12:45 AM Tuesday24 - March 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ ರಷ್ಯಾದಿಂದ ಮಂಗಳೂರಿಗೆ ಕಚ್ಚಾತೈಲ ತಂದ ಹಡಗು: ಅನ್‌ಲೋಡಿಂಗ್‌ ಆರಂಭ; ಎಂಆರ್‌ಪಿಎಲ್‌ಗೆ ರವಾನೆ ಶುರು ವಿರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯ ಚೆಂಬೆಬೆಳ್ಳೂರು ಗ್ರಾಮದಲ್ಲಿ ಒಂಟಿ ಸಲಗ ಸೆರೆ ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್…

ಇತ್ತೀಚಿನ ಸುದ್ದಿ

ಮೂಡಿಗೆರೆಯಲ್ಲಿ ಕಟ್ಟಡಕ್ಕೆ ಬೆಂಕಿ; ಶ್ರೀರಾಮ್ ಫೈನಾನ್ಸ್ ಕಚೇರಿಗೆ ಬಹುತೇಕ ಹಾನಿ

25/12/2024, 10:48

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆ ಪಟ್ಟಣದ ಮೇಗಲಪೇಟೆ ಕೆನರಾ ಬ್ಯಾಂಕ್ ಇರುವ ಪಾರ್ವತಿ ಹೈಟ್ಸ್ ಕಟ್ಟಡಕ್ಕೆ ಆಕಸ್ಮಿಕ ಬೆಂಕಿ ತಗುಲಿದ್ದು, ಕಟ್ಟಡದಲ್ಲಿದ್ದ ಕೆನರಾ ಬ್ಯಾಂಕ್ ಮೇಲಂತಸ್ತಿನಲ್ಲಿರುವ ಶ್ರೀರಾಮ್ ಫೈನಾನ್ಸ್ ಕಚೇರಿ ಬಹುತೇಕ ಸುಟ್ಟು ಭಸ್ಮವಾಗಿದೆ.
ಮಂಗಳವಾರ ರಾತ್ರಿ ಸುಮಾರು 11 ಗಂಟೆ ಸಮಯದಲ್ಲಿ ಈ ಘಟನೆ ನಡೆದಿದೆ. ರಾತ್ರಿ ಸಮಯದಲ್ಲಿ ಕಟ್ಟಡದಿಂದ ಶಬ್ದ ಮತ್ತು ಹೊಗೆ ಬರುತ್ತಿರುವುದನ್ನು ಕಂಡ ಅಕ್ಕಪಕ್ಕದ ನಿವಾಸಿಗಳು ತಕ್ಷಣ ಕಟ್ಟಡದ ಮಾಲೀಕರು ಮತ್ತು ಅಗ್ನಿಶಾಮಕ ಕಚೇರಿಗೆ ಮಾಹಿತಿ ನೀಡಿದ್ದಾರೆ.


ಅಗ್ನಿಶಾಮಕ ವಾಹನ ಬರುವ ಹೊತ್ತಿಗಾಗಲೇ ಶ್ರೀರಾಮ್ ಫೈನಾನ್ಸ್ ಕಚೇರಿ ಬಹುತೇಕ ಸುಟ್ಟು ಕರಕಲಾಗಿದೆ. ಮೂಡಿಗೆರೆ ಅಗ್ನಿಶಾಮಕ ವಾಹನವಲ್ಲದೇ ಚಿಕ್ಕಮಗಳೂರಿನಿಂದಲೂ ಹೆಚ್ಚುವರಿ ಅಗ್ನಿಶಾಮಕ ವಾಹನ ಮತ್ತು ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾದರು. ಅಂತಿಮವಾಗಿ ರಾತ್ರಿ ಸುಮಾರು 3 ಗಂಟೆಯ ಸಮಯಕ್ಕೆ ಸಂಪೂರ್ಣ ಬೆಂಕಿ ನಂದಿಸುವಲ್ಲಿ ಅಗ್ನಿಶಾಮಕ ಸಿಬ್ಬಂದಿ ಯಶಸ್ವಿಯಾಗಿದ್ದಾರೆ. ಈ ಸಂದರ್ಭದಲ್ಲಿ ಮುಂಜಾಗೃತ ಕ್ರಮವಾಗಿ ಮೂಡಿಗೆರೆ ಪಟ್ಟಣದಾದ್ಯಂತ ವಿದ್ಯುತ್ ನಿಲುಗಡೆ ಮಾಡಲಾಗಿತ್ತು.
ಶ್ರೀರಾಮ್ ಫೈನಾನ್ಸ್ ಕಛೇರಿ ಕಡತಗಳು ಮತ್ತು ಪರಿಕರಗಳು ಸಂಪೂರ್ಣ ಭಸ್ಮವಾಗಿವೆ. ಲಾಕರ್ ನಲ್ಲಿದ್ದು ಹಣ ಮತ್ತು ಚಿನ್ನವನ್ನು ಸುರಕ್ಷಿತವಾಗಿ ಹೊರ ತೆಗೆಯಲಾಗಿದೆ.
ಇದೇ ಕಟ್ಟಡದಲ್ಲಿ ಪಟ್ಟಣದ ಪ್ರಮುಖ ಬ್ಯಾಂಕ್ ಕೆನರಾ ಬ್ಯಾಂಕ್ ಸೇರಿದಂತೆ ವಿವಿಧ ಕಛೇರಿಗಳು, ಮನೆಗಳು ಇದ್ದವು. ಬೆಂಕಿ ಕೆನರಾ ಬ್ಯಾಂಕ್ ಸೇರಿದಂತೆ ಇಡೀ ಕಟ್ಟಡಕ್ಕೆ ವ್ಯಾಪಿಸುವ ಅಪಾಯ ಎದುರಾಗಿತ್ತು. ಕಟ್ಟಡದಲ್ಲಿದ್ದ ವಾಸವಾಗಿದ್ದ ಮನೆಗಳ ನಿವಾಸಿಗಳು ಮುಂಜಾಗೃತ ಕ್ರಮವಾಗಿ ಪ್ರಮುಖ ವಸ್ತುಗಳೊಂದಿಗೆ ಮನೆಯಿಂದ ಹೊರಗೆ ಬಂದಿದ್ದರು. ಬೆಂಕಿ ತಗುಲಿದ್ದ ಕಚೇರಿಯ ಮೇಲ್ಬಾಗದ ಮನೆಯಲ್ಲಿ ವೈದ್ಯರೊಬ್ಬರು ಬಾಡಿಗೆಯಿದ್ದರು. ಅವರ ಕುಟುಂಬವನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ.
ಕಟ್ಟಡದಲ್ಲಿ ಇರುವ ಮನೆಗಳ ನೆಲ ಮತ್ತು ಗೋಡೆಗಳು ಶಾಖದಿಂದ ಬಿಸಿಯಾಗಿದೆ.
ಕೆನರಾ ಬ್ಯಾಂಕ್ ಕಚೇರಿಗೆ ಬೆಂಕಿ ತಗುಲಿದ್ದರೆ ಅಪಾರ ಪ್ರಮಾಣದ ನಷ್ಟ, ದಾಖಲೆ ನಷ್ಟ ಸಂಭವಿಸುತ್ತಿತ್ತು.
ಈ ಕಟ್ಟಡವು ಪಟ್ಟಣದ ಶಿವಪ್ರಕಾಶ್ ಅವರಿಗೆ ಸೇರಿದ್ದು, ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಅಥವಾ ಯು.ಪಿ.ಎಸ್. ಹೀಟ್ ಆಗಿ ಬೆಂಕಿ ತಲುಗಿರುವ ಶಂಕೆ ವ್ಯಕ್ತಪಡಿಸಲಾಗಿದೆ. ಸ್ಥಳೀಯ ನಿವಾಸಿಗಳ ಸಮಯಪ್ರಜ್ಞೆ ಮತ್ತು ಅಗ್ನಿಶಾಮಕ ಸಿಬ್ಬಂದಿಯ ಸಕಾಲಿಕ ಕಾರ್ಯದಿಂದ ದೊಡ್ಡ ಅನಾಹುತ ತಪ್ಪಿದಂತಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು