10:21 PM Sunday22 - February 2026
ಬ್ರೇಕಿಂಗ್ ನ್ಯೂಸ್
ಇಬ್ಬರು ಅಂತರ್ ರಾಜ್ಯ ಗಾಂಜಾ ಮಾರಾಟಗಾರರ ಸಹಿತ 4 ಮಂದಿ ಬಂಧನ: 12… ಯುವ ಕಾಂಗ್ರೆಸ್ಸಿಗರು ಬೇಷರತ್ ಕ್ಷಮೆ ಕೇಳಲಿ: ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಧೀರಜ್… ಸಿದ್ದಾಪುರ: ವಾಹನಗಳ ಮೇಲೆ ಮುಂದುವರೆದ ಕಾಡಾನೆ ದಾಳಿ; ಕೂದಲು ಎಳೆ ಅಂತರದಲ್ಲಿ ಕಾರ್ಮಿಕರು… ಪಿರಿಯಾಪಟ್ಟಣದ ರಾಷ್ಟ್ರೀಯ ಹೆದ್ದಾರಿ 275 ನಲ್ಲಿ ಅರಣ್ಯ ಬೆಂಕಿಗೆ ಅಹುತಿ:ಅಪಾರ ಪ್ರಮಾಣದ ಬಿದಿರು… ಸಿದ್ದಾಪುರ ಸಮೀಪದ ಕರಡಿಗೋಡು ಗ್ರಾಮದಲ್ಲಿ ವಾಹನ ಡಿಕ್ಕಿ: ಕಾಡುಕೋಣ ಕಾಲು ಮುರಿತ ಐರ್ಲೆಂಡ್‌ನಲ್ಲಿ ಕಡಬ ಕುಟ್ರುಪಾಡಿಯ ಯುವಕ ನಿಗೂಢವಾಗಿ ಸಾವು: ನೇಣು ಬಿಗಿದ ಸ್ಥಿತಿಯಲ್ಲಿ ಶವ… Kodagu | ಸಿದ್ದಾಪುರ: ಟ್ರ್ಯಾಕ್ಟರ್ ಮಗುಚಿ ಬಾದಾಮಿಯ ಕಾರ್ಮಿಕ ದುರ್ಮರಣ Kodagu | ಸಿದ್ದಾಪುರ ಬಳಿ ಕಾರು ಮೇಲೆ ಕಾಡಾನೆ ದಾಳಿ: ಜಖಂ ಕುಖ್ಯಾತ ರೌಡಿ ಶೀಟರ್ ಸಫ್ವಾನ್ ಬಂಧನ: ಮಂಗಳೂರು ಸಿಸಿಬಿ ಪೊಲೀಸರಿಂದ 26 ಪ್ರಕರಣಗಳ… ಆಗುಂಬೆ ಬಸ್ ನಿಲ್ದಾಣ ಬಳಿ ಎರಡು ಪ್ರತ್ಯೇಕ ಅಪಘಾತ: ಇಬ್ಬರಿಗೆ ಗಾಯ

ಇತ್ತೀಚಿನ ಸುದ್ದಿ

ಹೊಸ ವರ್ಷ ಆಚರಣೆಗೆ ಕಾಫಿನಾಡು ಕಾತರ: ಜಿಲ್ಲಾಡಳಿತದಿಂದ ಮಾರ್ಗಸೂಚಿ ಬಿಡುಗಡೆ

30/12/2024, 15:26

*ಈಗಾಗಲೇ ಪ್ರವಾಸಿಗರಿಂದ ತುಂಬಿರೋ ಕಾಫಿನಾಡು ಚಿಕ್ಕಮಗಳೂರು*

*31ರ ಸಂಜೆ 6 ರಿಂದ 1ರ ಬೆಳಗ್ಗೆ 6ರವರೆಗೆ ಪ್ರವಾಸಿ ತಾಣಗಳಿಗೆ ಸಂಪೂರ್ಣ ನಿರ್ಬಂಧ*

*ರಾಜ್ಯದ ಅತ್ಯಂತ ಎತ್ತರ ಪ್ರದೇಶವಾದ ಮುಳ್ಳಯ್ಯನಗಿರಿ, ದತ್ತಪೀಠ, ದೇವರಮನೆ ಸೇರಿದಂತೆ ಝರಿ ಫಾಲ್ಸ್ , ಮಾಣಿಕ್ಯಧಾರ ಫಾಲ್ಸ್ ನ ಪ್ರಮುಖ ಪ್ರವಾಸಿತಾಣಗಳಿಗೆ ನಿರ್ಬಂಧ*

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಹೊಸ ವರ್ಷದ ಆಚರಣೆಗೆ ಕಾಫಿನಾಡು ಚಿಕ್ಕಮಗಳೂರು ಜಿಲ್ಲೆ ಕಾತರದಿಂದ ಕಾಯುತ್ತಿದ್ದು, ಜಿಲ್ಲಾಡಳಿತ ಮಾರ್ಗಸೂಚಿ ಬಿಡುಗಡೆ ಮಾಡಿದೆ.
ಮಾರ್ಗಸೂಚಿ ಪ್ರಕಾರ ಡಿ. 31ರ ಸಂಜೆ 6ರಿಂದ 1ರ ಬೆಳಗ್ಗೆ 6ರವರೆಗೆ ಪ್ರವಾಸಿ ತಾಣಗಳಿಗೆ ಸಂಪೂರ್ಣ ನಿರ್ಬಂಧ ಹೇರಲಾಗಿದೆ. ರಾಜ್ಯದ ಅತ್ಯಂತ ಎತ್ತರ ಪ್ರದೇಶವಾದ ಮುಳ್ಳಯ್ಯನಗಿರಿ, ದತ್ತಪೀಠ, ದೇವರಮನೆ ಸೇರಿದಂತೆ ಝರಿ ಫಾಲ್ಸ್ , ಮಾಣಿಕ್ಯಧಾರ ಫಾಲ್ಸ್ ನ ಪ್ರಮುಖ ಪ್ರವಾಸಿ ತಾಣಗಳು ಕೂಡ ನಿರ್ಬಂಧದಲ್ಲಿ ಸೇರಿವೆ.
ಕಡ್ಡಾಯವಾಗಿ ರೇವ್ ಪಾರ್ಟಿ ರೀತಿಯ ಕಾರ್ಯಕ್ರಮಗಳಿಗೆ ಅವಕಾಶ ನೀಡಿಲ್ಲ. ಆಯೋಜಕರ ಮೇಲೆಯೇ ಪ್ರಕರಣ ದಾಖಲಿಸಲಾಗುತ್ತದೆ.
ರಾತ್ರಿ 10ರ ನಂತರ ಔಟ್ ಡೋರ್ ಡಿಜೆಗೆ ಸಂಪೂರ್ಣ ನಿಷೇಧ ಹೇರಲಾಗಿದೆ.
ಸಿಎಲ್ 5 ಲೈಸನ್ಸ್ ಪಡೆದವರು ಸಿಸಿ ಕ್ಯಾಮರಾ ಹಾಕಬೇಕು, ಪೊಲೀಸ್ ಅನುಮತಿ ಪಡೆಯಬೇಕು.
ಆದಾಯಕ್ಕಾಗಿ ಇದೇ ಮೊದಲ ಬಾರಿಗೆ ಸಿ.ಎಲ್. 5 ಗೆ ಅನುಮತಿ ಸರ್ಕಾರ ನೀಡಿದೆ.
ಒಂದು ದಿನದ ಅನುಮತಿಗೆ 12000 ಸಾವಿರ ನಿಗಧಿ ಮಾಡಿದೆ. ಮುಖ್ಯರಸ್ತೆಯಲ್ಲಿ ಜಿಗ್ ಜಾಗ್ ರೀತಿ ಬ್ಯಾರಿಕೇಡ್ ಅಳವಡಿಸಲಾಗುವುದು.
ಕುಡಿದು ವಾಹನ ಚಾಲನೆ, ವೀಲ್ಹಿಂಗ್ ಮಾಡೋರ ಮೇಲೆ ಖಾಕಿ ಹದ್ದಿನಕಣ್ಣು ಇರಿಸಿದೆ. ಈ ಕುರಿತು ಚಿಕ್ಕಮಗಳೂರು ಎಸ್ಪಿ ವಿಕ್ರಂ ಅಮಟೆ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು