2:43 AM Sunday20 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ಮಂಡ್ಯ: ಅಪ್ರಾಪ್ತ ವಯಸ್ಸಿನ ಪ್ರಿಯತಮೆ ಮನೆ ಎದುರು ಯುವಕ ಸ್ಫೋಟಿಸಿಕೊಂಡು ಆತ್ಮಹತ್ಯೆ

29/12/2024, 17:21

ಮಂಡ್ಯ(reporterkarnataka.com): ಪಾಗಲ್ ಪ್ರೇಮಿಯೊಬ್ಬ ತಾನು ಪ್ರೀತಿಸುತ್ತಿದ್ದ ಅಪ್ರಾಪ್ತೆ ಮನೆ ಎದುರು ಜಿಲೆಟಿನ್ ಸ್ಫೋಟಿಸಿಕೊಂಡು
ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ.
ಮಂಡ್ಯ ಸಮೀಪದ ನಾಗಮಂಗಲ ಬಳಿಯ ಗ್ರಾಮವೊಂದರಲ್ಲಿ‌ ಶನಿವಾರ)ರಾಮಚಂದ್ರು(21)ಎಂಬಾತ ಜಿಲೆಟಿನ್ ಸ್ಫೋಟಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.
ಕಲ್ಲು ಗಣಿಗಾರಿಕೆಗೆ ಬಳಸುವ ಜಿಲೆಟಿನ್ ಆತ ಬಳಸಿಕೊಂಡಿದ್ದಾನೆ.
ಜಿಲೆಟಿನ್ ಸ್ಫೋಟಕ್ಕೆ ಯುವಕನ ಹೊಟ್ಟೆಯ ಭಾಗ ಛಿದ್ರ ಛಿದ್ರವಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಒಂದು ವರ್ಷದ ಹಿಂದೆ ಅಪ್ರಾಪ್ತೆ ವಯಸ್ಸಿನ ಪ್ರಿಯತಮೆಯನ್ನು
ಕರೆದೊಯ್ದ ಹಿನ್ನೆಲೆಯಲ್ಲಿ ರಾಮಚಂದ್ರು ವಿರುದ್ಧ ಫೋಕ್ಸೋ ಕೇಸ್ ದಾಖಲಾಗಿತ್ತು. ಫೋಕ್ಸೋ ಕೇಸ್‌ನಲ್ಲಿ 6 ತಿಂಗಳು ಜೈಲುವಾಸ ಅನುಭವಿಸಿದ್ದ. ಬಳಿಕ 2 ಕುಟುಂಬಗಳ ರಾಜಿ ಸಂಧಾನ ಬಳಿಕ ಕೇಸ್ ವಾಪಸ್ ಪಡೆಯಲಾಗಿತ್ತು. ನಂತರ ಅಪ್ರಾಪ್ತ ಪ್ರಿಯತಮೆ ರಾಮಚಂದ್ರನ ಸಂಪರ್ಕಕ್ಕೆ ಸಿಕ್ಕಿರಲಿಲ್ಲ. ಇದರಿಂದ ಮನನೊಂದ ರಾಮಚಂದ್ರ ಶನಿವಾರ ಆಕೆಯ ಮುನೆಯ ಮುಂದೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಪ್ರಕರಣವನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದು, ಸ್ಥಳಕ್ಕೆ ಬಾಂಬ್ ಪತ್ತೆ ಹಾಗೂ ‌ನಿಷ್ಕ್ರಿಯ ದಳ‌ ದೌಡಾಯಿಸಿ ಸ್ಫೋಟಕ್ಕೆ ಬಳಸಿರುವ ವಸ್ತು ಹಾಗೂ ತೀವ್ರತೆ ಬಗ್ಗೆಯೂ ಪರಿಶೀಲನೆ ನಡೆಸುತ್ತಿದ್ದಾರೆ.
ಯುವಕ ಜಿಲೆಟಿನ್ ಸ್ಟೋಟಿಸಿಕೊಂಡು ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ . ಈ ಹಿಂದೆ ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲಾಗಿತ್ತು. ಅಪ್ರಾಪ್ತಯನ್ನೆ ಮನೆಯಿಂದ ಕರೆದುಕೊಂಡು ಹೋಗಿದ್ದ. ಈ ಸಂಬಂಧ ನಾಗಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೂರು ತಿಂಗಳು ಜೈಲಿನಲ್ಲಿ ಇದ್ದು ಬಂದಿದ್ದಾನೆ. ಆನಂತರ ಕುಟುಂಬಸ್ಥರು ರಾಜೀ ಮಾಡಿಕೊಂಡಿಕೊಂಡಿದ್ದರು .ಮೃತ ಯುವಕ ಲಾರಿ ಚಾಲಕನಾಗಿ ಕೆಲಸ ಮಾಡುತ್ತಿದ್ದ. ನಿನ್ನೆ ರಾತ್ರಿ ಸಹ ಸ್ನೇಹಿತರ ಜೊತೆ ಮದ್ಯಸೇವನೆ ಕೂಡ ಮಾಡಿದ್ದ. ಸ್ಟೋಟಕ ಎಲ್ಲಿ ಸಿಕ್ಕಿದೆ ಎಂಬ ಬಗ್ಗೆ ತನಿಖೆ ಮಾಡಲಾಗುತ್ತಿದೆ. ಸ್ಪೋಟಕ ನೀಡಿದವರ ವಿರುದ್ಧ ಕೂಡ ಕ್ರಮ ತೆಗೆದುಕೊಳ್ಳಲಾಗುತ್ತದೆ
ಎಂದು ಮಂಡ್ಯ ಎಸ್ ಪಿ ಮಲ್ಲಿಕಾರ್ಜುನ ಬಾಲದಂಡಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು