11:36 PM Saturday8 - November 2025
ಬ್ರೇಕಿಂಗ್ ನ್ಯೂಸ್
ಜವಾಬ್ದಾರಿಯಿಂದ ನುಣುಚಿಕೊಳ್ಳಲು ಪ್ರಧಾನಿಗೆ ಸಿಎಂ ಪತ್ರ: ಕೇಂದ್ರ ಸಚಿವ ಕುಮಾರಸ್ವಾಮಿ ಆರೋಪ ಯುವಕನ ಅನುಮಾನಾಸ್ಪದ ಸಾವು : ರಾಷ್ಟ್ರೀಯ ಹೆದ್ದಾರಿಯಲ್ಲಿ ಮೃತದೇಹ ಇಟ್ಟು ಪ್ರತಿಭಟನೆ ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌…

ಇತ್ತೀಚಿನ ಸುದ್ದಿ

ಹೊಸ ವರ್ಷ ಆಚರಣೆಗೆ ಕಾಫಿನಾಡು ಕಾತರ: ಜಿಲ್ಲಾಡಳಿತದಿಂದ ಮಾರ್ಗಸೂಚಿ ಬಿಡುಗಡೆ

30/12/2024, 15:26

*ಈಗಾಗಲೇ ಪ್ರವಾಸಿಗರಿಂದ ತುಂಬಿರೋ ಕಾಫಿನಾಡು ಚಿಕ್ಕಮಗಳೂರು*

*31ರ ಸಂಜೆ 6 ರಿಂದ 1ರ ಬೆಳಗ್ಗೆ 6ರವರೆಗೆ ಪ್ರವಾಸಿ ತಾಣಗಳಿಗೆ ಸಂಪೂರ್ಣ ನಿರ್ಬಂಧ*

*ರಾಜ್ಯದ ಅತ್ಯಂತ ಎತ್ತರ ಪ್ರದೇಶವಾದ ಮುಳ್ಳಯ್ಯನಗಿರಿ, ದತ್ತಪೀಠ, ದೇವರಮನೆ ಸೇರಿದಂತೆ ಝರಿ ಫಾಲ್ಸ್ , ಮಾಣಿಕ್ಯಧಾರ ಫಾಲ್ಸ್ ನ ಪ್ರಮುಖ ಪ್ರವಾಸಿತಾಣಗಳಿಗೆ ನಿರ್ಬಂಧ*

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಹೊಸ ವರ್ಷದ ಆಚರಣೆಗೆ ಕಾಫಿನಾಡು ಚಿಕ್ಕಮಗಳೂರು ಜಿಲ್ಲೆ ಕಾತರದಿಂದ ಕಾಯುತ್ತಿದ್ದು, ಜಿಲ್ಲಾಡಳಿತ ಮಾರ್ಗಸೂಚಿ ಬಿಡುಗಡೆ ಮಾಡಿದೆ.
ಮಾರ್ಗಸೂಚಿ ಪ್ರಕಾರ ಡಿ. 31ರ ಸಂಜೆ 6ರಿಂದ 1ರ ಬೆಳಗ್ಗೆ 6ರವರೆಗೆ ಪ್ರವಾಸಿ ತಾಣಗಳಿಗೆ ಸಂಪೂರ್ಣ ನಿರ್ಬಂಧ ಹೇರಲಾಗಿದೆ. ರಾಜ್ಯದ ಅತ್ಯಂತ ಎತ್ತರ ಪ್ರದೇಶವಾದ ಮುಳ್ಳಯ್ಯನಗಿರಿ, ದತ್ತಪೀಠ, ದೇವರಮನೆ ಸೇರಿದಂತೆ ಝರಿ ಫಾಲ್ಸ್ , ಮಾಣಿಕ್ಯಧಾರ ಫಾಲ್ಸ್ ನ ಪ್ರಮುಖ ಪ್ರವಾಸಿ ತಾಣಗಳು ಕೂಡ ನಿರ್ಬಂಧದಲ್ಲಿ ಸೇರಿವೆ.
ಕಡ್ಡಾಯವಾಗಿ ರೇವ್ ಪಾರ್ಟಿ ರೀತಿಯ ಕಾರ್ಯಕ್ರಮಗಳಿಗೆ ಅವಕಾಶ ನೀಡಿಲ್ಲ. ಆಯೋಜಕರ ಮೇಲೆಯೇ ಪ್ರಕರಣ ದಾಖಲಿಸಲಾಗುತ್ತದೆ.
ರಾತ್ರಿ 10ರ ನಂತರ ಔಟ್ ಡೋರ್ ಡಿಜೆಗೆ ಸಂಪೂರ್ಣ ನಿಷೇಧ ಹೇರಲಾಗಿದೆ.
ಸಿಎಲ್ 5 ಲೈಸನ್ಸ್ ಪಡೆದವರು ಸಿಸಿ ಕ್ಯಾಮರಾ ಹಾಕಬೇಕು, ಪೊಲೀಸ್ ಅನುಮತಿ ಪಡೆಯಬೇಕು.
ಆದಾಯಕ್ಕಾಗಿ ಇದೇ ಮೊದಲ ಬಾರಿಗೆ ಸಿ.ಎಲ್. 5 ಗೆ ಅನುಮತಿ ಸರ್ಕಾರ ನೀಡಿದೆ.
ಒಂದು ದಿನದ ಅನುಮತಿಗೆ 12000 ಸಾವಿರ ನಿಗಧಿ ಮಾಡಿದೆ. ಮುಖ್ಯರಸ್ತೆಯಲ್ಲಿ ಜಿಗ್ ಜಾಗ್ ರೀತಿ ಬ್ಯಾರಿಕೇಡ್ ಅಳವಡಿಸಲಾಗುವುದು.
ಕುಡಿದು ವಾಹನ ಚಾಲನೆ, ವೀಲ್ಹಿಂಗ್ ಮಾಡೋರ ಮೇಲೆ ಖಾಕಿ ಹದ್ದಿನಕಣ್ಣು ಇರಿಸಿದೆ. ಈ ಕುರಿತು ಚಿಕ್ಕಮಗಳೂರು ಎಸ್ಪಿ ವಿಕ್ರಂ ಅಮಟೆ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು