12:09 AM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಮೊಗರ್ನಾಡು ದೇವಮಾತಾ ಚರ್ಚಿನ 250ನೇ ವರ್ಷಾಚರಣೆ: ಕ್ರಿಸ್ಮಸ್ ಸಂಭ್ರಮಾಚರಣೆ

27/12/2024, 13:01

ಬಂಟ್ವಾಳ(reporterkarnataka.com): ಸುದೀರ್ಘ ವರ್ಷಗಳ ಇತಿಹಾಸವನ್ನು ಹೊಂದಿರುವ ಅಮ್ಟೂರು ಗ್ರಾಮದ ಮೊಗರ್ನಾಡು ದೇವಮಾತಾ ಚರ್ಚಿನ 250ನೇ ವರ್ಷಾಚರಣೆಗೆ ಚರ್ಚ್ ನಲ್ಲಿ ನಡೆದ ಕ್ರಿಸ್ಮಸ್ ಸಂಭ್ರಮಾಚರಣೆಯ ಸಂದರ್ಭದಲ್ಲಿ ಅದ್ದೂರಿಯ ಚಾಲನೆ ನೀಡಲಾಯಿತು.

ಸಮಾರಂಭದಲ್ಲಿ ಮಂಗಳೂರು ಸಂತ ಜೋಸೆಫ್ ಎಂಜಿನಿಯರಿಂಗ್ ಕಾಲೇಜಿನ ನಿರ್ದೇಶಕ ರೆ|ಫಾ| ವಿಲ್ರೆಡ್ ಪ್ರಕಾಶ್ ಡಿಸೋಜ ಅವರು ಚರ್ಚ್ 250ನೇ ವರ್ಷಾಚರಣೆಯ ಲಾಂಛನವನ್ನು ಅನಾವರಣಗೊಳಿಸುವ ಮೂಲಕ ಐತಿಹಾಸಿಕ ಮೈಲಿಗಲ್ಲಿಗೆ ಚಾಲನೆ ನೀಡಿದರು.
ಚರ್ಚ್ ವ್ಯಾಪ್ತಿಯ ಭಕ್ತರು ಐತಿಹಾಸಿಕ ಕ್ಷಣವನ್ನು ಸ್ಮರಣೀಯಗೊಳಿಸುವ ಜತೆಗೆ ಏಕತೆ, ನಂಬಿಕೆ ಮತ್ತು ಕೃತಜ್ಞತೆಯ ಸಂಕೇತವಾಗಿ ಬರೋಬ್ಬರಿ 250 ಕ್ಯಾಂಡಲ್‌ಗಳನ್ನು ಅದೇ ಸಂಖ್ಯೆಯ ಆಕಾರದಲ್ಲಿ ಜೋಡಿಸಿ ಬೆಳಗಿಸಿ ಸಂಭ್ರಮಿಸಿದರು.
ಚರ್ಚ್ನ ಪ್ರಧಾನ ಧರ್ಮಗುರು ರೆ| ಫಾ| ಅನಿಲ್ ಕೆನ್ಯುಟ್ ಡಿಮೆಲ್ಲೊ ಅವರು ವರ್ಷವಿಡೀ ನಡೆಯುವ 250ನೇ ವರ್ಷಾಚರಣೆ ಕಾರ್ಯಕ್ರಮದ ಪಟ್ಟಿಯನ್ನು ಅನಾವರಣಗೊಳಿಸಿದರು. ಆವರಣೆ ಹಾಗೂ ಕೃತಜ್ಞತೆಯಾಗಿ ವರ್ಷಾಚರಣೆಯ ಥೀಮ್ ಹಾಡನ್ನು ಪ್ರಸ್ತುತ ಪಡಿಸಲಾಯಿತು.
ಐತಿಹಾಸಿಕ ವರ್ಷಾಚರಣೆಯಲ್ಲಿ ಆಧ್ಯಾತ್ಮಿಕತೆ, ಸಮುದಾಯ ಸಂಘಟನೆ, ಸಾಂಸ್ಕೃತಿಕ ವೈಭವ ಸೇರಿದಂತೆ ಚರ್ಚಿನ ಗೌರವಯುತ ಪರಂಪರೆಯನ್ನು ಮುಂದುವರಿಸುವ ದೃಷ್ಟಿಯಿಂದ ಹತ್ತಾರು ಕಾರ್ಯಕ್ರಮಗಳನ್ನು ನಡೆಸುವ ಕುರಿತು ಈ ಸಂದರ್ಭದಲ್ಲಿ ವಿವರಿಸಲಾಯಿತು. ಸಂಭ್ರಮಾಚರಣೆಯಲ್ಲಿ ಸರ್ವರೂ ಪಾಲ್ಗೊಂಡು ಮುಂಬರುವ ಪ್ರತಿ ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸುವ ದೃಷ್ಟಿಯಿಂದ ಸಹಕರಿಸಲು ವಿನಂತಿಸಲಾಯಿತು.
ಕಾರ್ಯಕ್ರಮದಲ್ಲಿ ಚರ್ಚ್ ಪಾಲನಾ ಮಂಡಳಿಯ ಉಪಾಧ್ಯಕ್ಷ ಸಂತೋಷ್ ಡಿಸೋಜ, ಕಾರ್ಯದರ್ಶಿ ವಿಲ್ರೆಡ್ ಲೋಬೊ, ಸರ್ವ ಆಯೋಗಗಳ ಸಂಚಾಲಕಿ ಎಮಿಲಿಯಾ ಡಿಕುನ್ಹಾ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು