1:28 AM Wednesday13 - August 2025
ಬ್ರೇಕಿಂಗ್ ನ್ಯೂಸ್
ಕೇಂದ್ರದಿಂದ ರಸಗೊಬ್ಬರ ಪೂರೈಕೆ ಕೊರತೆ ರಾಜ್ಯದ ಸಮಸ್ಯೆಗೆ ಕಾರಣ: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ Kodagu | ಮಡಿಕೇರಿ: ಅಸ್ಸಾಂ ಕಾರ್ಮಿಕರಿಂದ ಆಧಾರ್ ಕಾರ್ಡಿನ ದುರ್ಬಳಕೆ ಆರೋಪ ರಾಜ್ಯ ಸರಕಾರದ ವಿನೂತನ ಯೋಜನೆ: ವಿದೇಶದಲ್ಲಿ ವ್ಯಾಸಂಗ ಮಾಡುವವರಿಗೆ ಮಾಹಿತಿ ನೀಡಲು ಆ.… ಬಾಲ್ಯವಿವಾಹ ತಡೆಗಟ್ಟಲು ಸರ್ಕಾರದಿಂದ ಕಠಿಣ ಕ್ರಮ: ವಿಧಾನ ಸಭೆಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಮಶಾನ ಜಾಗ ಒತ್ತುವರಿ ಮಾಡಿಕೊಂಡಿರುವವರ ವಿರುದ್ಧ ಕ್ರಮ: ವಿಧಾನಸಭೆಯಲ್ಲಿ ಸಚಿವ ಕೃಷ್ಣ ಬೈರೇಗೌಡ ಬಂಡೀಪುರ: ಕಾಡಾನೆ ಜತೆ ಸೆಲ್ಫಿಗೆ ಹೋಗಿ ದಾಳಿಗೊಳಗಾಗಿದ್ದ ವ್ಯಕ್ತಿಗೆ 25 ಸಾವಿರ ರೂ.… ವಿಶ್ವ ವಿಖ್ಯಾತ ಮೈಸೂರು ದಸರಾ: ಗಜಪಡೆಯ ತೂಕ ಪರೀಕ್ಷೆ; ಯಾರ್ಯಾರು, ಎಷ್ಟೆಷ್ಟು ಕೆಜಿ? ವಿಧಾನ ಮಂಡಲ ಮುಂಗಾರು ಅಧಿವೇಶನ: ಧರ್ಮಸ್ಥಳ ಪ್ರಕರಣ ಪ್ರಸ್ತಾಪ; ಸನಾತನ ಧರ್ಮದ ಪಾವಿತ್ರ್ಯಕ್ಕೆ… ಬೆಂಗಳೂರು ಟೆಕ್ ಸಮ್ಮಿತ್-2025: 100ಕ್ಕೂ ಹೆಚ್ಚು ಕಂಪನಿಗಳ ಸಿಇಒಗಳ ಜತೆ ಮುಖ್ಯಮಂತ್ರಿ Breakfast… Kodagu | ವಿರಾಜಪೇಟೆ: ಚೆಂಬು ವ್ಯಾಪ್ತಿಯಲ್ಲಿ ಪುoಡಾನೆ ಸೆರೆಗೆ ಸರ್ಕಾರದ ಅನುಮತಿ; ತಂಡ…

ಇತ್ತೀಚಿನ ಸುದ್ದಿ

ಶಿವಮೊಗ್ಗ: ಈ-ಖಾತಾ ಮಾಡಲು ಲಂಚ ಪಡೆಯುತ್ತಿದ್ದ ಇಂಡುವಳ್ಳಿ ಗ್ರಾಪಂ ಪಿಡಿಒ ಬಂಧನ

25/12/2024, 14:09

ಶಿವಮೊಗ್ಗ (reporterkarnataka.com) ಇ-ಖಾತೆ ಮಾಡಿಕೊಡಲು 5 ಸಾವಿರ ರೂ. ಲಂಚ ಪಡೆಯುತ್ತಿದ್ದ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಇಂಡುವಳ್ಳಿ ಗ್ರಾಪಂ ಪ್ರಭಾರ ಪಿಡಿಒ ಈಶ್ವರಪ್ಪ ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.
ಆರೋಪಿಯನ್ನು ತನಿಖೆ ಸಂಬಂಧ ವಶಕ್ಕೆ ಪಡೆದ ಶಿವಮೊಗ್ಗ ಲೋಕಾಯುಕ್ತ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಹೆಚ್.ಎಸ್.ಸುರೇಶ್ ಅವರು ಪ್ರಕರಣದ ತನಿಖೆಯನ್ನು ಕೈಗೊಂಡಿರುತ್ತಾರೆ.
ಮಹಮ್ಮದ್ ಗೌಸ್ ಅವರ ತಂದೆ ಭಾಷಾ ಸಾಬ್‌ ಅವರು ಇಂಡುವಳ್ಳಿ ಗ್ರಾಮದಲ್ಲಿ ಜಮೀನನ್ನು ಹೊಂದಿದ್ದು, ಅದರಲ್ಲಿ ಒಂದು ಮನೆಯನ್ನು ಕಟ್ಟಿಕೊಂಡಿರುತ್ತಾರೆ. ಆ ಮನೆಯ ಮೇಲೆ ಲೋನ್ ತೆಗೆದುಕೊಳ್ಳುವ ಸಂಬಂಧ, ಮನೆ ಇರುವ ಜಾಗವನ್ನು ತನ್ನ ತಾಯಿ ಮಮ್ರಾಜ್ ಅವರ ಹೆಸರಿನಲ್ಲಿ ಈ-ಖಾತಾ ಮಾಡಿಕೊಡುವಂತೆ ಇಂಡುವಳ್ಳಿ ಗ್ರಾಮ ಪಂಚಾಯ್ತಿಗೆ ಅರ್ಜಿಯನ್ನು ಸಲ್ಲಿಸಿದ್ದು, ಇಂಡುವಳ್ಳಿ ಗ್ರಾಮದ ಪ್ರಭಾರ ಪಿಡಿಒ ರವರಾದ ಈಶ್ವರಪ್ಪ ಅವರು ಮನೆ ಜಾಗಕ್ಕೆ ಬಂದು ಅಳತೆ ಮಾಡಿಕೊಂಡು ಹೋಗಿದ್ದು, ಈ-ಖಾತಾ ಕೊಡುವಂತೆ ಹಲವಾರು ಬಾರಿ ಈಶ್ವರಪ್ಪ ರವರ ಹತ್ತಿರ ಕೇಳಿದಾಗ ಅವರು ಪಿರ್ಯಾದುದಾರರಿಗೆ ಈ-ಖಾತಾವನ್ನು ಕೊಟ್ಟಿರುವುದಿಲ್ಲ.
ಡಿ.20 ರಂದು ಈಶ್ವರಪ್ಪ ರವರು ಪಿರ್ಯಾದಿ ಬಳಿ ಈ ಸ್ವತ್ತು ಮಾಡಿಕೊಡಲು 5000/- ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದು, ಪಿರ್ಯಾದುದಾರರಿಗೆ ಲಂಚದ ಹಣ ನೀಡಲು ಇಷ್ಟವಿಲ್ಲದೆ ಈಶ್ವರಪನವರ ವಿರುದ್ಧ ಕ್ರಮಕ್ಕಾಗಿ ಶಿವಮೊಗ್ಗ ಲೋಕಾಯುಕ್ತ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪ್ರಕರಣ ದಾಖಲಾಗಿ ಡಿ.24 ರಂದು ಬೆಳಗ್ಗೆ ಸೊರಬ ಪೋಸ್ಟ್ ಆಫೀಸ್ ಕಚೇರಿ ಬಳಿ ಅಪಾದಿತ ಅಧಿಕಾರಿ ಪಿರ್ಯಾದಿಯಿಂದ 5000/- ಲಂಚದ ಹಣವನ್ನು ತೆಗೆದುಕೊಳ್ಳುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಈ ಕಾರ್ಯಾಚರಣೆಯನ್ನು ಮಂಜುನಾಥ ಚೌಧರಿ. ಎಂ.ಹೆಚ್. ಪೊಲೀಸ್ ಅಧೀಕ್ಷಕರು, ಕರ್ನಾಟಕ ಲೋಕಾಯುಕ್ತ, ಶಿವಮೊಗ್ಗ ರವರ ನೇತೃತ್ವದಲ್ಲಿ ನಡೆಸಲಾಗಿದ್ದು, ಕರ್ನಾಟಕ ಲೋಕಾಯುಕ್ತ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್‌ಗಳಾದ ಹೆಚ್.ಎಸ್ ಸುರೇಶ್, ಸಿಬ್ಬಂದಿಯವರಾದ ಯೋಗೇಶ್ ಸಿ.ಹೆಚ್.ಸಿ, ಮಂಜುನಾಥ ಎಂ. ಸಿ.ಹೆಚ್.ಸಿ, ಸುರೇಂದ್ರ ಸಿ.ಹೆಚ್.ಸಿ, ಪ್ರಶಾಂತ್ ಕುಮಾರ್,ಹೆಚ್. ಸಿ.ಪಿ.ಸಿ. ಚೆನ್ನೇಶ್, ಸಿ.ಪಿ.ಸಿ ದೇವರಾಜ್, ಸಿ.ಪಿ.ಸಿ, ಅರುಣ್ ಕುಮಾರ್ ಯು.ಬಿ ಸಿ.ಪಿ.ಸಿ. ಅಂಜಲಿ, ಮ.ಪಿ.ಸಿ ಜಯಂತ್ ಎ.ಪಿ.ಸಿ ಮತ್ತು ಪ್ರದೀಪ್ ಎ.ಪಿ.ಸಿ. ರವರು ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು