8:55 AM Thursday3 - July 2025
ಬ್ರೇಕಿಂಗ್ ನ್ಯೂಸ್
ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ… Kodagu | ಕುಶಾಲನಗರದ ಕೂಡಿಗೆಯಲ್ಲಿ ಚಿನ್ನದಂಗಡಿ ಮಾಲೀಕನ ಮನೆಗೆ ಕನ್ನ: 14 ಲಕ್ಷ… ಕವಿಕಾದಲ್ಲಿ 14 ಕೋಟಿ ರೂ. ವೆಚ್ಚದಲ್ಲಿ ವಿದ್ಯುತ್ ಪರಿವರ್ತಕ ದುರಸ್ತಿ ಕೇಂದ್ರ: ಇಂಧನ… Kodagu Crime | ಸುಳ್ಳು ಕೊಲೆ ಕೇಸ್ ಮೂಲಕ ಅಮಾಯಕ ಜೈಲಿಗೆ: ಇನ್ಸ್​ಪೆಕ್ಟರ್,…

ಇತ್ತೀಚಿನ ಸುದ್ದಿ

ಮೊಗರ್ನಾಡು ದೇವಮಾತಾ ಚರ್ಚಿನ 250ನೇ ವರ್ಷಾಚರಣೆ: ಕ್ರಿಸ್ಮಸ್ ಸಂಭ್ರಮಾಚರಣೆ

27/12/2024, 13:01

ಬಂಟ್ವಾಳ(reporterkarnataka.com): ಸುದೀರ್ಘ ವರ್ಷಗಳ ಇತಿಹಾಸವನ್ನು ಹೊಂದಿರುವ ಅಮ್ಟೂರು ಗ್ರಾಮದ ಮೊಗರ್ನಾಡು ದೇವಮಾತಾ ಚರ್ಚಿನ 250ನೇ ವರ್ಷಾಚರಣೆಗೆ ಚರ್ಚ್ ನಲ್ಲಿ ನಡೆದ ಕ್ರಿಸ್ಮಸ್ ಸಂಭ್ರಮಾಚರಣೆಯ ಸಂದರ್ಭದಲ್ಲಿ ಅದ್ದೂರಿಯ ಚಾಲನೆ ನೀಡಲಾಯಿತು.

ಸಮಾರಂಭದಲ್ಲಿ ಮಂಗಳೂರು ಸಂತ ಜೋಸೆಫ್ ಎಂಜಿನಿಯರಿಂಗ್ ಕಾಲೇಜಿನ ನಿರ್ದೇಶಕ ರೆ|ಫಾ| ವಿಲ್ರೆಡ್ ಪ್ರಕಾಶ್ ಡಿಸೋಜ ಅವರು ಚರ್ಚ್ 250ನೇ ವರ್ಷಾಚರಣೆಯ ಲಾಂಛನವನ್ನು ಅನಾವರಣಗೊಳಿಸುವ ಮೂಲಕ ಐತಿಹಾಸಿಕ ಮೈಲಿಗಲ್ಲಿಗೆ ಚಾಲನೆ ನೀಡಿದರು.
ಚರ್ಚ್ ವ್ಯಾಪ್ತಿಯ ಭಕ್ತರು ಐತಿಹಾಸಿಕ ಕ್ಷಣವನ್ನು ಸ್ಮರಣೀಯಗೊಳಿಸುವ ಜತೆಗೆ ಏಕತೆ, ನಂಬಿಕೆ ಮತ್ತು ಕೃತಜ್ಞತೆಯ ಸಂಕೇತವಾಗಿ ಬರೋಬ್ಬರಿ 250 ಕ್ಯಾಂಡಲ್‌ಗಳನ್ನು ಅದೇ ಸಂಖ್ಯೆಯ ಆಕಾರದಲ್ಲಿ ಜೋಡಿಸಿ ಬೆಳಗಿಸಿ ಸಂಭ್ರಮಿಸಿದರು.
ಚರ್ಚ್ನ ಪ್ರಧಾನ ಧರ್ಮಗುರು ರೆ| ಫಾ| ಅನಿಲ್ ಕೆನ್ಯುಟ್ ಡಿಮೆಲ್ಲೊ ಅವರು ವರ್ಷವಿಡೀ ನಡೆಯುವ 250ನೇ ವರ್ಷಾಚರಣೆ ಕಾರ್ಯಕ್ರಮದ ಪಟ್ಟಿಯನ್ನು ಅನಾವರಣಗೊಳಿಸಿದರು. ಆವರಣೆ ಹಾಗೂ ಕೃತಜ್ಞತೆಯಾಗಿ ವರ್ಷಾಚರಣೆಯ ಥೀಮ್ ಹಾಡನ್ನು ಪ್ರಸ್ತುತ ಪಡಿಸಲಾಯಿತು.
ಐತಿಹಾಸಿಕ ವರ್ಷಾಚರಣೆಯಲ್ಲಿ ಆಧ್ಯಾತ್ಮಿಕತೆ, ಸಮುದಾಯ ಸಂಘಟನೆ, ಸಾಂಸ್ಕೃತಿಕ ವೈಭವ ಸೇರಿದಂತೆ ಚರ್ಚಿನ ಗೌರವಯುತ ಪರಂಪರೆಯನ್ನು ಮುಂದುವರಿಸುವ ದೃಷ್ಟಿಯಿಂದ ಹತ್ತಾರು ಕಾರ್ಯಕ್ರಮಗಳನ್ನು ನಡೆಸುವ ಕುರಿತು ಈ ಸಂದರ್ಭದಲ್ಲಿ ವಿವರಿಸಲಾಯಿತು. ಸಂಭ್ರಮಾಚರಣೆಯಲ್ಲಿ ಸರ್ವರೂ ಪಾಲ್ಗೊಂಡು ಮುಂಬರುವ ಪ್ರತಿ ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸುವ ದೃಷ್ಟಿಯಿಂದ ಸಹಕರಿಸಲು ವಿನಂತಿಸಲಾಯಿತು.
ಕಾರ್ಯಕ್ರಮದಲ್ಲಿ ಚರ್ಚ್ ಪಾಲನಾ ಮಂಡಳಿಯ ಉಪಾಧ್ಯಕ್ಷ ಸಂತೋಷ್ ಡಿಸೋಜ, ಕಾರ್ಯದರ್ಶಿ ವಿಲ್ರೆಡ್ ಲೋಬೊ, ಸರ್ವ ಆಯೋಗಗಳ ಸಂಚಾಲಕಿ ಎಮಿಲಿಯಾ ಡಿಕುನ್ಹಾ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು