1:10 PM Monday10 - August 2026
ಬ್ರೇಕಿಂಗ್ ನ್ಯೂಸ್
ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ…

ಇತ್ತೀಚಿನ ಸುದ್ದಿ

ಸಿ.ಟಿ. ರವಿ ಪ್ರಕರಣ ಸಿಐಡಿ ತನಿಖೆಗೆ ಒಪ್ಪಿಸಲಾಗಿದೆ; ಹೇಳಿಕೆ ನೀಡುವುದು ಸರಿಯಲ್ಲ: ಗೃಹ ಸಚಿವ ಡಾ. ಪರಮೇಶ್ವರ್

24/12/2024, 16:11

ಹುಬ್ಬಳ್ಳಿ(reporterkarnataka.com): ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಪ್ರಕರಣವನ್ನು ಈಗಾಗಲೇ ಸಿಐಡಿ ತನಿಖೆಗೆ ಒಪ್ಪಿಸಲಾಗಿದ್ದು, ತನಿಖೆ ನಡೆಯುವಾಗ ನಾವು ಹೇಳಿಕೆಗಳನ್ನು ನೀಡುವುದು ಸರಿಯಲ್ಲ ಎಂದು ಗೃಹ ಸಚಿವ ಜಿ. ಪರಮೇಶ್ವರ್​ ಹೇಳಿದರು.
ಸಿ ಟಿ ರವಿ ಪ್ರಕರಣ ಮುಗಿದ ಅಧ್ಯಾಯ ಎಂಬ ಸ್ಪೀಕರ್ ಹೇಳಿಕೆಗೆ ನಗರದ ವಿಮಾನ ನಿಲ್ದಾಣದಲ್ಲಿ ಇಂದು ಮಾಧ್ಯಮ ಜತೆ ಮಾತನಾಡಿದ ಅವರು, ಸ್ಪೀಕರ್ ಅವರು ತಮ್ಮ ಕೆಲಸ ತಾವು ಮಾಡುತ್ತಿದ್ದಾರೆ. ಪೊಲೀಸರು ತಮ್ಮ ಕರ್ತವ್ಯ ನಿರ್ವಹಿಸುತ್ತಾರೆ. ಅಲ್ಲಿಯ ಸಾಧಕ ಬಾಧಕಗಳನ್ನು ನೋಡಿಕೊಂಡು ಹೇಳಿಕೆ ಕೊಟ್ಟಿರಬಹುದು. ಕಾನೂನು ಪ್ರಕ್ರಿಯೆ ನಡೆಯುವಾಗ ಕೆಲವು ವಿಳಂಬವಾಗಬಹುದು. ಆದರೆ, ತನಿಖೆಯನ್ನು ಸರಿಯಾಗಿ ಮಾಡಬೇಕಾಗುತ್ತೆ. ಪ್ರಕರಣದ ಸತ್ಯಾಸತ್ಯತೆ ನೋಡಬೇಕಿದೆ ಎಂದರು.
ಪೊಲೀಸ್ ಇಲಾಖೆ ಜವಾಬ್ದಾರಿಯುತ ಇಲಾಖೆ. ಸಿಎಂ ಅಥವಾ ಗೃಹ ಸಚಿವರ ಆದೇಶವನ್ನು ಮಾತ್ರ ಪೊಲೀಸರು ಪಾಲನೆ ಮಾಡುತ್ತಾರೆ. ಬೇರೆ ಯಾರೇ ಆದೇಶ ಮಾಡಿದ್ರೂ ಅದನ್ನು ಪಾಲನೆ ಮಾಡಲ್ಲ. ಅವರಿವರು ಆರೋಪ ಮಾಡುತ್ತಾರೆ ಅಂತಾ ನಾವು ಇಲಾಖೆ ನಡೆಸೋಲ್ಲ. ಕಾನೂನು ಚೌಕಟ್ಟಿನಲ್ಲಿ ನಾವು ಕೆಲಸ ಮಾಡುತ್ತೇವೆ ಎಂದು ಗೃಹ ಸಚಿವರು ನುಡಿದರು.
ಪರಮೇಶ್ವರ್​ ಅಸಮರ್ಥ ಗೃಹ ಸಚಿವ ಎಂಬ ಜೋಶಿಯವರ ಲೇವಡಿ ವಿಚಾರವಾಗಿ ತಿರುಗೇಟು ನೀಡಿ, ಪ್ರಹ್ಲಾದ್ ಜೋಶಿಯವರು ಅಸಮರ್ಥ ಕೇಂದ್ರ ಸಚಿವ ಎಂದರೆ ಒಪ್ಪಿಕೊಳ್ಳುತ್ತಾರಾ? ಅವರಿಗೆ ನನ್ನ ಸಾಮರ್ಥ್ಯ ಗೊತ್ತಿಲ್ಲ. ಹಾಗಾಗಿ ಅವರು ಹಾಗೆ ಹೇಳಿದ್ದಾರೆಂದರು‌.
ಹಳೇ ಹುಬ್ಬಳ್ಳಿ ಪೊಲೀಸ್ ಇನ್ಸ್​ಪೆಕ್ಟರ್​ ಸುರೇಶ ಯಳ್ಳೂರ ಮೇಲೆ ಲೈಂಗಿಕ ಕಿರುಕುಳ ಆರೋಪ ವಿಚಾರವಾಗಿ, ಈ ಬಗ್ಗೆ ಪೊಲೀಸ್ ಆಯುಕ್ತರಿಂದ ಮಾಹಿತಿ ಪಡೆದುಕೊಳ್ಳುತ್ತೇನೆ. ಮಾಹಿತಿ ಪಡೆದು ಪೊಲೀಸ್ ಇನ್ಸ್​ಪೆಕ್ಟರ್ ತಪ್ಪು ಎಸಗಿದ್ದರೆ, ಅವರ ಮೇಲೆ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.
ಹುಬ್ಬಳ್ಳಿ-ಧಾರವಾಡ ಅವಳಿ ನಗರದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟ ವಿಚಾರವಾಗಿ ಪ್ರತಿಕ್ರಿಯಿಸಿ, ಈ ಬಗ್ಗೆ ರಿವ್ಯೂವ್ ಮಾಡುತ್ತೇನೆ. ಅದರಲ್ಲಿ ತಪ್ಪುಗಳು ಕಂಡುಬಂದಲ್ಲಿ ಸರಿ ಮಾಡುವೆ ಎಂದು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು