12:07 AM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಪಂಜಿಮೊಗರು ಇಹ್ಸಾನ್ ವೆಲ್ಫೆಲ್ ಟ್ರಸ್ಟ್ ನಿಂದ ಬಡ ಕುಟುಂಬಕ್ಕೆ ಮನೆ ಹಸ್ತಾಂತರ

29/12/2024, 21:47

ಮಂಗಳೂರು(reporterkarnataka.com): ಪಂಜಿಮೊಗರು ಇಹ್ಸಾನ್ ವೆಲ್ಫೆಲ್ ಟ್ರಸ್ಟ್ ಇದರ ಸುಕೂನ್ ಯೋಜನೆಯಡಿಯಲ್ಲಿ ನಿರ್ಮಿಸಿ ಬಡ ಕುಟುಂಬಕ್ಕೆ ಮನೆ ಹಸ್ತಾಂತರ ಕಾರ್ಯಕ್ರಮ ನಡೆಯಿತು.


ಕೂಳೂರು ಮುಹಿಯುದ್ದೀನ್ ಜುಮಾ ಮಸೀದಿ ಮುದರ್ರಿಸ್ ಸಾಬಿತ್‌ ಸಖಾಫಿ ತಂಙಳ್ ನೂತನ ಮನೆಯನ್ನು ಹಸ್ತಾಂತರಿಸಿದರು.
ಮಂಗಳೂರು ನಗರ ಪಾಲಿಕೆಯ ವಿರೋಧ ಪಕ್ಷದ ನಾಯಕ ಅನಿಲ್ ಕುಮಾರ್ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ ಹಲವು ಸಂಘ ಸಂಸ್ಥೆಗಳು ಬಡವರಿಗೆ ಒಂದು ಕೊಠಡಿಯ ಮನೆ ನಿರ್ಮಿಸಿಕೊಡುವಂತದ್ದು ನಾವು ನೋಡಿದ್ದೇವೆ. ಅದರೆ ಇಹ್ಸಾನ್ ಟ್ರಸ್ಟ್ ಎರಡು ವಿಶಾಲವಾದ ಕೊಠಡಿಯ ಸುಸಜ್ಜಿತವಾದ ಉತ್ತಮ ಗುಣಮಟ್ಟದ ಮನೆ ನಿರ್ಮಿಸಿ ಕೊಡುವ ಮೂಲಕ ಇದರ ಸಂಘ ಸಂಸ್ಥೆಗಳಿಗೆ ಮಾದರಿಯಾಗಿದೆ. ಈ ಮನೆಯವರು ಪ್ರತಿ ದಿನ ಇಹ್ಸಾನ್ ತಂಡದ ಸದಸ್ಯರಿಗೆ ಪ್ರಾರ್ಥಿಸುತ್ತಾರೆ. ಅದರಲ್ಲಿ ಸಂಶಯವಿಲ್ಲ ಎಂದು ಹೇಳಿದರು.
ಕಾವೂರು ಪೊಲೀಸ್ ಠಾಣಾ ಪೋಲಿಸ್ ನಿರೀಕ್ಷಕ ರಾಘವೇಂದ್ರ ಎಂ. ಬೈಂದೂರು‌ ಮುಖ್ಯ ಅತಿಥಿಯಾಗಿ ಭಾಗವಹಿಸಿ‌ ಮಾತನಾಡಿ ಬಡವರಿಗೆ ಮದುವೆ ಮಾಡುವುದು ಮನೆ ನಿರ್ಮಿಸುದು ಶೈಕ್ಷಣಿಕ ಹಿಂದುಳಿದವರಿಗೆ ಸಹಾಯ ಮಾಡುವುದು ಅತ್ಯಂತ ಪುಣ್ಯದ ಕೆಲಸವಾಗಿದೆ. ಈ ಮೂರು‌ ಕಾರ್ಯದಲ್ಲಿ ಇಹ್ಸಾನ್ ಟ್ರಸ್ಟ್ ಸಕ್ರಿಯವಾಗಿದೆ. ಅಪರಾಧ ತಡೆ ಮಾಸಾಚರಣೆಯನ್ನು ಕಾವೂರು ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಅಯೋಸಿದ್ದು ಕಳೆದ ಒಂದು ವರ್ಷಗಳಿಂದ ಸುಮಾರು 113 ಕೇಸ್ ಗಳನ್ನು ದಾಖಲಿಸಿದ್ದೇವೆ. ಈ ಭಾಗದ ಜನರು ಮಾದಕ ದ್ರವ್ಯ ವ್ಯಸನಕ್ಕೆ ತುತ್ತಾಗದಂತೆ ಜಾಗೃತರಾಗಬೇಕು ಎಂದು ಹೇಳಿದರು.
ಇಹ್ಸಾನ್ ವೆಲ್ಫೇರ್ ಟ್ರಸ್ಟ್ ಅಧ್ಯಕ್ಷ ನಿಸಾರ್ ಕೆ.ಎಂ‌. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು. ತೈಬಾ ಆಕಾಡೆಮಿ ಮ್ಯಾನೇಜರ್ ಬಶೀರ್‌ ಮದನಿ ಅಲ್-ಕಾಮಿಲ್ , ಕೂಳೂರು ಮುಹೀಯುದ್ದೀನ್ ಜುಮಾ‌ ಮಸೀದಿ ಅಧ್ಯಕ್ಷ ಕೆ.ಅಬ್ಬಾಸ್ ಹಾಜಿ, ಕೆಪಿಸಿಸಿ ಕಾರ್ಯದರ್ಶಿ ಇನಾಯತ್ ಅಲಿ, ಎಸ್ ಡಿಪಿಐ ರಾಜ್ಯ ಕಾರ್ಯದರ್ಶಿ ರಿಯಾಝ್ ಕಡಂಬು, ಸಿಪಿಎಂ ಮುಖಂಡ ದಯಾನಂದ ಶೆಟ್ಟಿ, ಕೂಳೂರು ಕಾವೂರು ಮುಸ್ಲಿಂ ಒಕ್ಕೂಟ ಅಧ್ಯಕ್ಷ ಹುಸೈನ್ ರಿಯಾಝ್, ಅಲ್-ಫಾರೂಕ್ ಜುಮಾ ಮಸೀದಿ ಅಧ್ಯಕ್ಷ ನೌಷಾದ್ ಅಲಿ, ಇಹ್ಸಾನ್ ವೆಲ್ಫೇರ್ ಟ್ರಸ್ಟ್ ಉಪಾಧ್ಯಕ್ಷ ಆಫ್ರಿದ್ ಉಪಸ್ಥಿತರಿದ್ದರು.
ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಜುನೈದ್ ಸ್ವಾಗತಿಸಿದರು. ಕಾರ್ಯದರ್ಶಿ ಶಾರೀಕ್ ವಂದಿಸಿದರು. ಸದಸ್ಯ ಶಕೀಲ್ ಕೂಳೂರು ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು