7:49 PM Monday7 - July 2025
ಬ್ರೇಕಿಂಗ್ ನ್ಯೂಸ್
Kodagu | 19 ವರ್ಷದಲ್ಲಿ ದಾಖಲೆ ಸೃಷ್ಟಿಸಿದ ಹಾರಂಗಿ ಡ್ಯಾಮ್: ಜಲಾಶಯಕ್ಕೆ ಹರಿದು… Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು

ಇತ್ತೀಚಿನ ಸುದ್ದಿ

ಮಂಜೇಶ್ವರ ಸ್ನೇಹಾಲಯ ಸೈಕೊ ಸೋಶಿಯಲ್ ಪುನರ್ವಸತಿ ಕೇಂದ್ರದಲ್ಲಿ “ಸ್ನೇಹ ಮಿಲನ-2024 “

23/12/2024, 12:43

ಮಂಗಳೂರು(reporterkarnataka.com): ಮಂಜೇಶ್ವರ ಸ್ನೇಹಾಲಯ ಸೈಕೊ ಸೋಶಿಯಲ್ ಪುನರ್ವಸತಿ ಕೇಂದ್ರದಲ್ಲಿ “ಸ್ನೇಹ ಮಿಲನ-2024 ” ಎಂಬ ಕ್ರಿಸ್‌ಮಸ್ ಕಾರ್ಯಕ್ರಮವನ್ನು ಡಿಸೆಂಬರ್ 21ರಂದು ಆಚರಿಸಲಾಯಿತು. ಸ್ನೇಹಾಲಯದ ವಾರ್ಷಿಕ ಕ್ರಿಸ್‌ಮಸ್ ಆಚರಣೆಯು ನಿವಾಸಿಗಳಲ್ಲಿ ಹೊಸ ಉತ್ಸಾಹವನ್ನು ಜೀವಂತವಾಗಿರಿಸಿತು. ಕಾರ್ಯಕ್ರಮದಲ್ಲಿ ಕಾಸರಗೋಡು ಜಿಲ್ಲಾ ಪೊಲೀಸ್ ಮುಖ್ಯಸ್ಥರಾದ ಶಿಲ್ಪಾ ದ್ಯಾವಯ್ಯ, ಮಂಗಳೂರಿನ ವೆನ್ಲಾಕ್ ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಶಸ್ತ್ರಚಿಕಿತ್ಸಕರು ಹಾಗೂ ಅಧೀಕ್ಷಕರಾದ ಡಾ.ಶಿವಪ್ರಕಾಶ್ ಡಿ.ಎಸ್. ಸೇರಿದಂತೆ ಗೌರವಾನ್ವಿತ ಅತಿಥಿಗಳು ಉಪಸ್ಥಿತರಿದ್ದರು.


ಹೊಸಂಗಡಿಯ ಇನ್‌ಫೆಂಟ್ ಜೀಸಸ್ ಚರ್ಚ್‌ನ ಧರ್ಮಗುರು ಫಾ. ಲೋಯಸ್ ಮರಿಯದಾಸ್, ಸ್ನೇಹಾಲಯದ ನಿವಾಸಿ ಗುರುಗಳಾದ ಫಾ. ಸಿರಿಲ್ ಡಿ ಸೋಜಾ, ಫಾರ್ಚೂನ್ ಲೈಫ್ ವೆಲ್ತ್ ಪ್ರೈವೇಟ್ ಲಿಮಿಟೆಡ್ ದೆಹಲಿ, ನಿರ್ದೇಶಕರಾದ ಮತ್ತು PTI ಕನ್ಸಲ್ಟೆನ್ಸಿ ಬಾಂಬೆಯ ಮಾಲೀಕರಾದ ಶ್ರೀ ಜೋಸೆಫ್ ಇಲಿಯಾಸ್ ಮಿನೇಜಸ್ ಮತ್ತು ಮಂಗಳೂರಿನ ಪ್ರೇರಕ ಭಾಷಣಕಾರರಾದ ರಫೀಕ್ ಮಾಸ್ಟರ್ ಸಂಭ್ರಮದ ಗೌರವ ಅತಿಥಿಗಳಾಗಿದ್ದರು. ಮಂಗಳೂರಿನ ಜಿಜಿ100 ಕೋರಸ್ ತಂಡ ಸುಂದರ ಕ್ರಿಸ್ಮಸ್ ಸಂಗೀತದೊಂದಿಗೆ ಸಭಿಕರನ್ನು ರಂಜಿಸಿತು.
ಕಾರ್ಯಕ್ರಮವನ್ನು ಜಿಯೋ ಡಿಸಿಲ್ವಾ ನಿರೂಪಿಸಿದರು. ಸ್ನೇಹಾಲಯದ ಕಾರ್ಯನಿರ್ವಾಹಕ ನಿರ್ದೇಶಕರಾದ ಜೋಸೆಫ್ ಕ್ರಾಸ್ತಾ ಕಾರ್ಯಕ್ರಮಕ್ಕೆ ಎಲ್ಲರನ್ನು ಆತ್ಮೀಯವಾಗಿ ಸ್ವಾಗತಿಸಿ, ಪ್ರಸ್ತಾವಿಕ ನುಡಿಗಳ ಜೊತೆ ಸಂಭ್ರಮಕ್ಕೆ ಚಾಲನೆ ನೀಡಿದರು.
ಅತಿಥಿಗಳು ಕ್ರಿಸ್ಮಸ್ ಕೇಕ್ ಕತ್ತರಿಸಿ ಸಾಂತಕ್ಲೋಸ್ ಸಮ್ಮುಖದಲ್ಲಿ ಎಲ್ಲರಿಗೂ ಸಿಹಿ ಹಂಚಿದರು. ಕಾರ್ಯದರ್ಶಿ ಕಮ್ ಟ್ರಸ್ಟಿ ಒಲಿವಿಯಾ ಕ್ರಾಸ್ತಾ ವಂದಿಸಿದರು. ಇದು ಹೃದಯಸ್ಪರ್ಶಿ ಮತ್ತು ಸಂತೋಷದಾಯಕ ಆಚರಣೆಯಾಗಿದ್ದು, ಹಾಜರಿದ್ದ ಎಲ್ಲರ ಮುಖದಲ್ಲಿ ನಗುವನ್ನು ತಂದಿತು. ಪ್ರತಿಯೋರ್ವ ಅತಿಥಿಯರ ಅಮೋಘ ಸಂದೇಶ ಮಾನಾವಿಯತೆ, ದಾನ, ಪ್ರೀತಿ, ಸಮಾಜಿಕ ನ್ಯಾಯ ಹಾಗೂ ಹಂಚುವಿಕೆ ಬಗ್ಗೆ ಇದ್ದು ಸ್ನೇಹಾಲಯದ ಕೆಲಸವನ್ನು ಶ್ಲಾಫೀಸಿ ಹೊಗಳಿದರು. ಕ್ರಿಸ್ಮಸ್ ಹೊಸ ಅಲೆಯನ್ನು ಪರಿಸರದಲ್ಲಿ ಸೃಷ್ಠಿಸಿತು.

ಇತ್ತೀಚಿನ ಸುದ್ದಿ

ಜಾಹೀರಾತು