1:41 PM Friday15 - May 2026
ಬ್ರೇಕಿಂಗ್ ನ್ಯೂಸ್
ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ… ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ: ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ…

ಇತ್ತೀಚಿನ ಸುದ್ದಿ

ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ ಖಂಡಿಸಿ ಡಿ. 28ರಂದು ಯಡಿಯಾಲದಲ್ಲಿ ಪ್ರತಿಭಟನೆ: ದಸಂಸ

24/12/2024, 15:53

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಡಾ. ಅಂಬೇಡ್ಕರ್ ಅವರ ಬಗ್ಗೆ ಅಸಹನೆ ಮತ್ತು ದ್ವೇಷದ ಮಾತುಗಳನ್ನಾಡಿರುವ ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ಅವರನ್ನು ಸಂಸದ ಸ್ಥಾನದಿಂದ ವಜಾಗೊಳಿಸಿ ದೇಶದ್ರೋಹ ಮತ್ತು ಯುಎಪಿಎ ಕಾಯ್ದೆಯಡಿ ಬಂಧಿಸುವಂತೆ ಒತ್ತಾಯಿಸಿ ಡಿಸೆಂಬರ್ 28 ರಂದು ನಂಜನಗೂಡು ತಾಲೂಕಿನ ಯಡಿಯಾಲ ಗ್ರಾಮದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ದಸಂಸ ಮುಖಂಡರಾದ ಕುಮಾರ್ ಕಳಲೆ ಹಾಗೂ ಕೃಷ್ಣಮೂರ್ತಿ ಕಂದೇಗಾಲ ಹೇಳಿದರು.
ಇಂದು ತಾಲೂಕು ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು.


ದೇಶದ ಕಾನೂನು ವ್ಯವಸ್ಥೆ ಕಾಪಾಡುವ ಗೃಹ ಮಂತ್ರಿಯಾಗಿದ್ದುಕೊಂಡೇ ಈ ರೀತಿ ಹೇಳಿಕೆ ನೀಡುತ್ತಿದ್ದಾರೆ. ಇಂಥವರ ಬೆಂಬಲಕ್ಕೆ ಪಿಎಂ ನರೇಂದ್ರ ಮೋದಿ ಹಾಗೂ ಬಿಜೆಪಿ ನಿಂತಿರುವುದನ್ನು ನಮ್ಮ ದಲಿತ ಸಂಘರ್ಷ ಸಮಿತಿ ಖಂಡಿಸುತ್ತದೆ ಎಂದರು.
ಕೂಡಲೇ ಅಮಿತ್ ಶಾ ಅವರನ್ನು ಬಂಧಿಸಿ ಅವರನ್ನು ಗಡಿಪಾರು ಮಾಡುವಂತೆ ಒತ್ತಾಯಿಸಿ ಡಿಸೆಂಬರ್ 28ರಂದು ದಲಿತಪರ, ರೈತಪರ, ಪ್ರಗತಿಪರ ಸಂಘಟನೆಗಳು ಸೇರಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಪತ್ರಿಕಾಗೋಷ್ಠಿಯ ಬಗ್ಗೆ ನುಡಿದರು.
ಶಿವರಾಜು, ಪುಟ್ಟ ಬುದ್ಧಿ, ಮಹದೇವಸ್ವಾಮಿ, ಕೃಷ್ಣ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು