9:35 PM Saturday14 - March 2026
ಬ್ರೇಕಿಂಗ್ ನ್ಯೂಸ್
ಕಲಬುರಗಿ; ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಕ್ರಮ: ವಿಧಾನಸಭೆಯಲ್ಲಿ ಸಚಿವ ಬೈರತಿ ಸುರೇಶ್… ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ

ಇತ್ತೀಚಿನ ಸುದ್ದಿ

ಶತದಿನೋತ್ಸವದತ್ತ ‘ಪಯಣ್‌’ ಕೊಂಕಣಿ ಸಿನೆಮಾ: 29ರಂದು ಮಂಗಳೂರಿನಲ್ಲಿ ಸಂಭ್ರಮ

27/12/2024, 16:20

ಮಂಗಳೂರು(reporterkarnataka.com):ಬಿಡುಗಡೆಗೊಂಡ ದಿನದಿಂದಲೇ ಜನಮನ ಗೆದ್ದ, ಸಂಗೀತ್‌ ಘರ್‌’ ಬ್ಯಾನರ್‌ನಡಿಯಲ್ಲಿ ಯೊಡ್ಲಿಂಗ್‌ ಕಿಂಗ್‌ ಮೆಲ್ವಿನ್‌ ಪೆರಿಸ್‌ ಮತ್ತು ನೀಟ ಪೆರಿಸ್‌ ನಿರ್ಮಿಸಿರುವ “ಪಯಣ್‌’ ಕೊಂಕಣಿ ಚಲನಚಿತ್ರವು ನೂರನೇ ದಿನದತ್ತ ದಾಪುಗಾಲು ಹಾಕುತ್ತಿದೆ. ಸೀಮಿತ ಮಾರುಕಟ್ಟೆಯಿಂದಾಗಿ ಕೊಂಕಣಿಯಲ್ಲಿ ಸಿನಿಮಾ ತಯಾರಿಸುವುದು ಮತ್ತು ಚದುರಿ ಹೋಗಿರುವ ಕೊಂಕಣಿ ಜನರಿಗೆ ಅದನ್ನು ತಲುಪಿಸುವುದು ಬಲುದೊಡ್ಡ ಪ್ರಯಾಸದ ಕೆಲಸ. ಆದರೆ “ಪಯಣ್‌’ ಸಿನಿಮಾ ತಂಡವು ‘ಪಯಣ್‌’ ಸಿನಿಮಾ ನೂರು ದಿನಗಳ ಪ್ರದರ್ಶನವನ್ನು ಕಾಣುವಂತೆ ನಿರಂತರ ಶ್ರಮವಹಿಸಿ ದುಡಿದಿದೆ. ಕೋಟ್ಯಾಂತರ ಬಜೆಟಿನ ಚಿತ್ರಗಳು ಸೋಲುತ್ತಿರುವಾಗ, ಸೀಮಿತ ಮಾರುಕಟ್ಟೆಯಿರುವ ಕೊಂಕಣಿ ಸಮಾಜದ ಸಿನಿಮಾವೊಂದು ನೂರು ದಿನಗಳ ಪ್ರದರ್ಶನವನ್ನು ಕಾಣುವುದು ನಿಜಕ್ಕೂ ದಾಖಲೆಯೇ ಸರಿ. ಕಳೆದ ವರ್ಷ ತೆರೆಕಂಡ “ಅಸ್ಮಿತಾಯ್‌’ ಕೊಂಕಣಿ ಚಲನಚಿತ್ರದ ಬಳಿಕ ನೂರು ದಿನಗಳ ಪ್ರದರ್ಶನ ಕಂಡ ದ್ವಿತಿಯ ಚಿತ್ರವಾಗಿ ‘ಪಯಣ್‌’ ಇತಿಹಾಸ ಸೃಷ್ಠಿಸಿದೆ.

“ಪಯಣ್‌’ ಜೀವನದ ನಿಜವಾದ ಸಾಮರಸ್ಯಕ್ಕೆ ಸಂಗೀತ ಕಲೆಯ ನಿಪುಣತೆಗಿಂತಲೂ ಹೆಚ್ಚಿನದ್ದು ಬೇಕು ಎಂಬುದನ್ನು ಅನುಭವಿಸಿ ಜೀರ್ಣಿಸಿಕೊಳ್ಳುವ ಸಂಗೀತಗಾರನ ಜೀವನಗಾಥೆ. ನಾಯಕ ಸಂಗೀತ ಉದ್ಯಮದ ಸವಾಲುಗಳನ್ನು ಎದುರಿಸಿ ಮುನ್ನಡೆಯುವಾಗ – ವೈಯಕ್ತಿಕ ಪೈಶಾಚಿಕತೆಯನ್ನು ಎದುರಿಸುವುದರೊಂದಿಗೆ ವಂಚನೆ ಮತ್ತು ಕಸುಬಿನ ಅನಿರೀಕ್ಷಿತ ಜಾಲಗಳನ್ನು ಎದುರಿಸುತ್ತಾನೆ. ಸಂಗೀತ ಕ್ಷೇತ್ರದಲ್ಲಿ ಪಡಿಯಚ್ಚನ್ನು ಒತ್ತಿ, ತನ್ನ ಹಿಂದೆ ಪರಂಪರೆಯೊಂದನ್ನು ಬಿಟ್ಟು ಹೋಗುವ ಬಯಕೆಯಿಂದ ಪ್ರೇರೇಪಿಸಲ್ಪಟ್ಟ ಅವ ತನ್ನ ಸಂಗೀತ ಜೀವನದಲ್ಲಿ ಎದುರಿಸುತ್ತಿರುವ ಸವಾಲುಗಳನ್ನು ಕೇಂದ್ರಬಿಂದುವಾಗಿಸಿದ ಕಥೆಯೇ ಪಯಣ್‌.
ಶತದಿನೋತ್ಸವ ಸಂಭ್ರಮವು ಡಿಸೆಂಬರ್‌ 29ರಂದು ಸಂಜೆ 4.00 ಗಂಟೆಗೆ ಸರಿಯಾಗಿ ಬಿಜೈನಲ್ಲಿರುವ ಭಾರತ್‌ ಸಿನೆಮಾದಲ್ಲಿ ನಡೆಯಲಿದೆ. ಈ ಸಮಾರಂಭಕ್ಕೆ ವಿಧಾನ ಪರಿಷತ್‌ ಶಾಸಕ ಐವನ್‌ ಡಿಸೋಜಾರವರು ಮುಖ್ಯ ಅಥಿತಿಯಾಗಿ ಆಗಮಿಸಲಿರುವರು. ಸಂತ ಅಲೋಶಿಯಸ್‌ ಸಮೂಹ ವಿದ್ಯಾ ಸಂಸ್ಥೆಗಳ ರೆಕ್ಟರ್‌ ವಂ| ಮೆಲ್ವಿನ್‌ ಜೋಸೆಫ್‌ ಪಿಂಟೊ ಮತ್ತು ಅನಿವಾಸಿ ಉಧ್ಯಮಿ ಶ್ರೀ ಜೇಮ್ಸ್‌ ಡಿ’ಸೋಜಾ ದುಬಾಯ್‌ ಇವರುಗಳು ಗೌರವ ಅಥಿತಿಗಳಾಗಿರುವರು.
ಪಯಣ್‌ ಚಿತ್ರದ ಕಥೆ, ಚಿತ್ರಕಥೆ, ಸಂಭಾಷಣೆಯನ್ನು ನಿರ್ದೇಶಕ ಜೊಯೆಲ್‌ ಪಿರೇರಾ ಬರೆದಿದ್ದು, ರೋಶನ್‌ ಡಿ’ಸೋಜಾ ಆಂಜೆಲೊರ್‌ ಸಂಗೀತ ನಿರ್ದೇಶನ ನೀಡಿದ್ದಾರೆ. ಪುತ್ತೂರಿನ ಯುವ ಪ್ರತಿಭೆ ಬ್ರಾಯನ್‌ ಸಿಕ್ಟೇರಾ ನಾಯಕನಾಗಿ ಹಾಗೂ ಜಾಸ್ಮಿನ್‌ ಡಿ’ಸೋಜಾ, ಕೇಟ್‌ ಪಿರೇರಾ ಮತ್ತು ಶೈನಾ ಡಿ’ಸೋಜ ನಾಯಕಿಯರಾಗಿ ನಟಿಸಿದ್ದಾರೆ. ನಟರಾದ ರೈನಲ್‌ ಸಿಕ್ವೇರಾ, ಲೆಸ್ಲಿ ರೇಗೊ, ಜೆರಿ ರಸ್ಕಿನ್ನಾ, ವಾಲ್ಟರ್‌ ನಂದಳಿಕೆ, ಜೀವನ್‌ ವಾಸ್‌, ಜೊಸ್ಸಿ ರೇಗೊ, ಆಲ್ವಿನ್‌ ದಾಂತಿ, ಆಲ್ಬರ್ಟ್‌ ಪೆರಿಸ್‌, ಅರುಣ್‌ ನೊರೊನ್ಹಾ, ಡೆನ್ವರ್‌ ಪೆರಿಸ್‌, ಡೆನ್ವರ್‌ ಡಿ’ಸೋಜಾ, ಮೆಲಿಶಾ ಪಿಂಟೊ ಮುಖ್ಯ ಭೂಮಿಕೆಯಲ್ಲಿದ್ದಾರೆ.
ಸಾಹಿತ್ಯ ಮತ್ತು ರಾಗ ಸಂಯೋಜನ್‌ ಮೆಲ್ವಿನ್‌ ಪೆರಿಸ್‌, ಛಾಯಾಗ್ರಹಣ ವಿ. ರಾಮಾಂಜನೆಯ ಮತ್ತು ಸಂಕಲನ ಮೆವಿನ್‌ ಜೊಯೆಲ್‌ ಪಿಂಟೊ, ಶಿರ್ತಾಡಿ ಇವರದ್ದು.

ಇತ್ತೀಚಿನ ಸುದ್ದಿ

ಜಾಹೀರಾತು