12:15 PM Tuesday22 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ…

ಇತ್ತೀಚಿನ ಸುದ್ದಿ

ಸಿ.ಟಿ.ರವಿ ಅವರದ್ದು ಕೊಳಕು ಮನಸ್ಸಿನ ವ್ಯಕ್ತಿತ್ವ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

25/12/2024, 17:06

ಬೆಳಗಾವಿ(reporterkarnataka.com): ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರು ಮನಸ್ಸಿನಲ್ಲೆ ಕೊಳೆ ಇಟ್ಟುಕೊಂಡಿದ್ದಾರೆ. ಅದನ್ನು ಎಷ್ಟು ಬಾರಿ ತೊಳೆದರೂ ಹೋಗೋದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಬುಧವಾರ ಮಾತನಾಡಿದ ಅವರು, ಸಿ.ಟಿ.ರವಿ ಅವರೇ ನಿಮ್ಮ ನಾಲಿಗೆಯನ್ನು ಫಿನಾಯಿಲ್ ಹಾಕಿ ತೊಳೆಯಿರಿ. ಮೈಗೆ ಹಚ್ಚಿರೊ ಕೊಳಕನ್ನು ತೊಳೆಯಬಹುದು. ಮನಸ್ಸಿಗೆ ಹಚ್ಚಿರೋ ಕೊಳಕನ್ನು ತೊಳೆಯಲು ಸಾಧ್ಯವಿಲ್ಲ ಎಂದು ನನಗೂ ಹಿರಿಯರೊಬ್ಬರು ಹೇಳಿದ್ದಾರೆ ಎಂದು ಸಚಿವರು ತಿರುಗೇಟು ನೀಡಿದರು.
ಸಿ.ಟಿ.ರವಿ ಅವರ ಮನಸ್ಸಿನಲ್ಲೇ ಕೊಳಕಿದೆ. ಅಂತಹ ಕೊಳಕನ್ನು ತೊಳೆಯಲು ಸಾಧ್ಯವಿಲ್ಲ. ನಾನು ಎರಡು ದಿನಗಳ ಕಾಲ ಸರಿಯಾಗಿ ನಿದ್ದೆ ಮಾಡಲಿಲ್ಲ ಎಂದು ಸಚಿವರು ಹೇಳಿದರು.
ಅಂದು ಪರಿಷತ್ ಕಲಾಪದಲ್ಲಿ ಘಟನೆ ಆದ ಬಳಿಕ ನಾನು ಅಲ್ಲೆ ಕುಳಿತಿದ್ದೆ. ಅವರು ಊಸರವಳ್ಳಿ ಥರ ಓಡಿ ಹೋದರು. ತಕ್ಷಣವೇ ನಾನು ಹರಿಪ್ರಸಾದ್, ಬೋಸರಾಜು ಅವರಿಗೆ ಸಿ.ಟಿ.ರವಿ ಅವರು ಬಳಸಿದ ಭಾಷೆ ಬಗ್ಗೆ ವಿವರಿಸಿದೆ. ಡಾ. ಯತೀಂದ್ರ, ಉಮಾಶ್ರೀ, ನಾಗರಾಜ್ ಯಾದವ್, ಬಿಲ್ಕಿಸ್ ಬಾನೋ, ಎಲ್ಲರೂ ನನ್ನ ಹತ್ತಿರ ಬಂದು, ಸಿ.ಟಿ.ರವಿ ಬಳಸಿದ ಅಶ್ಲೀಲ ಪದದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದರು. ಬಳಿಕ ಎಲ್ಲಾ ನಾಯಕರು ಜೊತೆಗೂಡಿ ಸಭಾಪತಿಗಳ ಬಳಿ ಹೋದೆವು ಎಂದು ಸಚಿವರು ವಿವರಿಸಿದರು.
ನಮ್ಮ ಮಾತನ್ನು ಆಲಿಸಿದ ಸಭಾಪತಿಗಳು ಕೂಡ ಕಣ್ಣೀರು ಹಾಕಿದರು. ಬಳಿಕ ಅಲ್ಲಿದ್ದ ನಾಯಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಫೋನ್ ಮಾಡಿ ಘಟನೆಯನ್ನು ವಿವರಿಸಿದರು. ಯಾವುದೇ ಕಾರಣಕ್ಕೂ ಧೈರ್ಯಗೇಡಬೇಡಿ, ನಾವೆಲ್ಲಾ ನಿಮ್ಮೊಂದಿಗಿದ್ದೇವೆ ಎಂದು ಆ ಸಮಯದಲ್ಲಿ ಎಲ್ಲರೂ ನನಗೆ ಧೈರ್ಯ ತುಂಬಿದರು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು