3:18 PM Thursday26 - March 2026
ಬ್ರೇಕಿಂಗ್ ನ್ಯೂಸ್
ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್…

ಇತ್ತೀಚಿನ ಸುದ್ದಿ

ಸಿ.ಟಿ.ರವಿ ವಿರುದ್ಧ ಕಾನೂನು ಸಮರ; ಪ್ರಧಾನಿ, ರಾಷ್ಟ್ರಪತಿಗೂ ದೂರು ನೀಡುವೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

23/12/2024, 23:05

* *ಸಿಎಂ‌, ಡಿಸಿಎಂ ಸೇರಿದಂತೆ ಧೈರ್ಯ ತುಂಬಿದ ಪಕ್ಷದ ಹಲವು ನಾಯಕರು*
*
* *ಸಿ.ಟಿ.ರವಿ ಹೇಳಿಕೆ ವಿಡಿಯೋ ಬಿಡುಗಡೆ ಮಾಡಿದ ಸಚಿವರು*


ಬೆಳಗಾವಿ(reporterkarnataka.com):
ಬಿಜೆಪಿ ಎಂಎಲ್ಸಿ ಸಿ.ಟಿ.ರವಿ ನಿಂದನೆ ಮಾತುಗಳಿಂದ ತುಂಬಾ ನೊಂದಿದ್ದೇನೆ. ಸಿ.ಟಿ.ರವಿ ವಿರುದ್ಧ ಕಾನೂನು ಸಮರ ಮುಂದುವರಿಸುತ್ತೇನೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಬೆಳಗಾವಿಯ ಸಿಪಿಎಡ್ ಮೈದಾನದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಎರಡು ದಿನ ಮೌನಕ್ಕೆ ಶರಣಾಗಿದ್ದೆ. ನನಗೆ ಬಹಳಷ್ಟು ನೋವಾಗಿತ್ತು. ಕಳೆದ 26 ವರ್ಷಗಳಿಂದ ಸಂಘರ್ಷದಿಂದ ಮೇಲೆ ಬಂದಿದ್ದೇನೆ. ನಾನೇನು ರೆಡ್ ಕಾರ್ಪೆಟ್ ಮೇಲೆ ಬಂದಿಲ್ಲ ಎಂದರು. ‌
ಘಟನೆ ಬಳಿಕ ಸಿ.ಟಿ.ರವಿ ಹಾರ ತುರಾಯಿ ಹಾಕಿಸಿಕೊಂಡು ವೈಭವಿಕರಿಸಿಕೊಳ್ಳುತ್ತಿದ್ದಾರೆ.
ಅವರಿಗೆ ಅಪರಾಧಿ ಭಾವನೆ ಕಾಡುತ್ತಿದೆ. ನಾನು ಮತ್ತೆ ಸಭಾಪತಿ ಅವರಿಗೆ ದೂರು ಕೊಡುತ್ತೇನೆ.‌ ಸಿ.ಟಿ. ರವಿ ವಿರುದ್ಧ ಹೋರಾಟ ಮುಂದುವರಿಸುವೆ. ಪೊಲೀಸ್ ತನಿಖೆ ಬೇಗ ಆಗಬೇಕು. ಎಫ್ ಎಸ್ ಎಲ್ ವರದಿ ಬೇಗ ಬಹಿರಂಗವಾಗಬೇಕು.
ಇಂಥ ಸಂದರ್ಭದಲ್ಲೂ ಬಿಜೆಪಿಯವರು ಸಿ.ಟಿ ರವಿ ಬೆನ್ನಿಗೆ ನಿಂತಿದ್ದಾರೆ ಎಂದು ಸಚಿವರು ಕಿಡಿ ಕಾರಿದರು.
ಸಿ.ಟಿ.ರವಿ ಅವರಿಗೆ ಏನಾಗಿದೆ ಗಾಯ, ಎಷ್ಟಾಗಿದೆ ಗಾಯ. ಪೊಲೀಸರು ಎನ್ ಕೌಂಟರ್ ಮಾಡುತ್ತಿದ್ದರು, ಅಂತಾರಲ್ಲಾ, ನಾಚಿಕೆ ಆಗಲ್ವ ನಿಮಗೆ. ಇಡೀ ಕರ್ನಾಟಕದ ಜನತೆ ನಿಮಗೆ ಛೀಮಾರಿ ಹಾಕುತ್ತಿದ್ದಾರೆ. ಕಾನೂನು ಪ್ರಕಾರ ಪೊಲೀಸರು ಏನು ಮಾಡಬೇಕು ಅದನ್ನು ಮಾಡಿದ್ದಾರೆ. ಪ್ರಕರಣದ ದಾರಿ ತಪ್ಪಿಸುವ ಕೆಲಸವನ್ನು ಬಿಜೆಪಿಯವರು ಮಾಡುತ್ತಿದ್ದಾರೆ. ಸಿ.ಟಿ.ರವಿ ವಿರುದ್ಧ ಪ್ರಧಾನಿ, ರಾಷ್ಟ್ರಪತಿಗೂ ಪತ್ರ ಬರೆಯುತ್ತೇನೆ, ಸಾಧ್ಯವಾದರೆ ಭೇಟಿಯಾಗುತ್ತೇನೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
*ಸಿ.ಟಿ ರವಿ ಆಡಿದ ಮಾತಿರುವ ವಿಡಿಯೋ ರಿಲೀಸ್ ಮಾಡಿದ ಸಚಿವೆ:*
ಬಿಜೆಪಿ ವಿಧಾನ ಪರಿಷತ್‌ ಸದಸ್ಯ ಸಿ.ಟಿ ರವಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ವಿರುದ್ಧ ಬಳಸಿದ ಅಶ್ಲೀಲ ಪದ ಬಳಕೆಯ ವಿಡಿಯೋವನ್ನು ಸಚಿವರು ಮಾಧ್ಯಮಗಳ ಎದುರು ಬಿಡುಗಡೆ ಮಾಡಿದರು. ಎರಡು ಪ್ರತ್ಯೇಕ ‌ವಿಡಿಯೋಗಳನ್ನು ಸಚಿವರು ರಿಲೀಸ್ ಮಾಡಿದರು. ಒಂದು ವಿಡಿಯೋದಲ್ಲಿ ಸಿ.ಟಿ. ರವಿ ಸಚಿವರಿಗೆ ಆಕ್ಷೇಪಾರ್ಹ ಪದ ಬಳಸಿದ್ದರೆ, ಮತ್ತೊಂದು ವಿಡಿಯೋದಲ್ಲಿ ರಾಹುಲ್ ಗಾಂಧಿಗೆ ಡ್ರಗ್ ಅಡಿಟ್ ಅಂದಿದ್ದ ವಿಡಿಯೋವನ್ನು ಸಚಿವರು ಬಿಡುಗಡೆ ಮಾಡಿದರು. ‌
* *ಸಿಎಂ, ಡಿಸಿಎಂ ಸೇರಿದಂತೆ ಪಕ್ಷದ ನಾಯಕರಿಂದ ಧೈರ್ಯ:*
ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಸೇರಿದಂತೆ ಪಕ್ಷದ ಹಲವು ನಾಯಕರು ನನಗೆ ಧೈರ್ಯ ತುಂಬಿದರು ಎಂದರು.
ಸಿ.ಟಿ.ರವಿ ಬೆಳಗಾವಿ ಚಲೋ ಮಾಡುವ ಬಗ್ಗೆ ಕೇಳಿದಾಗ,
‌ಬೆಳಗಾವಿ ಶಾಂತಿಯ ತೋಟ. ನಾಲಿಗೆಯನ್ನು ಸ್ವಚ್ಛವಾಗಿಟ್ಟುಕೊಂಡು ಇಲ್ಲಿಗೆ ಯಾರು ಬೇಕಾದರೂ ಬರಬಹುದು. ಅಂತಹ ವ್ಯಕ್ತಿಗಳಿಗೆ ತುಂಬು ಹೃದಯದ ಸ್ವಾಗತ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು