1:41 PM Friday15 - May 2026
ಬ್ರೇಕಿಂಗ್ ನ್ಯೂಸ್
ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ… ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ: ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ…

ಇತ್ತೀಚಿನ ಸುದ್ದಿ

ಸಿ.ಟಿ. ರವಿ ಪ್ರಕರಣ ಸಿಐಡಿ ತನಿಖೆಗೆ ಒಪ್ಪಿಸಲಾಗಿದೆ; ಹೇಳಿಕೆ ನೀಡುವುದು ಸರಿಯಲ್ಲ: ಗೃಹ ಸಚಿವ ಡಾ. ಪರಮೇಶ್ವರ್

24/12/2024, 16:11

ಹುಬ್ಬಳ್ಳಿ(reporterkarnataka.com): ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಪ್ರಕರಣವನ್ನು ಈಗಾಗಲೇ ಸಿಐಡಿ ತನಿಖೆಗೆ ಒಪ್ಪಿಸಲಾಗಿದ್ದು, ತನಿಖೆ ನಡೆಯುವಾಗ ನಾವು ಹೇಳಿಕೆಗಳನ್ನು ನೀಡುವುದು ಸರಿಯಲ್ಲ ಎಂದು ಗೃಹ ಸಚಿವ ಜಿ. ಪರಮೇಶ್ವರ್​ ಹೇಳಿದರು.
ಸಿ ಟಿ ರವಿ ಪ್ರಕರಣ ಮುಗಿದ ಅಧ್ಯಾಯ ಎಂಬ ಸ್ಪೀಕರ್ ಹೇಳಿಕೆಗೆ ನಗರದ ವಿಮಾನ ನಿಲ್ದಾಣದಲ್ಲಿ ಇಂದು ಮಾಧ್ಯಮ ಜತೆ ಮಾತನಾಡಿದ ಅವರು, ಸ್ಪೀಕರ್ ಅವರು ತಮ್ಮ ಕೆಲಸ ತಾವು ಮಾಡುತ್ತಿದ್ದಾರೆ. ಪೊಲೀಸರು ತಮ್ಮ ಕರ್ತವ್ಯ ನಿರ್ವಹಿಸುತ್ತಾರೆ. ಅಲ್ಲಿಯ ಸಾಧಕ ಬಾಧಕಗಳನ್ನು ನೋಡಿಕೊಂಡು ಹೇಳಿಕೆ ಕೊಟ್ಟಿರಬಹುದು. ಕಾನೂನು ಪ್ರಕ್ರಿಯೆ ನಡೆಯುವಾಗ ಕೆಲವು ವಿಳಂಬವಾಗಬಹುದು. ಆದರೆ, ತನಿಖೆಯನ್ನು ಸರಿಯಾಗಿ ಮಾಡಬೇಕಾಗುತ್ತೆ. ಪ್ರಕರಣದ ಸತ್ಯಾಸತ್ಯತೆ ನೋಡಬೇಕಿದೆ ಎಂದರು.
ಪೊಲೀಸ್ ಇಲಾಖೆ ಜವಾಬ್ದಾರಿಯುತ ಇಲಾಖೆ. ಸಿಎಂ ಅಥವಾ ಗೃಹ ಸಚಿವರ ಆದೇಶವನ್ನು ಮಾತ್ರ ಪೊಲೀಸರು ಪಾಲನೆ ಮಾಡುತ್ತಾರೆ. ಬೇರೆ ಯಾರೇ ಆದೇಶ ಮಾಡಿದ್ರೂ ಅದನ್ನು ಪಾಲನೆ ಮಾಡಲ್ಲ. ಅವರಿವರು ಆರೋಪ ಮಾಡುತ್ತಾರೆ ಅಂತಾ ನಾವು ಇಲಾಖೆ ನಡೆಸೋಲ್ಲ. ಕಾನೂನು ಚೌಕಟ್ಟಿನಲ್ಲಿ ನಾವು ಕೆಲಸ ಮಾಡುತ್ತೇವೆ ಎಂದು ಗೃಹ ಸಚಿವರು ನುಡಿದರು.
ಪರಮೇಶ್ವರ್​ ಅಸಮರ್ಥ ಗೃಹ ಸಚಿವ ಎಂಬ ಜೋಶಿಯವರ ಲೇವಡಿ ವಿಚಾರವಾಗಿ ತಿರುಗೇಟು ನೀಡಿ, ಪ್ರಹ್ಲಾದ್ ಜೋಶಿಯವರು ಅಸಮರ್ಥ ಕೇಂದ್ರ ಸಚಿವ ಎಂದರೆ ಒಪ್ಪಿಕೊಳ್ಳುತ್ತಾರಾ? ಅವರಿಗೆ ನನ್ನ ಸಾಮರ್ಥ್ಯ ಗೊತ್ತಿಲ್ಲ. ಹಾಗಾಗಿ ಅವರು ಹಾಗೆ ಹೇಳಿದ್ದಾರೆಂದರು‌.
ಹಳೇ ಹುಬ್ಬಳ್ಳಿ ಪೊಲೀಸ್ ಇನ್ಸ್​ಪೆಕ್ಟರ್​ ಸುರೇಶ ಯಳ್ಳೂರ ಮೇಲೆ ಲೈಂಗಿಕ ಕಿರುಕುಳ ಆರೋಪ ವಿಚಾರವಾಗಿ, ಈ ಬಗ್ಗೆ ಪೊಲೀಸ್ ಆಯುಕ್ತರಿಂದ ಮಾಹಿತಿ ಪಡೆದುಕೊಳ್ಳುತ್ತೇನೆ. ಮಾಹಿತಿ ಪಡೆದು ಪೊಲೀಸ್ ಇನ್ಸ್​ಪೆಕ್ಟರ್ ತಪ್ಪು ಎಸಗಿದ್ದರೆ, ಅವರ ಮೇಲೆ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.
ಹುಬ್ಬಳ್ಳಿ-ಧಾರವಾಡ ಅವಳಿ ನಗರದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟ ವಿಚಾರವಾಗಿ ಪ್ರತಿಕ್ರಿಯಿಸಿ, ಈ ಬಗ್ಗೆ ರಿವ್ಯೂವ್ ಮಾಡುತ್ತೇನೆ. ಅದರಲ್ಲಿ ತಪ್ಪುಗಳು ಕಂಡುಬಂದಲ್ಲಿ ಸರಿ ಮಾಡುವೆ ಎಂದು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು