9:29 AM Saturday17 - January 2026
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.…

ಇತ್ತೀಚಿನ ಸುದ್ದಿ

ವಿದ್ಯಾರ್ಥಿಗಳಿಗೆ ಉಚಿತವಾಗಿ ಗುರುತಿನ ಚೀಟಿ, ಅಂಕ ಪಟ್ಟಿ ಲೇಖನಿ, ನೂತನ ವರ್ಷದ ಕ್ಯಾಲೆಂಡರ್ ವಿತರಣೆ

24/12/2024, 22:12

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ಶಾಲೆಗಾಗಿ ನಾವು ಇದ್ದೇವೆ, ವಿದ್ಯಾರ್ಥಿಗಳನ್ನು ಶೈಕ್ಷಣಿಕ ಪ್ರಗತಿಯತ್ತ ಕೊಂಡೊಯ್ಯುವುದು ಶಿಕ್ಷಕರ ಜವಾಬ್ದಾರಿ ಎಂದು ಎ.ಪಿ.ಜೆ ಅಬ್ದುಲ್ ಕಲಾಂ ವೆಲ್‌ಫೇರ್ ಟ್ರಸ್ಟ್ ಅಧ್ಯಕ್ಷ ಅಬ್ದುಲ್ ಮುಜೀದ್ ಹೇಳಿದರು.
ಪಟ್ಟಣದ ಜಡ್.ಹೆಚ್.ಮೊಹುಲ್ಲಾ ದ ಸರ್ಕಾರಿ
ಉರ್ದು ಹಾಗೂ ಇಂಗ್ಲೀಷ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ಎ.ಪಿ.ಜೆ ಅಬ್ದುಲ್ ಕಲಾಂ ವೆಲ್‌ಫೇರ್ ಟ್ರಸ್ಟ್ ವತಿಯಿಂದ ವಿದ್ಯಾರ್ಥಿಗಳಿಗೆ ಉಚಿತವಾಗಿ ಗುರುತಿನ ಚೀಟಿ ಹಾಗೂ ಅಂಕ ಪಟ್ಟಿ ಲೇಖನಿ ಮತ್ತು ನೂತನ ವರ್ಷದ ಕ್ಯಾಲೆಂಡರ್ ವಿತರಿಸಿ ಮಾತನಾಡಿದರು.
ಪೋಷಕರು ತಮ್ಮ ಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ಕಳುಹಿಸಬೇಕು. ಸರ್ಕಾರಿ ಶಾಲೆಯಲ್ಲಿ ಉತ್ತಮ ಶಿಕ್ಷಣ ಸಿಗುತ್ತಿದ್ದು, ಶಾಲೆಯಲ್ಲಿ ಕಂಪ್ಯೂಟರ್ ಶಿಕ್ಷಣವನ್ನು ಹೇಳಿಕೊಡಲಾಗುತ್ತಿದ್ದು, ವಿದ್ಯಾರ್ಥಿಗಳ ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಮನವಿ ಮಾಡಿದರು.
ಖಜಾಂಚಿ ಎ.ಟಿ.ಎಸ್. ರಿಜ್ವಾನ್ ಮಾತನಾಡಿ ಈ ಶಾಲೆಯಲ್ಲಿ ೧೭೫ ವಿದ್ಯಾರ್ಥಿಗಳು ಇದ್ದು ಶಾಲಾ ಕೊಠಡಿಗಳ ಕೊರತೆ ಇದ್ದು, ಈ ಸಂಬಂದ ಶಿಕ್ಷಣ ಸಚಿವರಿಗೆ ಕೊಠಡಿಗಳನ್ನು ಸರ್ಕಾರದಿಂದ ನಿರ್ಮಿಸಿ ಕೊಡಲು ಅಹವಾಲನ್ನು ನೀಡಿದ್ದೇನೆ ಎಂದು ಮಾಹಿತಿ ನೀಡಿದರು. ಅಧಿಕಾರಿಗಳು ಸ್ಥಳ ಪರಿಶೀಲಿಸಿ ಶಾಲೆಗೆ ಶೈಕ್ಷಣಿಕ ಮುನ್ನೆಡಿಸಿಕೊಡಬೇಕು ಎಂದು ಮನವಿ ಮಾಡಿದರು.
ಉಪಾಧ್ಯಕ್ಷ ಇಲಿಯಾಜ್ ಪಾಷ, ಸಂಘನಾ ಕಾರ್ಯದರ್ಶಿ ಇಂತಿಯಾಜ್, ಕಾರ್ಯದರ್ಶಿ ಅಕ್ರಂಪಾಷ, ಸದಸ್ಯರಾದ ಹಿದಾಯುತುಲ್ಲಾ ಖಾನ್, ಅಲ್ಲಾಬಕಷ್, ಎಸ್‌ಡಿಎಂಸಿ ಅಧ್ಯಕ್ಷ ಹಿದಾಯುತುಲ್ಲಾ ಖಾನ್, ಉಪಾಧ್ಯಕ್ಷ ಸಫೀನಾ, ಮುಖ್ಯ ಶಿಕ್ಷಕ ಮಹ್ಮದ್ ಸಾಧಿಕ್, ಶಿಕ್ಷಕರಾದ ರಿಹಾನಖಾನಮ್, ಅಸ್ಮಸುಲ್ತಾನ , ಭಾರತಮ್ಮ, ನುಸ್ರಕ್ ಅಮ್ಮಾಜಾನ್, ಗುಲ್ ಅಬ್ ಷ, ಕುಬ್ರಾಐಮನ್ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು