1:58 PM Monday22 - June 2026
ಬ್ರೇಕಿಂಗ್ ನ್ಯೂಸ್
ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ

ಇತ್ತೀಚಿನ ಸುದ್ದಿ

ಸಿ.ಟಿ.ರವಿ ಅವರದ್ದು ಕೊಳಕು ಮನಸ್ಸಿನ ವ್ಯಕ್ತಿತ್ವ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

25/12/2024, 17:06

ಬೆಳಗಾವಿ(reporterkarnataka.com): ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರು ಮನಸ್ಸಿನಲ್ಲೆ ಕೊಳೆ ಇಟ್ಟುಕೊಂಡಿದ್ದಾರೆ. ಅದನ್ನು ಎಷ್ಟು ಬಾರಿ ತೊಳೆದರೂ ಹೋಗೋದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಬುಧವಾರ ಮಾತನಾಡಿದ ಅವರು, ಸಿ.ಟಿ.ರವಿ ಅವರೇ ನಿಮ್ಮ ನಾಲಿಗೆಯನ್ನು ಫಿನಾಯಿಲ್ ಹಾಕಿ ತೊಳೆಯಿರಿ. ಮೈಗೆ ಹಚ್ಚಿರೊ ಕೊಳಕನ್ನು ತೊಳೆಯಬಹುದು. ಮನಸ್ಸಿಗೆ ಹಚ್ಚಿರೋ ಕೊಳಕನ್ನು ತೊಳೆಯಲು ಸಾಧ್ಯವಿಲ್ಲ ಎಂದು ನನಗೂ ಹಿರಿಯರೊಬ್ಬರು ಹೇಳಿದ್ದಾರೆ ಎಂದು ಸಚಿವರು ತಿರುಗೇಟು ನೀಡಿದರು.
ಸಿ.ಟಿ.ರವಿ ಅವರ ಮನಸ್ಸಿನಲ್ಲೇ ಕೊಳಕಿದೆ. ಅಂತಹ ಕೊಳಕನ್ನು ತೊಳೆಯಲು ಸಾಧ್ಯವಿಲ್ಲ. ನಾನು ಎರಡು ದಿನಗಳ ಕಾಲ ಸರಿಯಾಗಿ ನಿದ್ದೆ ಮಾಡಲಿಲ್ಲ ಎಂದು ಸಚಿವರು ಹೇಳಿದರು.
ಅಂದು ಪರಿಷತ್ ಕಲಾಪದಲ್ಲಿ ಘಟನೆ ಆದ ಬಳಿಕ ನಾನು ಅಲ್ಲೆ ಕುಳಿತಿದ್ದೆ. ಅವರು ಊಸರವಳ್ಳಿ ಥರ ಓಡಿ ಹೋದರು. ತಕ್ಷಣವೇ ನಾನು ಹರಿಪ್ರಸಾದ್, ಬೋಸರಾಜು ಅವರಿಗೆ ಸಿ.ಟಿ.ರವಿ ಅವರು ಬಳಸಿದ ಭಾಷೆ ಬಗ್ಗೆ ವಿವರಿಸಿದೆ. ಡಾ. ಯತೀಂದ್ರ, ಉಮಾಶ್ರೀ, ನಾಗರಾಜ್ ಯಾದವ್, ಬಿಲ್ಕಿಸ್ ಬಾನೋ, ಎಲ್ಲರೂ ನನ್ನ ಹತ್ತಿರ ಬಂದು, ಸಿ.ಟಿ.ರವಿ ಬಳಸಿದ ಅಶ್ಲೀಲ ಪದದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದರು. ಬಳಿಕ ಎಲ್ಲಾ ನಾಯಕರು ಜೊತೆಗೂಡಿ ಸಭಾಪತಿಗಳ ಬಳಿ ಹೋದೆವು ಎಂದು ಸಚಿವರು ವಿವರಿಸಿದರು.
ನಮ್ಮ ಮಾತನ್ನು ಆಲಿಸಿದ ಸಭಾಪತಿಗಳು ಕೂಡ ಕಣ್ಣೀರು ಹಾಕಿದರು. ಬಳಿಕ ಅಲ್ಲಿದ್ದ ನಾಯಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಫೋನ್ ಮಾಡಿ ಘಟನೆಯನ್ನು ವಿವರಿಸಿದರು. ಯಾವುದೇ ಕಾರಣಕ್ಕೂ ಧೈರ್ಯಗೇಡಬೇಡಿ, ನಾವೆಲ್ಲಾ ನಿಮ್ಮೊಂದಿಗಿದ್ದೇವೆ ಎಂದು ಆ ಸಮಯದಲ್ಲಿ ಎಲ್ಲರೂ ನನಗೆ ಧೈರ್ಯ ತುಂಬಿದರು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು