2:48 PM Thursday26 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್

ಇತ್ತೀಚಿನ ಸುದ್ದಿ

27ನೇ ಬ್ರಹ್ಮೋತ್ಸವ: ನಂಜನಗೂಡು ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯ ವತಿಯಿಂದ ಬೃಹತ್ ಪಾದಯಾತ್ರೆ

26/12/2024, 17:41

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ನಂಜನಗೂಡಿನ ಪವಿತ್ರ ಯಾತ್ರಾಸ್ಥಳವಾದ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದ ವತಿಯಿಂದ ಇಂದು ಬೃಹತ್ ಪಾದಯಾತ್ರೆ ಹಮ್ಮಿಕೊಳ್ಳಲಾಗಿತ್ತು.


ಹತ್ತು ದಿನಗಳ ಕಾಲ ನಡೆಯುತ್ತಿರುವ 27ನೇ ಬ್ರಹ್ಮೋತ್ಸವದ ಅಂಗವಾಗಿ ಇಂದು ಮೈಸೂರಿನ ಶ್ರೀ ದತ್ತ ವೆಂಕಟರಮ ಸ್ವಾಮಿ ದೇವಾಲಯದಿಂದ ನಂಜನಗೂಡಿನ ಶ್ರೀ ಅಯ್ಯಪ್ಪ ಸ್ವಾಮಿ ದೇಗುಲದ ವರೆಗೆ ಇರುಮುಡಿ ಹೊತ್ತ ನೂರಾರು ಅಯ್ಯಪ್ಪ ಭಕ್ತರು ಪಾದಯಾತ್ರೆ ನಡೆಸುವ ಮೂಲಕ ತಮ್ಮ ಭಕ್ತಿ ನಮನ ಸಲ್ಲಿಸಿದರು.
ಮಂಗಳವಾರ ರಾತ್ರಿ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ಸುಮಾರು 200ಕ್ಕೂ ಹೆಚ್ಚು ಅಯ್ಯಪ್ಪ ಭಕ್ತರು ಇರುಮುಡಿ ಕಟ್ಟಿಸಿಕೊಂಡು ರಾತ್ರಿ ಮೈಸೂರಿನ ದತ್ತ ವೆಂಕಟರಮಣಸ್ವಾಮಿ ದೇವಾಲಯಕ್ಕೆ ವಾಹನದಲ್ಲಿ ತೆರಳಿ ವಾಸ್ತವ್ಯ ಹೂಡಿದ್ದರು.
ಇಂದು ಬೆಳಗಿನ ಜಾವ 4 ಗಂಟೆಗೆ ಅಲ್ಲಿಂದ ಮೈಸೂರು ಊಟಿ ಹೆದ್ದಾರಿಯಲ್ಲಿ ಸುಮಾರು 25 ಕಿಮಿ ದೂರ ಬರಿಗಾಲಲ್ಲಿ ಪಾದಯಾತ್ರೆ ನಡೆಸಿ ನಂಜನಗೂಡಿನ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯ ತಲುಪಿದ್ದಾರೆ. ದೇವಾಲಯ ತಲುಪಿದ ಭಕ್ತರು ಅಯ್ಯಪ್ಪನ ನಾಮಸ್ಮರಣೆ ಮಾಡುತ್ತಾ ಪವಿತ್ರ 18 ಮೆಟ್ಟಿಲುಗಳ ಬಳಿ ಕರ್ಪೂರ ಹಚ್ಚಿ ಈಡುಗಾಯಿ ಒಡೆದು ಪವಿತ್ರ ಮೆಟ್ಟಿಲುಗಳನ್ನು ಹತ್ತುವ ಮೂಲಕ ದೇವಾಲಯ ಪ್ರವೇಶಿಸಿ ಶ್ರೀ ಅಯ್ಯಪ್ಪ ಸ್ವಾಮಿಯ ದರ್ಶನ ಪಡೆದು ಭಕ್ತಿ ಭಾವ ಮೆರೆದರು.
ಇದಕ್ಕೂ ಮುನ್ನ ಪಾದಯಾತ್ರೆಯಲ್ಲಿ ಬಂದ ಎಲ್ಲಾ ಭಕ್ತರಿಗೆ ದಾನಿಗಳಿಂದ ಸುಕ್ಷೇತ್ರ ಶ್ರೀ ಮಲ್ಲನ ಮೂಲೆ ಮಠದ ದಾಸೋಹ ಭವನದಲ್ಲಿ ಉಪಹಾರದ ವ್ಯವಸ್ಥೆ ಕಲ್ಪಿಸಲಾಗಿತ್ತು.ಅಲ್ಲದೆ ದಾರಿ ಉದ್ದಕ್ಕೂ ಅಲ್ಲಲ್ಲಿ ಕೆಲವು ದಾನಿಗಳು ಹಾಗೂ ಭಕ್ತರು ಪಾದ ಯಾತ್ರೆಯಲ್ಲಿ ಬಂದ ಗುರುಸ್ವಾಮಿಗಳಿಗೆ ಮಾಲಾರ್ಪಣೆ ಮಾಡಿ ಸ್ವಾಗತಿಸಿ ಬಂದ ಎಲ್ಲ ಭಕ್ತರಿಗೆ ಕಾಫಿ, ಟೀ, ಬಿಸ್ಕೆಟ್,ನೀರು, ತಂಪು ಪಾನಿಯ ನೀಡಿ ಸತ್ಕರಿ ಸುತ್ತಿದ್ದದ್ದು ವಿಶೇಷವಾಗಿತ್ತು
ಪಾದಯಾತ್ರೆಯಲ್ಲಿ ಮಕ್ಕಳು, ಮಹಿಳೆಯರು, ಯುವಕರು, ವಯೋ ವೃದ್ಧರಾಧಿಯಾಗಿ ಪಾಲ್ಗೊಂಡು ಸುಮಾರು 25 ಕಿಮೀ ಕ್ರಮಿಸಿ ತಮ್ಮ ಭಕ್ತಿ ಭಾವ ಸಮರ್ಪಿಸಿದ್ದಾರೆ
ದೇವಾಲಯಕ್ಕೆ ಬಂದ ಎಲ್ಲಾ ಭಕ್ತರಿಗೆ ದಾನಿಗಳು ಹಾಗೂ ದೇವಾಲಯದ ವತಿಯಿಂದ ಅನ್ನಸಂತರ್ಪಣೆ ಮಾಡಲಾಯಿತು.
ನಂತರ ಗುರುಸ್ವಾಮಿಗಳಾದ ಶ್ರೀ ದೇವರಾಜ ಸ್ವಾಮಿಗಳು ಮಾತನಾಡಿ ಶ್ರೀ ಕ್ಷೇತ್ರ ಶಬರಿಮಲೆ ಕ್ಷೇತ್ರಕ್ಕೆ ಹೋಗಲಾಗದ ಎಷ್ಟೋ ಭಕ್ತರು ಇಲ್ಲೇ ಇರುಮುಡಿ ಕಟ್ಟಿಸಿಕೊಂಡು ಮೈಸೂರಿನಿಂದ ಪಾದಯಾತ್ರೆ ನಡೆಸಿ ಬಂದು ದೇವರ ದರ್ಶನ ಪಡೆಯುತ್ತಾರೆ ಎಂದು ಕಾರ್ಯಕ್ರಮದ ಬಗ್ಗೆ ವಿವರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು