2:50 PM Thursday26 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್

ಇತ್ತೀಚಿನ ಸುದ್ದಿ

ಸೂತಕದ ಮನೆಯಂತಿದ್ದ ಮುರುಡೇಶ್ವರ ಕಡಲ ಕಿನಾರೆಗೆ ಮತ್ತೆ ರಂಗು: ಮೋಜು- ಮಸ್ತಿಗೆ ಜಿಲ್ಲಾಡಳಿತ ಪರ್ಮಿಷನ್

29/12/2024, 21:06

ಭಟ್ಕಳ(reporterkarnataka.com): ಮೂವರು ಶಾಲಾ ಬಾಲಕಿಯ ಇತ್ತೀಚೆಗೆ ಆಹುತಿ ಪಡೆದು ಸೂತಕದ ಮನೆಯಂತಿದ್ದ ಮುರುಡೇಶ್ವರ ಕಡಲ ಕಿನಾರೆಗೆ ಮತ್ತೆ ರಂಗು ಬಂದಿದೆ. ಜಿಲ್ಲಾಡಳಿತ ಇಲ್ಲಿ ಜಲಕ್ರೀಡೆಗೆ ನಡೆಸಲು ಪ್ರವಾಸಿಗರಿಗೆ ಹೇರಿದ್ದ ನಿರ್ಬಂಧವನ್ನು ವಾಪಸ್ ಪಡೆದಿದೆ.
ಭಟ್ಕಳ ಸಮೀಪದ ಮುರುಡೇಶ್ವರ ದೇವಾಲಯ ದೇಶ- ವಿದೇಶಗಳ ಭಕ್ತರ, ಪ್ರವಾಸಿಗರ ಆಗಮನದ ತಾಣವಾಗಿದೆ. ಆಗಸದೆತ್ತರದ ಇಲ್ಲಿನ ಭಗವಾನ್ ಶಿವನ ಸುಂದರ ಮೂರ್ತಿ ವಿಶೇಷ ಆಕರ್ಷಣೆಯಾಗಿದೆ. ಇತ್ತೀಚೆಗೆ ಇಲ್ಲಿ ಪ್ರವಾಸಕ್ಕೆ ಆಗಮಿಸಿದ ಕೋಲಾರ ಜಿಲ್ಲೆಯ ಶಾಲಾ ಮಕ್ಕಳ ಪೈಕಿ ಮೂವರು ಬಾಲಕಿಯರು ಸಮುದ್ರಪಾಲಾಗಿ ಜೀವ ಕಳೆದುಕೊಂಡಿದ್ದರು. ಸುರಕ್ಷತೆಯ ಬಗ್ಗೆ ಪ್ರವಾಸೋದ್ಯಮ ಇಲಾಖೆಯ ನಿರ್ಲಕ್ಷ್ಯ ಬಗ್ಗೆ ಸಾರ್ವಜನಿಕರಿಂದ ಕಟು ಟೀಕೆ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಸಮುದ್ರದಲ್ಲಿ ಜಲಕ್ರೀಡೆಗೆ ನಿರ್ಬಂಧ ವಿಧಿಸಿತ್ತು.
ಇದೀಗ ಜಿಲ್ಲಾಡಳಿತ ದುರಂತದ ನಡೆದು 19 ದಿನಗಳ ಬಳಿಕ ಕಡಲತೀರ ಪ್ರವಾಸಿಗರಿಗೆ ಮುಕ್ತವಾಗಿಸಿದೆ. ಕಡಲತೀರದಲ್ಲಿ ಅಪಾಯಕಾರಿ ವಲಯ (ಡೇಂಜರ್ ಜೋನ್) ಮತ್ತು ಸುರಕ್ಷಿತ ವಲಯ(ಸೇಫ್ ಜೋನ್) ಎಂದು ಎರಡು ವಿಭಾಗ ಮಾಡಿ ಗುರುತಿಸಲಾಗಿದೆ. ಜಿಲ್ಲಾಡಳಿತ ಗುರುತಿಸಿದ ಸೇಫ್ ಜೋನ್‌ನಲ್ಲಿ ಮಾತ್ರ ಪ್ರವಾಸಿಗರು ಈಜಾಡಬಹುದು.

ಇತ್ತೀಚಿನ ಸುದ್ದಿ

ಜಾಹೀರಾತು