11:04 AM Wednesday13 - August 2025
ಬ್ರೇಕಿಂಗ್ ನ್ಯೂಸ್
ಸ್ಮಶಾನ ಜಾಗ ಒತ್ತುವರಿ ಮಾಡಿಕೊಂಡಿರುವವರ ವಿರುದ್ಧ ಕ್ರಮ: ವಿಧಾನಸಭೆಯಲ್ಲಿ ಸಚಿವ ಕೃಷ್ಣ ಬೈರೇಗೌಡ ಬಂಡೀಪುರ: ಕಾಡಾನೆ ಜತೆ ಸೆಲ್ಫಿಗೆ ಹೋಗಿ ದಾಳಿಗೊಳಗಾಗಿದ್ದ ವ್ಯಕ್ತಿಗೆ 25 ಸಾವಿರ ರೂ.… ವಿಶ್ವ ವಿಖ್ಯಾತ ಮೈಸೂರು ದಸರಾ: ಗಜಪಡೆಯ ತೂಕ ಪರೀಕ್ಷೆ; ಯಾರ್ಯಾರು, ಎಷ್ಟೆಷ್ಟು ಕೆಜಿ? ವಿಧಾನ ಮಂಡಲ ಮುಂಗಾರು ಅಧಿವೇಶನ: ಧರ್ಮಸ್ಥಳ ಪ್ರಕರಣ ಪ್ರಸ್ತಾಪ; ಸನಾತನ ಧರ್ಮದ ಪಾವಿತ್ರ್ಯಕ್ಕೆ… ಬೆಂಗಳೂರು ಟೆಕ್ ಸಮ್ಮಿತ್-2025: 100ಕ್ಕೂ ಹೆಚ್ಚು ಕಂಪನಿಗಳ ಸಿಇಒಗಳ ಜತೆ ಮುಖ್ಯಮಂತ್ರಿ Breakfast… Kodagu | ವಿರಾಜಪೇಟೆ: ಚೆಂಬು ವ್ಯಾಪ್ತಿಯಲ್ಲಿ ಪುoಡಾನೆ ಸೆರೆಗೆ ಸರ್ಕಾರದ ಅನುಮತಿ; ತಂಡ… ಮೈಸೂರು -ಕೊಡಗು ಲೋಕಸಭೆ ಕ್ಷೇತ್ರದಲ್ಲೂ ಮತಗಳ್ಳತನ: ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಆರೋಪ Bangalore | ಆರ್.ವಿ. ರಸ್ತೆಯಿಂದ ಬೊಮ್ಮಸಂದ್ರಕ್ಕೆ: ಬೆಂಗಳೂರು ಮೆಟ್ರೋ 2ರ ಹಳದಿ ಮಾರ್ಗ… ಧರ್ಮಸ್ಥಳ: ಯೂಟ್ಯೂಬರ್ ಗಳ ಮೇಲೆ ಹಲ್ಲೆ ಪ್ರಕರಣ; 6 ಮಂದಿಯ ಬಂಧನ Bangalore | ಪ್ರಧಾನಿ ಮೋದಿಯವರ ಬೆಂಗಳೂರು ಕಾರ್ಯಕ್ರಮ; ಪ್ರತಿಪಕ್ಷದ ನಾಯಕ ಆರ್. ಅಶೋಕ್…

ಇತ್ತೀಚಿನ ಸುದ್ದಿ

ಎಸ್ಎಂವಿಟಿ ಬೆಂಗಳೂರು-ಕಲಬುರಗಿ ನಡುವೆ ವಿಶೇಷ ರೈಲು ಸಂಚಾರ

25/12/2024, 23:54

ಬೆಂಗಳೂರು(reporterkarnataka.com): ಕ್ರಿಸ್ ಮಸ್ ಹಬ್ಬದ ನಂತರದ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು ನೈಋತ್ಯ ರೈಲ್ವೆಯು ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು-ಕಲಬುರಗಿ ನಿಲ್ದಾಣಗಳ ನಡುವೆ ಪ್ರತಿ ದಿಕ್ಕಿನಲ್ಲಿ ಎರಡು ಟ್ರಿಪ್ ವಿಶೇಷ ಎಕ್ಸ್ ಪ್ರೆಸ್ ರೈಲುಗಳನ್ನು ಓಡಿಸಲಿದೆ. ವಿವರಗಳು ಈ ಕೆಳಗಿನಂತಿವೆ:
ರೈಲು ಸಂಖ್ಯೆ 06519 ಎಸ್ಎಂವಿಟಿ ಬೆಂಗಳೂರು-ಕಲಬುರಗಿ ವಿಶೇಷ ಎಕ್ಸ್ ಪ್ರೆಸ್ ರೈಲು ಡಿಸೆಂಬರ್ 27 ಮತ್ತು 28 ರಂದು ರಾತ್ರಿ 9.15ಕ್ಕೆ ಬೆಂಗಳೂರಿನ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ನಿಲ್ದಾಣದಿಂದ ಹೊರಡಲಿದ್ದು ಮರುದಿನ ಬೆಳಗ್ಗೆ 7.40ಕ್ಕೆ ಕಲಬುರಗಿ ತಲುಪಲಿದೆ.
ರೈಲು ಸಂಖ್ಯೆ 06520 ಕಲಬುರಗಿ – ಎಸ್ ಎಂ ವಿ ಟಿ ಬೆಂಗಳೂರು ಎಕ್ಸ್ ಪ್ರೆಸ್ ವಿಶೇಷ ರೈಲು ಕಲಬುರಗಿಯಿಂದ ಡಿಸೆಂಬರ್ 28 ಮತ್ತು 29ರಂದು ಬೆಳಿಗ್ಗೆ 9.35ಕ್ಕೆ ಹೊರಡಲಿದ್ದು ಅದೇ ದಿನ ರಾತ್ರಿ 8 ಗಂಟೆಗೆ ಬೆಂಗಳೂರಿನ ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ತಲುಪಲಿದೆ.
ಈ ವಿಶೇಷ ರೈಲುಗಳಿಗೆ ಯಲಹಂಕ, ಧರ್ಮಾವರಂ, ಅನಂತಪುರ, ಗುಂತಕಲ್, ಆದೋನಿ, ಮಂತ್ರಾಲಯಂ ರೋಡ್, ರಾಯಚೂರು, ಕೃಷ್ಣಾ, ಯಾದಗಿರಿ ಮತ್ತು ಶಹಾಬಾದ್ ಗಳಲ್ಲಿ ನಿಲುಗಡೆ ಇರಲಿದೆ.
ಈ ವಿಶೇಷ ರೈಲು ಮೂರು ಎಸಿ ತ್ರಿ ಟೈರ್ ಬೋಗಿಗಳು, ಮೂರು ದ್ವಿತೀಯ ದರ್ಜೆ ಸ್ಲೀಪರ್ ಕ್ಲಾಸ್ ಬೋಗಿಗಳು, ಒಂಬತ್ತು ದ್ವಿತೀಯ ದರ್ಜೆ ಬೋಗಿಗಳು ಮತ್ತು ಎರಡು ಲಗೇಜ್ ಕಮ್ ಬ್ರೇಕ್ ವ್ಯಾನ್ (ದಿವ್ಯಾಂಗ ಸ್ನೇಹಿ ಕಂಪಾರ್ಟ್ಮೆಂಟ್ ನೊಂದಿಗೆ) ಬೋಗಿಗಳನ್ನು ಹೊಂದಿರಲಿದೆ.
ಈ ರೈಲುಗಳ ಪ್ರತಿ ನಿಲ್ದಾಣದ ಆಗಮನ, ನಿರ್ಗಮನ ಸಮಯಕ್ಕಾಗಿ, ಪ್ರಯಾಣಿಕರು ಭಾರತೀಯ ರೈಲ್ವೆ ಜಾಲತಾಣ www.enquiry.indianrail.gov.in ಗೆ ಭೇಟಿ ನೀಡಿ ಅಥವಾ ಸಹಾಯವಾಣಿ 139ಕ್ಕೆ ಕರೆ ಮಾಡುವ ಮೂಲಕ ಮಾಹಿತಿ ಪಡೆದುಕೊಳ್ಳಬಹುದು.

ಇತ್ತೀಚಿನ ಸುದ್ದಿ

ಜಾಹೀರಾತು