3:45 AM Sunday20 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ಕಜಕಿಸ್ತಾನ: ಅಜರ್‌ಬೈಜಾನ್ ಏರ್‌ಲೈನ್ಸ್ ಪತನ; ಭಾರೀ ಸಾವು- ನೋವಿನ ಶಂಕೆ; ರಷ್ಯಾದ ಗ್ರೋಜ್ನಿಗೆ ಪ್ರಯಾಣಿಸುತ್ತಿದ್ದ ವಿಮಾನ

26/12/2024, 23:45

ಅಕ್ತಾವು(reporterkarnataka.com): ಸುಮಾರು 72 ಪ್ರಯಾಣಿಕರನ್ನು ಹೊತ್ತ ಅಜರ್‌ಬೈಜಾನ್ ಏರ್‌ಲೈನ್ಸ್ ಕಜಕಿಸ್ತಾನದ ಅಕ್ತಾವಿನಲ್ಲಿ ವಿಮಾನ ಪತನಗೊಂಡಿದ್ದು, ಸುಮಾರು 60ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.
ವಿಮಾನ ಬಕು ನಗರದಿಂದ ರಷ್ಯಾದ ಗ್ರೋಜ್ನಿ ನಗರಕ್ಕೆ ಪ್ರಯಾಣಿಸುತ್ತಿತ್ತು. ಆದರೆ ಕಜಕಿಸ್ತಾನದ ಅಕ್ತಾವು ಬಳಿ ವಿಮಾನ ಏಕಾಏಕಿ ನೆಲದತ್ತ ಧಾವಿಸಲಾರಂಭಿಸಿ ಕೆಲವೇ ಕ್ಷಣಗಳಲ್ಲಿ ನೆಲಪ್ಪಳಿಸಿ ಬೆಂಕಿ ಹೊತ್ತಿಕೊಂಡಿದೆ. ಭೀಕರ ಘಟನೆಯ ದೃಶ್ಯ ಸೆರೆಯಾಗಿದೆ. ದಟ್ಟ ಮಂಜಿನ ಕಾರಣ ವಿಮಾನದ ಮಾರ್ಗ ಕೊನೆಯ ಕ್ಷಣದಲ್ಲಿ ಬದಲಾಯಿಸಲಾಗಿತ್ತು. ಆದರೆ ಸುರಕ್ಷಿತವಾಗಿ ಲ್ಯಾಂಡಿಂಗ್ ಮಾಡಲು ಸಾಧ್ಯವಾಗದೆ, ಅತ್ತ ಹಾರಾಡಲು ಸಾಧ್ಯವಾಗದೆ ವಿಮಾನ ನೆಲಕ್ಕೆ ಅಪ್ಪಳಿಸಿದೆ.
ಕಜಕಿಸ್ತಾನ ತುರ್ತು ಸಚಿವಾಲಯ ವಿಮಾನ ಪತನ ಮಾಹಿತಿ ನೀಡಿದೆ.
ರಷ್ಯಾದ ಗ್ರೋಜ್ನಿಗೆ ಹೊರಟಿದ್ದ ವಿಮಾನಕ್ಕೆ ಮಾರ್ಗ ಬದಲಾವಣೆ ಸೂಚನೆ ನೀಡಲಾಗಿತ್ತು. ಗ್ರೋಜ್ನಿಯಲ್ಲಿ ದಟ್ಟ ಮಂಜು ಆವರಿಸಿರುವ ಕಾರಣ ವಿಮಾನ ಹಾರಾಟ ಸವಾಲಾಗುವ ಸಾಧ್ಯತೆ ಇದೆ. ಹೀಗಾಗಿ ಮಾರ್ಗ ಬದಲಾವಣೆಗೆ ಸೂಚಿಸಲಾಗಿತ್ತು. ಆದರೆ ಅಕ್ತಾವು ಬಳಿ ವಿಮಾನ ಆಗಸದಲ್ಲೇ ಕೆಲ ಸುತ್ತು ಹೊಡದಿದೆ. ವಿಮಾನ ಲ್ಯಾಂಡಿಂಗ್ ಮಾಡುವ ಪ್ರಯತ್ನ ಮಾಡಿದ್ದಾರೆ ಎನ್ನಲಾಗಿದೆ. ಆದರೆ ಲ್ಯಾಂಡಿಂಗ್ ಸಾಧ್ಯವಾಗಿಲ್ಲ. ನೇರವಾಗಿ ವಿಮಾನ ನೆಲಕ್ಕೆ ಅಪ್ಪಳಿಸಿದೆ. ಇದರ ಪರಿಣಾಮ ವಿಮಾನ ಪತನಗೊಂಡಿದೆ.
ಪತನಗೊಂಡ ಕೆಲವೇ ನಿಮಿಷಗಳಲ್ಲಿ ರಕ್ಷಣಾ ತಂಡಗಳು ಸ್ಥಳಕ್ಕೆ ದೌಡಾಯಿಸಿದೆ. ಬೆಂಕಿ ನಂದಿಸಿ ಪ್ರಯಾಣಿಕರನ್ನು ರಕ್ಷಿಸುವ ಕಾರ್ಯದಲ್ಲಿ ನಿರತವಾಗಿದೆ. 52 ರಕ್ಷಣಾ ತಂಡದ ಸದಸ್ಯರು ಕಾರ್ಯಾಚರಣೆ ನಡೆಸುತ್ತಿದ್ದಾರೆ. 11 ಯಂತ್ರಗಳನ್ನು ಬಳಸಿಕೊಲ್ಳಾಗಿದೆ. ಕಜಕಿಸ್ತಾನ್ ತುರ್ತು ಸಚಿವಾಲಯದ ಮಾಹಿತಿ ಪ್ರಕಾರ ಕೆಲ ಪ್ರಯಾಣಿಕರು ಬದುಕುಳಿದಿದ್ದಾರೆ. ಸದ್ಯ ಪ್ರಯಾಣಿಕರ ಕುರಿತು ಯಾವುದೇ ಸ್ಪಷ್ಟ ಮಾಹಿತಿ ಲಭ್ಯವಾಗಿಲ್ಲ ಎಂದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು