3:18 PM Thursday26 - March 2026
ಬ್ರೇಕಿಂಗ್ ನ್ಯೂಸ್
ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್…

ಇತ್ತೀಚಿನ ಸುದ್ದಿ

ಸಿ.ಟಿ‌. ರವಿ ಪತ್ರ ಬರೆದಿದ್ದಾರೆ, ಹೆಬ್ಬಾಳ್ಕರ್ ಅವರಿಂದ ಯಾವುದೇ ಪತ್ರ ಬಂದಿಲ್ಲ: ಸಭಾಪತಿ ಬಸವರಾಜ್ ಹೊರಟ್ಟಿ

25/12/2024, 16:58

ಹುಬ್ಬಳ್ಳಿ(reporterkarnataka.com): ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರು ಈಗಾಗಲೇ 7 ಪೇಜ್ ಗಳ ಪತ್ರವನ್ನು ಬರೆದಿದ್ದಾರೆ. ಆದರೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರಿಂದ ಇದುವರೆಗೆ ಯಾವುದೇ ಪತ್ರ ಬಂದಿಲ್ಲ‌ ಎಂದು ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಹೇಳಿದರು.
ಈ ಕುರಿತು ನಗರದಲ್ಲಿ‌ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಪರಿಷತ್ ಸದಸ್ಯರಾದ ಸಿ.ಟಿ. ರವಿಯವರು ಪತ್ರದಲ್ಲಿ ಪೊಲೀಸರು ನಡೆಸಿಕೊಂಡಿರುವುದರ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಸಿ.ಟಿ. ರವಿಯವರು ಸ್ಟ್ರೈಕ್ ಮಾಡುವ ವೇಳೆ ಸಂಜೆ 6 ಗಂಟೆಗೆ ಪೊಲೀಸರ ವಶಕ್ಕೆ ಪಡೆದಿರುವುದು ಹೇಳಿಕೊಂಡಿದ್ದಾರೆ.‌ ರವಿಯವರು ನಮ್ಮ ಸದನದ ಸದಸ್ಯರಾಗಿದ್ದು, ಹಾಗಾಗಿ‌ ಅವರ ಹಕ್ಕುಚ್ಯುತಿ ಬಗ್ಗೆ ಪರಿಶೀಲನೆ ಮಾಡುತ್ತೇವೆ. ಜತೆಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಂದ ಯಾವುದೇ ಪತ್ರ ಇನ್ನೂ
ಬಂದಿಲ್ಲ. ಘಟನಾ ದಿನ ಲಕ್ಷ್ಮೀ ‌ಅವರು ನೋವಿನಲ್ಲಿದ್ದರು, ಇತ್ತೀಚಿನ ಎರಡು ದಿನಗಳಿಂದ ಮಾಧ್ಯಮಗಳಲ್ಲಿ‌ ಅವರ ಹೇಳಿಕೆ ಗಮನಿಸಿದ್ದೇವೆ. ಅವರ ಹೇಳಿಕೆ ನೋಡಿದ್ದಾಗ‌ ಅವರು ನೊಂದಿರುವುದು ಗೊತ್ತಾಗುತ್ತೆ. ಕಾನೂನು ತನಿಖೆ ಹೊರತುಪಡಿಸಿ ಹೆಣ್ಮಕ್ಕಳಿಗೆ‌ ಗೌರವ ನೀಡುವುದು ನಮ್ಮ‌ ಧರ್ಮ. ನಮ್ಮಗೂ ಹೆಣ್ಮಕ್ಕಳು ಇದ್ದಾರೆ. ಲಕ್ಷ್ಮೀ ಅವರು ನಮ್ಮಗೆ ಮಗಳೆ ಅಂತಾ ತಿಳ್ಕೊಂಡಿದ್ದೇವೆ.‌ ಸಿಎಂ ಅವರೊಂದಿಗೆ ಮಾತಾಡಿ ಸದ್ಯ ಈ ವಾತಾವರಣ ತಿಳಿ ಮಾಡೋ ಪ್ರಯತ್ನದಲ್ಲಿದ್ದೇನಿ. ನನ್ನ ತೀರ್ಮಾನ ತೆಗೆದುಕೊಂಡಿದ್ದೇನೆ, ಅದಕ್ಕೆ ಬಹುತೇಕರು ಒಳ್ಳೆಯ ತೀರ್ಮಾನ ಅಂತಿದ್ದಾರೆ.‌ ಯಾರಿಗೂ ನೋವಾಗದ ರೀತಿಯಲ್ಲಿ ತೀರ್ಮಾನ ಮಾಡಿದ್ದೇನಿ. ಪರಿಷತ್ ಸದನದ ಘಟನೆಯ ಕುರಿತು ರಾಜ್ಯಪಾಲರ ಮಾಹಿತಿ ಕೇಳಿರುವ ವಿಚಾರ ಮಾತನಾಡಿ, ರಾಜ್ಯಪಾಲರು ಮಾಹಿತಿ ಕೇಳಿರುವುದು ನಿಜ. 19 ದಿನಾಂಕದಂದು ಆಗಿರುವ ಘಟನೆ ವಿವರಣೆ ಕೇಳಿದರು, ರಾಜ್ಯಪಾಲರಿಗೆ ವಿವರಣೆ ನೀಡಿದ್ದೇನಿ. ಡಿಸೆಂಬರ್ 27 ರಂದು ಬೆಳಗಾವಿಗೆ ತೆರಳಲಿದ್ದೇನಿ ಸಿಕ್ಕರೆ ಮಾತಾಡುತ್ತೇನೆ, ಇಲ್ವಾದಲ್ಲಿ ಬೆಂಗಳೂರಿನಲ್ಲಿ ಮಾತಾಡುತ್ತೇನೆ. ಈ ಪ್ರಕರಣ ಸಾಮಾಧಾನ ಮಾಡೋ ಜವಾಬ್ದಾರಿ ಎಲ್ಲರ ಮೇಲೂ ಇದೆ, ಸಮಾಧಾನ ಮಾಡೋವುದು ಎಲ್ಲರಿಗೂ ಒಳ್ಳೆಯದು ಎಂದು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು