2:14 PM Saturday25 - April 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್…

ಇತ್ತೀಚಿನ ಸುದ್ದಿ

ಕಲ್ಪತರ ನಾಡಿನಲ್ಲಿ 39ನೇ ರಾಜ್ಯ ಪತ್ರಕರ್ತರ ಸಮ್ಮೇಳನ: ಲಾಂಛನ ಬಿಡುಗಡೆ ಮಾಡಿದ ಸಿಎಂ ಸಿದ್ದರಾಮಯ್ಯ

21/12/2024, 23:44

ಬೆಂಗಳೂರು(reporterkarnataka.com): ಕಲ್ಪತರ ನಾಡು ತುಮಕೂರಿನಲ್ಲಿ ಜ.18 ಮತ್ತು 19 ರಂದು ನಡೆಯಲಿರುವ 39ನೇ ರಾಜ್ಯ ಪತ್ರಕರ್ತರ ಸಮ್ಮೇಳನದ ಲಾಂಛನವನ್ನು ಗೃಹ ಸಚಿವ ಜಿ.ಪರಮೇಶ್ವರ ಅವರ ಸಮ್ಮುಖದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಗೃಹ ಕಚೇರಿ ಕೃಷ್ಣಾದಲ್ಲಿ ಬಿಡುಗಡೆ ಮಾಡಿದರು.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಆಯೋಜಿಸುತ್ತಿರುವ ರಾಜ್ಯ ಸಮ್ಮೇಳನದ ಉದ್ಘಾಟನೆಗೆ ಆಗಮಿಸಬೇಕು ಎಂದು ಸ್ವಾಗತ ಸಮಿತಿ ಅಧ್ಯಕ್ಷರು ಮತ್ತು ಗೃಹ ಸಚಿವರಾದ ಜಿ.ಪರಮೇಶ್ವರ್ ಅವರು ಆಹ್ವಾನಿಸಿದಾಗ ಮುಖ್ಯಮಂತ್ರಿಗಳು ಸಮ್ಮತಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಕಳೆದ ಬಾರಿಯೂ ಸಮ್ಮೇಳನ ಉದ್ಘಾಟನೆಗೆ ಬಂದಿದ್ದೇನೆ. ಈ ಬಾರಿಯೂ ಬರುತ್ತೇನೆ. ಸಮ್ಮೇಳನಕ್ಕೆ ಅಗತ್ಯವಾದ ಸಹಕಾರವನ್ನು ನೀಡುತ್ತೇನೆ ಎಂದು ತಿಳಿಸಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು, ಡಿಸೆಂಬರ್‌ನಲ್ಲಿ ಸಮ್ಮೇಳನ ಮಾಡಲು ಉದ್ದೇಶಿಸಲಾಗಿತ್ತು. ತಾವು ನೀಡಿದ ಸಲಹೆ ಹಿನ್ನೆಲೆಯಲ್ಲಿ ಜನವರಿ ತಿಂಗಳಲ್ಲಿ ಸಮ್ಮೇಳನ ಆಯೋಜಿಸಲು ನಿರ್ಧರಿಸಲಾಯಿತು ಎಂದು ಹೇಳಿದಾಗಲೂ ಪ್ರತಿಕ್ರಿಯಿಸಿದ ಸಿಎಂ, ಪತ್ರಕರ್ತರ ಸಮ್ಮೇಳನ ಚೆನ್ನಾಗಿ ಆಯೋಜಿಸಿ. ಚರ್ಚೆಗಳಾಗಲಿ. ಖಂಡಿತವಾಗಿ ಬರುತ್ತೇನೆ ಎಂದರು.
ಇದೇ ಸಂದರ್ಭದಲ್ಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅವರನ್ನು ಆಹ್ವಾನಿಸಲಾಯಿತು.


ಈ ಸಂದರ್ಭದಲ್ಲಿ ತುಮಕೂರು ಜಿಲ್ಲಾ ಘಟಕದ ಅಧ್ಯಕ್ಷ ಚಿ.ನಿ.ಪುರುಶೋತ್ತಮ್, ಪ್ರಧಾನ ಕಾರ್ಯದರ್ಶಿ ರಘುರಾಮ್, ರಾಷ್ಟ್ರೀಯ ಮಂಡಳಿ ಸದಸ್ಯರಾದ ಡಿ.ಎಂ.ಸತೀಶ್, ಟಿ.ಎನ್.ಮಧುಕರ್, ಅನು ಶಾಂತರಾಜು, ಜಿಲ್ಲಾ ಪದಾಧಿಕಾರಿಗಳಾದ ಸತೀಶ್ ಹಾರೋಗೆರೆ, ಪರಮೇಶ್, ಯಶಸ್, ಹರೀಶ್ ಆಚಾರ್ಯ, ಕೆ.ವಿ.ಪುರುಷೋತ್ತಮ ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು