2:50 PM Monday10 - August 2026
ಬ್ರೇಕಿಂಗ್ ನ್ಯೂಸ್
ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ…

ಇತ್ತೀಚಿನ ಸುದ್ದಿ

ಮೂಡಿಗೆರೆಯಲ್ಲಿ ಕಟ್ಟಡಕ್ಕೆ ಬೆಂಕಿ; ಶ್ರೀರಾಮ್ ಫೈನಾನ್ಸ್ ಕಚೇರಿಗೆ ಬಹುತೇಕ ಹಾನಿ

25/12/2024, 10:48

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆ ಪಟ್ಟಣದ ಮೇಗಲಪೇಟೆ ಕೆನರಾ ಬ್ಯಾಂಕ್ ಇರುವ ಪಾರ್ವತಿ ಹೈಟ್ಸ್ ಕಟ್ಟಡಕ್ಕೆ ಆಕಸ್ಮಿಕ ಬೆಂಕಿ ತಗುಲಿದ್ದು, ಕಟ್ಟಡದಲ್ಲಿದ್ದ ಕೆನರಾ ಬ್ಯಾಂಕ್ ಮೇಲಂತಸ್ತಿನಲ್ಲಿರುವ ಶ್ರೀರಾಮ್ ಫೈನಾನ್ಸ್ ಕಚೇರಿ ಬಹುತೇಕ ಸುಟ್ಟು ಭಸ್ಮವಾಗಿದೆ.
ಮಂಗಳವಾರ ರಾತ್ರಿ ಸುಮಾರು 11 ಗಂಟೆ ಸಮಯದಲ್ಲಿ ಈ ಘಟನೆ ನಡೆದಿದೆ. ರಾತ್ರಿ ಸಮಯದಲ್ಲಿ ಕಟ್ಟಡದಿಂದ ಶಬ್ದ ಮತ್ತು ಹೊಗೆ ಬರುತ್ತಿರುವುದನ್ನು ಕಂಡ ಅಕ್ಕಪಕ್ಕದ ನಿವಾಸಿಗಳು ತಕ್ಷಣ ಕಟ್ಟಡದ ಮಾಲೀಕರು ಮತ್ತು ಅಗ್ನಿಶಾಮಕ ಕಚೇರಿಗೆ ಮಾಹಿತಿ ನೀಡಿದ್ದಾರೆ.


ಅಗ್ನಿಶಾಮಕ ವಾಹನ ಬರುವ ಹೊತ್ತಿಗಾಗಲೇ ಶ್ರೀರಾಮ್ ಫೈನಾನ್ಸ್ ಕಚೇರಿ ಬಹುತೇಕ ಸುಟ್ಟು ಕರಕಲಾಗಿದೆ. ಮೂಡಿಗೆರೆ ಅಗ್ನಿಶಾಮಕ ವಾಹನವಲ್ಲದೇ ಚಿಕ್ಕಮಗಳೂರಿನಿಂದಲೂ ಹೆಚ್ಚುವರಿ ಅಗ್ನಿಶಾಮಕ ವಾಹನ ಮತ್ತು ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾದರು. ಅಂತಿಮವಾಗಿ ರಾತ್ರಿ ಸುಮಾರು 3 ಗಂಟೆಯ ಸಮಯಕ್ಕೆ ಸಂಪೂರ್ಣ ಬೆಂಕಿ ನಂದಿಸುವಲ್ಲಿ ಅಗ್ನಿಶಾಮಕ ಸಿಬ್ಬಂದಿ ಯಶಸ್ವಿಯಾಗಿದ್ದಾರೆ. ಈ ಸಂದರ್ಭದಲ್ಲಿ ಮುಂಜಾಗೃತ ಕ್ರಮವಾಗಿ ಮೂಡಿಗೆರೆ ಪಟ್ಟಣದಾದ್ಯಂತ ವಿದ್ಯುತ್ ನಿಲುಗಡೆ ಮಾಡಲಾಗಿತ್ತು.
ಶ್ರೀರಾಮ್ ಫೈನಾನ್ಸ್ ಕಛೇರಿ ಕಡತಗಳು ಮತ್ತು ಪರಿಕರಗಳು ಸಂಪೂರ್ಣ ಭಸ್ಮವಾಗಿವೆ. ಲಾಕರ್ ನಲ್ಲಿದ್ದು ಹಣ ಮತ್ತು ಚಿನ್ನವನ್ನು ಸುರಕ್ಷಿತವಾಗಿ ಹೊರ ತೆಗೆಯಲಾಗಿದೆ.
ಇದೇ ಕಟ್ಟಡದಲ್ಲಿ ಪಟ್ಟಣದ ಪ್ರಮುಖ ಬ್ಯಾಂಕ್ ಕೆನರಾ ಬ್ಯಾಂಕ್ ಸೇರಿದಂತೆ ವಿವಿಧ ಕಛೇರಿಗಳು, ಮನೆಗಳು ಇದ್ದವು. ಬೆಂಕಿ ಕೆನರಾ ಬ್ಯಾಂಕ್ ಸೇರಿದಂತೆ ಇಡೀ ಕಟ್ಟಡಕ್ಕೆ ವ್ಯಾಪಿಸುವ ಅಪಾಯ ಎದುರಾಗಿತ್ತು. ಕಟ್ಟಡದಲ್ಲಿದ್ದ ವಾಸವಾಗಿದ್ದ ಮನೆಗಳ ನಿವಾಸಿಗಳು ಮುಂಜಾಗೃತ ಕ್ರಮವಾಗಿ ಪ್ರಮುಖ ವಸ್ತುಗಳೊಂದಿಗೆ ಮನೆಯಿಂದ ಹೊರಗೆ ಬಂದಿದ್ದರು. ಬೆಂಕಿ ತಗುಲಿದ್ದ ಕಚೇರಿಯ ಮೇಲ್ಬಾಗದ ಮನೆಯಲ್ಲಿ ವೈದ್ಯರೊಬ್ಬರು ಬಾಡಿಗೆಯಿದ್ದರು. ಅವರ ಕುಟುಂಬವನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ.
ಕಟ್ಟಡದಲ್ಲಿ ಇರುವ ಮನೆಗಳ ನೆಲ ಮತ್ತು ಗೋಡೆಗಳು ಶಾಖದಿಂದ ಬಿಸಿಯಾಗಿದೆ.
ಕೆನರಾ ಬ್ಯಾಂಕ್ ಕಚೇರಿಗೆ ಬೆಂಕಿ ತಗುಲಿದ್ದರೆ ಅಪಾರ ಪ್ರಮಾಣದ ನಷ್ಟ, ದಾಖಲೆ ನಷ್ಟ ಸಂಭವಿಸುತ್ತಿತ್ತು.
ಈ ಕಟ್ಟಡವು ಪಟ್ಟಣದ ಶಿವಪ್ರಕಾಶ್ ಅವರಿಗೆ ಸೇರಿದ್ದು, ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಅಥವಾ ಯು.ಪಿ.ಎಸ್. ಹೀಟ್ ಆಗಿ ಬೆಂಕಿ ತಲುಗಿರುವ ಶಂಕೆ ವ್ಯಕ್ತಪಡಿಸಲಾಗಿದೆ. ಸ್ಥಳೀಯ ನಿವಾಸಿಗಳ ಸಮಯಪ್ರಜ್ಞೆ ಮತ್ತು ಅಗ್ನಿಶಾಮಕ ಸಿಬ್ಬಂದಿಯ ಸಕಾಲಿಕ ಕಾರ್ಯದಿಂದ ದೊಡ್ಡ ಅನಾಹುತ ತಪ್ಪಿದಂತಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು