4:32 PM Friday28 - November 2025
ಬ್ರೇಕಿಂಗ್ ನ್ಯೂಸ್
Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ… ಶಾಲೆಯಂಗಳದಲ್ಲಿ ತಾರಾಲಯ: ಗ್ರಾಮೀಣ ಮಕ್ಕಳಲ್ಲಿ ಖಗೋಳ ವಿಜ್ಞಾನ ಕೌತುಕ ಬಿತ್ತುವ ಗುರಿ; ಮುಖ್ಯಮಂತ್ರಿ… Bhadravathi | ಪತಿಯ ಕಿರುಕುಳ: ಡೆತ್ ನೋಟ್ ಬರೆದು ನಾಲೆಗೆ ಹಾರಿ ನವ… ವಿದ್ಯುತ್ ಲಿಂಕ್ ಲೈನ್‌ ಸ್ಥಾಪಿಸಿ, ಸಮರ್ಪಕ ವಿದ್ಯುತ್ ಪೂರೈಕೆಗೆ ಆದ್ಯತೆ: ಸಚಿವ ಕೆ.ಜೆ.ಜಾರ್ಜ್ ಹೂವುಗಳ ಹರಾಜು ಪ್ರಕ್ರಿಯೆ ಮಾದರಿಯಲ್ಲಿ ಔಷಧೀಯ ಗಿಡಮೂಲಿಕೆಗಳ ಹರಾಜು ಅವಶ್ಯಕ: ಮುಖ್ಯ ಕಾರ್ಯದರ್ಶಿ… ಟೈಯರ್ ಸ್ಫೋಟ: ನಿಯಂತ್ರಣ ಕಳೆದುಕೊಂಡು ಪಿಕ್ ಅಪ್ ಪಲ್ಟಿ; ಚಾಲಕನಿಗೆ ತೀವ್ರ ಗಾಯ

ಇತ್ತೀಚಿನ ಸುದ್ದಿ

ಸಿಡಿ ಬಿತ್ತಿದ್ದೇ ಹಾಸನ ಜಿಲ್ಲೆಗೆ ಕಾಂಗ್ರೆಸ್ ಕೊಟ್ಟ ಕೊಡುಗೆ: ಡಿಸಿಎಂ ಡಿಕೆಶಿಗೆ ತಿರುಗೇಟು ಕೊಟ್ಟ ಕೇಂದ್ರ ಸಚಿವ ಕುಮಾರಸ್ವಾಮಿ

23/12/2024, 23:39

ಹಾಸನ(reporterkarnataka.com): ಜಿಲ್ಲೆಗೆ ದೇವೇಗೌಡರ ಕುಟುಂಬದ ಕೊಡುಗೆ ಏನು ಎಂದು ಕೇಳಿರುವ ಡಿಸಿಎಂ ಡಿ‌.ಕೆ.ಶಿವಕುಮಾರ್‌ಗೆ ತಿರುಗೇಟು ನೀಡಿರುವ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು; ಹಾಗಾದರೆ ಈ ಜಿಲ್ಲೆಗೆ ಕಾಂಗ್ರೆಸ್ ನಾಯಕರ ಕೊಡುಗೆ ಏನು? ಎಂದು ಕೇಳಿದ್ದಾರೆ.
ಹರದನಹಳ್ಳಿಯಲ್ಲಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಕೇಂದ್ರ ಸಚಿವರು,
ಕಾಂಗ್ರೆಸ್ ನಾಯಕರ ಕೊಡುಗೆ ಅದೆಂತಹದ್ದು ಎನ್ನುವುದು ನನಗೆ ಗೊತ್ತಿದೆ. ಸಿಡಿ ಬಿಟ್ರಲ್ಲಾ, ಅದೇ ತಾನೇ ಹಾಸನ ಜಿಲ್ಲೆಗೆ ಕಾಂಗ್ರೆಸ್ ನವರ ಕೊಡುಗೆ? ಅದು ಬಿಟ್ಟು ಹಾಸನ ಜಿಲ್ಲೆಗೆ ಅವರು ಏನು ಕೊಟ್ಟಿದ್ದಾರೆ? ಇವತ್ತು ಹಾಸನ ಜಿಲ್ಲೆ ಅಭಿವೃದ್ಧಿ ಕಂಡಿದ್ದರೆ ದೇವೇಗೌಡರು, ರೇವಣ್ಣ ಹಾಗೂ ನಾನು ಮುಖ್ಯಮಂತ್ರಿ ಇದ್ದಾಗ ಆಗಿದ್ದು. ನಾನು ನನ್ನದೇ ಆದಂತಹ ಜವಾಬ್ದಾರಿ ನಿರ್ವಹಣೆ ಮಾಡಿದ್ದೇನೆ. ಇವರೇನು ಕೊಟ್ಟಿದ್ದಾರೆ, ಹಾಸನದ ಫ್ಲೈ ಓವರ್ ರೆಡಿ ಮಾಡಲು ಆಗಲಿಲ್ಲ ಇವರ ಯೋಗ್ಯತೆಗೆ ಎಂದು ಕುಮಾರಸ್ವಾಮಿ ಅವರು ಟಾಂಗ್ ಕೊಟ್ಟರು.
ನಾವೇನಾದರೂ ಸಾರ್ವಜನಿಕ ಸಂಪತ್ತನ್ನು ಲೂಟಿ ಮಾಡಿ ಸಾಕ್ಷಿಗುಡ್ಡೆಗಳನ್ನು ನಿರ್ಮಾಣ ಮಾಡಿದರೆ ತೋರಿಸಬಹುದಿತ್ತು. ಅವರು ಸಾರ್ವಜನಿಕರ ಆಸ್ತಿ, ಸರ್ಕಾರದ ಆಸ್ತಿ, ಪ್ರಕೃತಿಯನ್ನು ಲೂಟಿ ಹೊಡೆದಿರುವುದಕ್ಕೆ ಸಾಕ್ಷಿ ಇದೆ. ನಾವು ಎಲ್ಲಿಂದ ತರೋದು ಸಾಕ್ಷಿ ಗುಡ್ಡೆನಾ? ಎಂದು ಆಕ್ರೋಶ ವ್ಯಕ್ತಪಡಿಸಿದರು ಕೇಂದ್ರ ಸಚಿವರು.

ಇತ್ತೀಚಿನ ಸುದ್ದಿ

ಜಾಹೀರಾತು