10:50 PM Wednesday4 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ಸಾಹಿತ್ಯ ಅನುವಾದ ಸೇತುವೆ ಕಟ್ಟುವ ಕೆಲಸದಂತೆ: ಚಿಂತಕ ರಹಮತ್ ತರೀಕೆರೆ ಪ್ರತಿಪಾದನೆ

30/12/2024, 15:30

ಹೊಸಪೇಟೆ(reporter Karnataka.com): ವಿದ್ವೇಷಗಳಿರುವ ಸಮಾಜದಲ್ಲಿ ಮಾನವೀಯ ಸಾಹಿತ್ಯ ಅನುವಾದ ಮಾಡುವುದು ಸೇತುವೆ ಕಟ್ಟುವ ಕೆಲಸದಂತಿದೆ ಎಂದು ಚಿಂತಕ ರಹಮತ್ ತರೀಕೆರೆ ಪ್ರತಿಪಾದಿಸಿದರು.
ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದ ಸರ್ಕಾರಿ ನೌಕರರ ಭವನದಲ್ಲಿ ಸಾಹಿತಿ, ಲೇಖಕಿ ನೂರ್ ಜಹಾನ್ ಅವರು ಅನುವಾದಿಸಿದ “ಗಾಲಿಬ್‌ರವರ ಗಜಲ್” ಉರ್ದುವಿನಿಂದ ಕನ್ನಡಕ್ಕೆ ಅನುವಾದಿಸಿದ ಕೃತಿಯ ಬಿಡುಗಡೆ ಮತ್ತು ಬಹುಭಾಷಾ ಕವಿಗೋಷ್ಠಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
“ಕನ್ನಡದಲ್ಲಿ ಅನುವಾದಕರೆಂದರೆ ಸೇತುವೆ ಕಟ್ಟುವ ಕೆಲಸ ಮಾಡುವವರು. ಎತ್ತಣ ಮಾಮರ ಎತ್ತಣ ಕೋಗಿಲೆ ಎತ್ತಣಿಂದೆತ್ತ ಸಂಬಂಧವಯ್ಯಾ ಎಂದು ಅಲ್ಲಮ ವಿಸ್ಮಯದಿಂದ ಹೇಳುತ್ತಾನೆ. ಈ ವಿಸ್ಮಯದ ಮಾತು ಸಾಹಿತ್ಯ ಲೋಕದಲ್ಲಿ ಲೇಖಕರು ಪ್ರೇರಣೆ ಪ್ರಭಾವ ಪಡೆಯುವುದಕ್ಕೂ ಅನ್ವಯವಾಗುತ್ತದೆ. ಅತ್ಯಂತ ಗ್ರಾಮೀಣ ಸ್ಥಳೀಯ ಕವಿ ಎನ್ನಲಾದ ಬೇಂದ್ರೆಯವರು ಅರಬ್ಬಿಯಲ್ಲಿ ಬರೆಯುತ್ತಿದ್ದ ಲೆಬನಾನಿನ ಲೇಖಕ ಖಲೀಲ್ ಗಿಬ್ರಾನ್ ಮತ್ತು ಇಂಗ್ಲೆಂಡಿನ ರಸೆಲ್ ಅವರಿಂದ ಪ್ರಭಾವಿತನಾದೆನೆಂದು ಬರೆಯುತ್ತಾರೆ. ಬೆಳಗು ಜಾವ ಕವಿತೆಯಲ್ಲಿ-ಉಮರಖಯಾಮನ ಚೌಪದಿಯನ್ನು ಬೇಂದ್ರೆ ಮರುಸೃಷ್ಟಿಸುತ್ತಾರೆ” ಎಂದು ಹೇಳಿದರು.
ಕುವೆಂಪು ಅವರು ರಾಮಾಯಣ ದರ್ಶನಂ ಬರೆಯುವಾಗ ಮಿಲ್ಟನ್ ಡಾಂಟೆ, ಫಿರ್ದೂಸಿ ಅವರನ್ನು ನೆನೆಯುತ್ತಾರೆ. ಮಾರ್ಕ್ವೆಜ್‌ನ ಕಾದಂಬರಿಯ ಒಂದು ಸಾಲಿನಿಂದ ಪ್ರೇರಿತನಾಗಿ ನಾನು ಕುಸುಮಬಾಲೆ ಬರೆದೆನೆಂದು ದೇವನೂರರು ಹೇಳುತ್ತಾರೆ. ಈ ಕಾಲದಲ್ಲಿ ದೇಶದ ಸಂಸ್ಕೃತಿ, ಧರ್ಮ, ಭಾಷೆಗಳ ಗಡಿಮೀರಿದ ಈ ಸಂಬಂಧವು ಸಾಹಿತ್ಯಲೋಕದಲ್ಲಿ ಸಹಜವಾಗಿದೆ. ನಮ್ಮ ಪಕ್ಕದ ಗಂಗಾವತಿಯಲ್ಲಿ ರಾಘವೇಂದ್ರರಾವ್ ಜಜ್ಬ್ ಎಂಬ ಕವಿಯಿದ್ದರು. ಅವರು ಉರ್ದು ಮತ್ತು ಫಾರಸಿ ಪಂಡಿತರಾಗಿದ್ದರು. ಫಾರಸಿ ಕಾವ್ಯದ ಬಗ್ಗೆ ಅವರು ಬರೆದ ಪುಸ್ತಕ ಮೈಸೂರು ವಿಶ್ವವಿದ್ಯಾಲಯದಿಂದ ಪ್ರಕಟವಾಗಿದೆ. ನಾನು ಇರಾನಿಗೆ ಹೋದಾಗ, ಅಲ್ಲಿ ಚಂದ್ರಭಾನ್ ಬ್ರಾಹ್ಮನ್ ಸ್ಕ್ವೇರ್ ಎಂಬ ಜಾಗವಿತ್ತು. ವಿಚಾರಿಸಿ ನೋಡಿದರೆ, ಮೊಘಲರ ಕಾಲದಲ್ಲಿ ಫಾರಸಿಯಲ್ಲಿ ಕಾವ್ಯ ಬರೆದ ದೆಹಲಿಯ ಕವಿ ಈತ. ಕವಿ ಇಕ್ಬಾಲರು ಏಕಕಾಲಕ್ಕೆ ಟರ್ಕಿಯ ಜಲಾಲುದ್ದೀನ್ ರೂಮಿಯಿಂದಲೂ ಜರ್ಮನಿಯ ನೀಶೆಯಿಂದಲೂ ಪ್ರಭಾವಿತರಾಗಿದ್ದರು. ಸಾಹಿತ್ಯದವರಿಗೆ, ಸಂಗೀತದವರಿಗೆ ಗಡಿಗಳೇ ಇಲ್ಲ” ಎಂದು ಹೇಳಿದರು.
ರಿಯಾಜ್ ಅಹ್ಮದ್ ಗೋಡೆ ಪುಸ್ತಕ ಪರಿಚಯ ಮಾಡಿದರು, ಬಳ್ಳಾರಿಯ ಕನ್ನಡ ಸಾಹಿತ್ಯ ಪರಿಷತ್‌ ರಿಷ್ಕಿ ರುದ್ರಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು