ನು ಪ್ರೀತಿಸಬೇಕು. ದಯೆ ಇಲ್ಲದ ಧರ್ಮ ಯಾವುದಯ್ಯ ಎಂದು ಬಸವಣ್ಣ ಹೇಳಿದ್ದರು. ಇನ್ನೊಬ್ಬರ ಬಗ್ಗೆ ನಮಗೆ ದಯೆಯಿರಬೇಕು. ಅದನ್ನೇ ಕ್ರೈಸ್ತ ಧರ್ಮದವರು ಹೇಳುತ್ತಾರೆ. ಎಲ್ಲಾ ಧರ್ಮದವರನ್ನು ಗೌರವದಿಂದ ಕಾಣುವ ಮನಸ್ಥಿತಿಯನ್ನು ಬೆಳೆಸಿಕೊಳ್ಳಬೇಕು. ಆಗ ಮಾತ್ರ ವೈವಿಧ್ಯತೆಯಲ್ಲಿ ಏಕತೆಯನ್ನು ಕಾಣಲು ಸಾಧ್ಯ. ಭಾರತ ಬಹುತ್ವದ ದೇಶ. ಏಕ ಧರ್ಮ ಏಕ ದೇವರು, ಏಕ ಜಾತಿ ಇರಲು ಸಾಧ್ಯವಿಲ್ಲ ಅನೇಕ ಧರ್ಮ, ಭಾಷೆ , ಜಾತಿಗಳಿದ್ದು, ಇದರಲ್ಲಿಯೇ ಏಕತೆಯನ್ನು ಕಾಣಬೇಕಿದೆ. ಮನುಷ್ಯತ್ವ ಬಹಳ ಅವಶ್ಯಕ. ಕ್ರೈಸ್ತ ಧರ್ಮದವರು ಅದನ್ನೇ ಪ್ರತಿಪಾದಿಸುತ್ತಾರೆ ಎಂದರು.
ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ರಾಜ್ಯದ ಜನತೆಗೆ ಕ್ರಿಸ್ಮಸ್ ಹಬ್ಬದ ಶುಭಾಶಯಗಳನ್ನು ಕೋರಿದರು.
ಇಂಧನ ಸಚಿವ ಕೆ.ಜೆ.ಜಾರ್ಜ್, ಶಾಸಕ ರಿಜ್ವಾನ್ ಅರ್ಷದ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಆರ್ಚ್ ಬಿಷಪ್ ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು