11:41 PM Wednesday17 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ: ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ

22/12/2024, 16:13

*371 J ಕೊಡುಗೆಯಾಗಿ 371 ಬೆಡ್ ಗಳ ಆಸ್ಪತ್ರೆ: ಸಿಎಂ*

ಕಲಬುರಗಿ(reporterkarnataka.com): ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ ರಚಿಸುವ ಉದ್ದೇಶ ಇದೆ. ಉತ್ತರ ಕರ್ನಾಟಕ ವಿಮೋಚನಾ ದಿನದಂದೇ ಈ ಬಗ್ಗೆ ಹೇಳಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪುನರುಚ್ಚರಿಸಿದರು.
ಕಲಬುರಗಿ ವಿಮಾನ ನಿಲ್ದಾಣದಲ್ಲಿ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದರು‌.
ಉತ್ತರ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ ಬೇಕು ಎನ್ನುವ ಬೇಡಿಕೆ ಬಹಳ ವರ್ಷಗಳಿಂದ ಇದೆ. ಪ್ರತ್ಯೇಕ ಸಚಿವಾಲಯ ಮಾಡುವ ಉದ್ದೇಶ ನಮಗೆ ಇದೆ ಎಂದರು.
*ತೊಗರಿ ಪ್ಯಾಕೇಜ್:*
ತೊಗರಿಗೆ ಪ್ರತ್ಯೇಕ ಪ್ಯಾಕೇಜ್ ಘೋಷಿಸಿ ಎನ್ನುವ ಬೇಡಿಕೆ ರೈತರಿಂದ ಇದೆ. ತೊಗರಿ ಬೆಳೆ ಸ್ಥಿತಿ ಗತಿ ಕುರಿತ ವರದಿ ಕೇಳಿದ್ದೇವೆ. ಈ ವರದಿ ಬಂದ ಬಳಿಕ ಆ ಬಗ್ಗೆ ಸೂಕ್ತ. ನಿರ್ಧಾರ ಕೈಗೊಳ್ಳಲಾಗುವುದು ಎಂದರು.
*ಜಯದೇವ ಮಹತ್ವದ ಹೆಜ್ಜೆ:* ಕಲ್ಯಾಣ ಕರ್ನಾಟಕದ ಆರೋಗ್ಯ ವ್ಯವಸ್ಥೆಯಲ್ಲಿ ಇಂದು ಉದ್ಘಾಟನೆಗೊಳ್ಳಲಿರುವ ಜಯದೇವ ಆಸ್ಪತ್ರೆ ಮಹತ್ವದ್ದು. ರಾಜ್ಯ ಸಭೆ ಪ್ರತಿಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರ ಹೋರಾಟದ ಫಲವಾಗಿ 371J ಜಾರಿಯಾಗಿದೆ. ಇಲ್ಲಿ 371 ಬೆಡ್ ಗಳ ಆಸ್ಪತ್ರೆಯನ್ನು ಇಂದು ಉದ್ಘಾಟಿಸುತ್ತಿದ್ದೇವೆ ಎಂದರು.
*ಸಿ.ಟಿ.ರವಿ ಮಾತು ಕ್ರಿಮಿನಲ್ ಅಪರಾಧ:*
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಸಿ.ಟಿ.ರವಿ ಬಳಸಿದ ಪದ ಅತ್ಯಂತ ಅನಾಗರಿಕವಾದದ್ದು. ಇದು ಕ್ರಿಮಿನಲ್ ಅಪರಾಧ. ಬಿಜೆಪಿಯ ರಾಷ್ಟ್ರೀಯ ಪದಾಧಿಕಾರಿ ಆಗಿದ್ದ ರವಿ ಬಾಯಲ್ಲಿ ಇಂಥಾ ಮಾತು ನಾಚಿಕೆಗೇಡಿನದ್ದು. ಇತರೆ ವಿಧಾನ ಪರಿಷತ್ ಸದಸ್ಯರು ರವಿ ಆ ಪದ ಬಳಸಿರುವುದನ್ನು ಕೇಳಿಸಿಕೊಂಡಿದ್ದಾರೆ. ರವಿ ಅತ್ಯಂತ ತುಚ್ಚವಾಗಿ ಮಾತಾಡಿರುವುದು ಸತ್ಯ ಎಂದು ಒಪ್ಪಿಕೊಂಡಿದ್ದಾರೆ ಎಂದು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು