8:36 PM Monday10 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ಮಂಡ್ಯ: ಅಪ್ರಾಪ್ತ ವಯಸ್ಸಿನ ಪ್ರಿಯತಮೆ ಮನೆ ಎದುರು ಯುವಕ ಸ್ಫೋಟಿಸಿಕೊಂಡು ಆತ್ಮಹತ್ಯೆ

29/12/2024, 17:21

ಮಂಡ್ಯ(reporterkarnataka.com): ಪಾಗಲ್ ಪ್ರೇಮಿಯೊಬ್ಬ ತಾನು ಪ್ರೀತಿಸುತ್ತಿದ್ದ ಅಪ್ರಾಪ್ತೆ ಮನೆ ಎದುರು ಜಿಲೆಟಿನ್ ಸ್ಫೋಟಿಸಿಕೊಂಡು
ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ.
ಮಂಡ್ಯ ಸಮೀಪದ ನಾಗಮಂಗಲ ಬಳಿಯ ಗ್ರಾಮವೊಂದರಲ್ಲಿ‌ ಶನಿವಾರ)ರಾಮಚಂದ್ರು(21)ಎಂಬಾತ ಜಿಲೆಟಿನ್ ಸ್ಫೋಟಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.
ಕಲ್ಲು ಗಣಿಗಾರಿಕೆಗೆ ಬಳಸುವ ಜಿಲೆಟಿನ್ ಆತ ಬಳಸಿಕೊಂಡಿದ್ದಾನೆ.
ಜಿಲೆಟಿನ್ ಸ್ಫೋಟಕ್ಕೆ ಯುವಕನ ಹೊಟ್ಟೆಯ ಭಾಗ ಛಿದ್ರ ಛಿದ್ರವಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಒಂದು ವರ್ಷದ ಹಿಂದೆ ಅಪ್ರಾಪ್ತೆ ವಯಸ್ಸಿನ ಪ್ರಿಯತಮೆಯನ್ನು
ಕರೆದೊಯ್ದ ಹಿನ್ನೆಲೆಯಲ್ಲಿ ರಾಮಚಂದ್ರು ವಿರುದ್ಧ ಫೋಕ್ಸೋ ಕೇಸ್ ದಾಖಲಾಗಿತ್ತು. ಫೋಕ್ಸೋ ಕೇಸ್‌ನಲ್ಲಿ 6 ತಿಂಗಳು ಜೈಲುವಾಸ ಅನುಭವಿಸಿದ್ದ. ಬಳಿಕ 2 ಕುಟುಂಬಗಳ ರಾಜಿ ಸಂಧಾನ ಬಳಿಕ ಕೇಸ್ ವಾಪಸ್ ಪಡೆಯಲಾಗಿತ್ತು. ನಂತರ ಅಪ್ರಾಪ್ತ ಪ್ರಿಯತಮೆ ರಾಮಚಂದ್ರನ ಸಂಪರ್ಕಕ್ಕೆ ಸಿಕ್ಕಿರಲಿಲ್ಲ. ಇದರಿಂದ ಮನನೊಂದ ರಾಮಚಂದ್ರ ಶನಿವಾರ ಆಕೆಯ ಮುನೆಯ ಮುಂದೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಪ್ರಕರಣವನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದು, ಸ್ಥಳಕ್ಕೆ ಬಾಂಬ್ ಪತ್ತೆ ಹಾಗೂ ‌ನಿಷ್ಕ್ರಿಯ ದಳ‌ ದೌಡಾಯಿಸಿ ಸ್ಫೋಟಕ್ಕೆ ಬಳಸಿರುವ ವಸ್ತು ಹಾಗೂ ತೀವ್ರತೆ ಬಗ್ಗೆಯೂ ಪರಿಶೀಲನೆ ನಡೆಸುತ್ತಿದ್ದಾರೆ.
ಯುವಕ ಜಿಲೆಟಿನ್ ಸ್ಟೋಟಿಸಿಕೊಂಡು ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ . ಈ ಹಿಂದೆ ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲಾಗಿತ್ತು. ಅಪ್ರಾಪ್ತಯನ್ನೆ ಮನೆಯಿಂದ ಕರೆದುಕೊಂಡು ಹೋಗಿದ್ದ. ಈ ಸಂಬಂಧ ನಾಗಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೂರು ತಿಂಗಳು ಜೈಲಿನಲ್ಲಿ ಇದ್ದು ಬಂದಿದ್ದಾನೆ. ಆನಂತರ ಕುಟುಂಬಸ್ಥರು ರಾಜೀ ಮಾಡಿಕೊಂಡಿಕೊಂಡಿದ್ದರು .ಮೃತ ಯುವಕ ಲಾರಿ ಚಾಲಕನಾಗಿ ಕೆಲಸ ಮಾಡುತ್ತಿದ್ದ. ನಿನ್ನೆ ರಾತ್ರಿ ಸಹ ಸ್ನೇಹಿತರ ಜೊತೆ ಮದ್ಯಸೇವನೆ ಕೂಡ ಮಾಡಿದ್ದ. ಸ್ಟೋಟಕ ಎಲ್ಲಿ ಸಿಕ್ಕಿದೆ ಎಂಬ ಬಗ್ಗೆ ತನಿಖೆ ಮಾಡಲಾಗುತ್ತಿದೆ. ಸ್ಪೋಟಕ ನೀಡಿದವರ ವಿರುದ್ಧ ಕೂಡ ಕ್ರಮ ತೆಗೆದುಕೊಳ್ಳಲಾಗುತ್ತದೆ
ಎಂದು ಮಂಡ್ಯ ಎಸ್ ಪಿ ಮಲ್ಲಿಕಾರ್ಜುನ ಬಾಲದಂಡಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು