6:29 AM Saturday7 - February 2026
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ* ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು… ತೀರ್ಥಹಳ್ಳಿ ಸಮೀಪದ ಮೇಗರವಳ್ಳಿಯಲ್ಲಿ ಭೀಕರ ಅಪಘಾತ: ಗಾಯಾಳು ಮಹಿಳೆ ಸಾವು Madikeri | ಕುಶಾಲನಗರ ಬಳಿ ಬೈಕ್ ಡಿಕ್ಕಿ: ಪಾದಚಾರಿ ಯುವಕ ದಾರುಣ ಸಾವು ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ… ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,…

ಇತ್ತೀಚಿನ ಸುದ್ದಿ

ಕಜಕಿಸ್ತಾನ: ಅಜರ್‌ಬೈಜಾನ್ ಏರ್‌ಲೈನ್ಸ್ ಪತನ; ಭಾರೀ ಸಾವು- ನೋವಿನ ಶಂಕೆ; ರಷ್ಯಾದ ಗ್ರೋಜ್ನಿಗೆ ಪ್ರಯಾಣಿಸುತ್ತಿದ್ದ ವಿಮಾನ

26/12/2024, 23:45

ಅಕ್ತಾವು(reporterkarnataka.com): ಸುಮಾರು 72 ಪ್ರಯಾಣಿಕರನ್ನು ಹೊತ್ತ ಅಜರ್‌ಬೈಜಾನ್ ಏರ್‌ಲೈನ್ಸ್ ಕಜಕಿಸ್ತಾನದ ಅಕ್ತಾವಿನಲ್ಲಿ ವಿಮಾನ ಪತನಗೊಂಡಿದ್ದು, ಸುಮಾರು 60ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.
ವಿಮಾನ ಬಕು ನಗರದಿಂದ ರಷ್ಯಾದ ಗ್ರೋಜ್ನಿ ನಗರಕ್ಕೆ ಪ್ರಯಾಣಿಸುತ್ತಿತ್ತು. ಆದರೆ ಕಜಕಿಸ್ತಾನದ ಅಕ್ತಾವು ಬಳಿ ವಿಮಾನ ಏಕಾಏಕಿ ನೆಲದತ್ತ ಧಾವಿಸಲಾರಂಭಿಸಿ ಕೆಲವೇ ಕ್ಷಣಗಳಲ್ಲಿ ನೆಲಪ್ಪಳಿಸಿ ಬೆಂಕಿ ಹೊತ್ತಿಕೊಂಡಿದೆ. ಭೀಕರ ಘಟನೆಯ ದೃಶ್ಯ ಸೆರೆಯಾಗಿದೆ. ದಟ್ಟ ಮಂಜಿನ ಕಾರಣ ವಿಮಾನದ ಮಾರ್ಗ ಕೊನೆಯ ಕ್ಷಣದಲ್ಲಿ ಬದಲಾಯಿಸಲಾಗಿತ್ತು. ಆದರೆ ಸುರಕ್ಷಿತವಾಗಿ ಲ್ಯಾಂಡಿಂಗ್ ಮಾಡಲು ಸಾಧ್ಯವಾಗದೆ, ಅತ್ತ ಹಾರಾಡಲು ಸಾಧ್ಯವಾಗದೆ ವಿಮಾನ ನೆಲಕ್ಕೆ ಅಪ್ಪಳಿಸಿದೆ.
ಕಜಕಿಸ್ತಾನ ತುರ್ತು ಸಚಿವಾಲಯ ವಿಮಾನ ಪತನ ಮಾಹಿತಿ ನೀಡಿದೆ.
ರಷ್ಯಾದ ಗ್ರೋಜ್ನಿಗೆ ಹೊರಟಿದ್ದ ವಿಮಾನಕ್ಕೆ ಮಾರ್ಗ ಬದಲಾವಣೆ ಸೂಚನೆ ನೀಡಲಾಗಿತ್ತು. ಗ್ರೋಜ್ನಿಯಲ್ಲಿ ದಟ್ಟ ಮಂಜು ಆವರಿಸಿರುವ ಕಾರಣ ವಿಮಾನ ಹಾರಾಟ ಸವಾಲಾಗುವ ಸಾಧ್ಯತೆ ಇದೆ. ಹೀಗಾಗಿ ಮಾರ್ಗ ಬದಲಾವಣೆಗೆ ಸೂಚಿಸಲಾಗಿತ್ತು. ಆದರೆ ಅಕ್ತಾವು ಬಳಿ ವಿಮಾನ ಆಗಸದಲ್ಲೇ ಕೆಲ ಸುತ್ತು ಹೊಡದಿದೆ. ವಿಮಾನ ಲ್ಯಾಂಡಿಂಗ್ ಮಾಡುವ ಪ್ರಯತ್ನ ಮಾಡಿದ್ದಾರೆ ಎನ್ನಲಾಗಿದೆ. ಆದರೆ ಲ್ಯಾಂಡಿಂಗ್ ಸಾಧ್ಯವಾಗಿಲ್ಲ. ನೇರವಾಗಿ ವಿಮಾನ ನೆಲಕ್ಕೆ ಅಪ್ಪಳಿಸಿದೆ. ಇದರ ಪರಿಣಾಮ ವಿಮಾನ ಪತನಗೊಂಡಿದೆ.
ಪತನಗೊಂಡ ಕೆಲವೇ ನಿಮಿಷಗಳಲ್ಲಿ ರಕ್ಷಣಾ ತಂಡಗಳು ಸ್ಥಳಕ್ಕೆ ದೌಡಾಯಿಸಿದೆ. ಬೆಂಕಿ ನಂದಿಸಿ ಪ್ರಯಾಣಿಕರನ್ನು ರಕ್ಷಿಸುವ ಕಾರ್ಯದಲ್ಲಿ ನಿರತವಾಗಿದೆ. 52 ರಕ್ಷಣಾ ತಂಡದ ಸದಸ್ಯರು ಕಾರ್ಯಾಚರಣೆ ನಡೆಸುತ್ತಿದ್ದಾರೆ. 11 ಯಂತ್ರಗಳನ್ನು ಬಳಸಿಕೊಲ್ಳಾಗಿದೆ. ಕಜಕಿಸ್ತಾನ್ ತುರ್ತು ಸಚಿವಾಲಯದ ಮಾಹಿತಿ ಪ್ರಕಾರ ಕೆಲ ಪ್ರಯಾಣಿಕರು ಬದುಕುಳಿದಿದ್ದಾರೆ. ಸದ್ಯ ಪ್ರಯಾಣಿಕರ ಕುರಿತು ಯಾವುದೇ ಸ್ಪಷ್ಟ ಮಾಹಿತಿ ಲಭ್ಯವಾಗಿಲ್ಲ ಎಂದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು