1:24 PM Thursday26 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್

ಇತ್ತೀಚಿನ ಸುದ್ದಿ

ಸಾಹಿತ್ಯ ಅನುವಾದ ಸೇತುವೆ ಕಟ್ಟುವ ಕೆಲಸದಂತೆ: ಚಿಂತಕ ರಹಮತ್ ತರೀಕೆರೆ ಪ್ರತಿಪಾದನೆ

30/12/2024, 16:44

ಗಣೇಶ್ ಇನಾಂದಾರ ಹೊಸಪೇಟೆ

info.reporterkarnataka@gmail.com

ವಿದ್ವೇಷಗಳಿರುವ ಸಮಾಜದಲ್ಲಿ ಮಾನವೀಯ ಸಾಹಿತ್ಯ ಅನುವಾದ ಮಾಡುವುದು ಸೇತುವೆ ಕಟ್ಟುವ ಕೆಲಸದಂತಿದೆ ಎಂದು ಚಿಂತಕ ರಹಮತ್ ತರೀಕೆರೆ ಪ್ರತಿಪಾದಿಸಿದರು.
ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದ ಸರ್ಕಾರಿ ನೌಕರರ ಭವನದಲ್ಲಿ ಸಾಹಿತಿ, ಲೇಖಕಿ ನೂರ್ ಜಹಾನ್ ಅವರು ಅನುವಾದಿಸಿದ “ಗಾಲಿಬ್‌ರವರ ಗಜಲ್” ಉರ್ದುವಿನಿಂದ ಕನ್ನಡಕ್ಕೆ ಅನುವಾದಿಸಿದ ಕೃತಿಯ ಬಿಡುಗಡೆ ಮತ್ತು ಬಹುಭಾಷಾ ಕವಿಗೋಷ್ಠಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
“ಕನ್ನಡದಲ್ಲಿ ಅನುವಾದಕರೆಂದರೆ ಸೇತುವೆ ಕಟ್ಟುವ ಕೆಲಸ ಮಾಡುವವರು. ಎತ್ತಣ ಮಾಮರ ಎತ್ತಣ ಕೋಗಿಲೆ ಎತ್ತಣಿಂದೆತ್ತ ಸಂಬಂಧವಯ್ಯಾ ಎಂದು ಅಲ್ಲಮ ವಿಸ್ಮಯದಿಂದ ಹೇಳುತ್ತಾನೆ. ಈ ವಿಸ್ಮಯದ ಮಾತು ಸಾಹಿತ್ಯ ಲೋಕದಲ್ಲಿ ಲೇಖಕರು ಪ್ರೇರಣೆ ಪ್ರಭಾವ ಪಡೆಯುವುದಕ್ಕೂ ಅನ್ವಯವಾಗುತ್ತದೆ. ಅತ್ಯಂತ ಗ್ರಾಮೀಣ ಸ್ಥಳೀಯ ಕವಿ ಎನ್ನಲಾದ ಬೇಂದ್ರೆಯವರು ಅರಬ್ಬಿಯಲ್ಲಿ ಬರೆಯುತ್ತಿದ್ದ ಲೆಬನಾನಿನ ಲೇಖಕ ಖಲೀಲ್ ಗಿಬ್ರಾನ್ ಮತ್ತು ಇಂಗ್ಲೆಂಡಿನ ರಸೆಲ್ ಅವರಿಂದ ಪ್ರಭಾವಿತನಾದೆನೆಂದು ಬರೆಯುತ್ತಾರೆ. ಬೆಳಗು ಜಾವ ಕವಿತೆಯಲ್ಲಿ-ಉಮರಖಯಾಮನ ಚೌಪದಿಯನ್ನು ಬೇಂದ್ರೆ ಮರುಸೃಷ್ಟಿಸುತ್ತಾರೆ” ಎಂದು ಹೇಳಿದರು.
ಕುವೆಂಪು ಅವರು ರಾಮಾಯಣ ದರ್ಶನಂ ಬರೆಯುವಾಗ ಮಿಲ್ಟನ್ ಡಾಂಟೆ, ಫಿರ್ದೂಸಿ ಅವರನ್ನು ನೆನೆಯುತ್ತಾರೆ. ಮಾರ್ಕ್ವೆಜ್‌ನ ಕಾದಂಬರಿಯ ಒಂದು ಸಾಲಿನಿಂದ ಪ್ರೇರಿತನಾಗಿ ನಾನು ಕುಸುಮಬಾಲೆ ಬರೆದೆನೆಂದು ದೇವನೂರರು ಹೇಳುತ್ತಾರೆ. ಈ ಕಾಲದಲ್ಲಿ ದೇಶದ ಸಂಸ್ಕೃತಿ, ಧರ್ಮ, ಭಾಷೆಗಳ ಗಡಿಮೀರಿದ ಈ ಸಂಬಂಧವು ಸಾಹಿತ್ಯಲೋಕದಲ್ಲಿ ಸಹಜವಾಗಿದೆ. ನಮ್ಮ ಪಕ್ಕದ ಗಂಗಾವತಿಯಲ್ಲಿ ರಾಘವೇಂದ್ರರಾವ್ ಜಜ್ಬ್ ಎಂಬ ಕವಿಯಿದ್ದರು. ಅವರು ಉರ್ದು ಮತ್ತು ಫಾರಸಿ ಪಂಡಿತರಾಗಿದ್ದರು. ಫಾರಸಿ ಕಾವ್ಯದ ಬಗ್ಗೆ ಅವರು ಬರೆದ ಪುಸ್ತಕ ಮೈಸೂರು ವಿಶ್ವವಿದ್ಯಾಲಯದಿಂದ ಪ್ರಕಟವಾಗಿದೆ. ನಾನು ಇರಾನಿಗೆ ಹೋದಾಗ, ಅಲ್ಲಿ ಚಂದ್ರಭಾನ್ ಬ್ರಾಹ್ಮನ್ ಸ್ಕ್ವೇರ್ ಎಂಬ ಜಾಗವಿತ್ತು. ವಿಚಾರಿಸಿ ನೋಡಿದರೆ, ಮೊಘಲರ ಕಾಲದಲ್ಲಿ ಫಾರಸಿಯಲ್ಲಿ ಕಾವ್ಯ ಬರೆದ ದೆಹಲಿಯ ಕವಿ ಈತ. ಕವಿ ಇಕ್ಬಾಲರು ಏಕಕಾಲಕ್ಕೆ ಟರ್ಕಿಯ ಜಲಾಲುದ್ದೀನ್ ರೂಮಿಯಿಂದಲೂ ಜರ್ಮನಿಯ ನೀಶೆಯಿಂದಲೂ ಪ್ರಭಾವಿತರಾಗಿದ್ದರು. ಸಾಹಿತ್ಯದವರಿಗೆ, ಸಂಗೀತದವರಿಗೆ ಗಡಿಗಳೇ ಇಲ್ಲ” ಎಂದು ಹೇಳಿದರು.
ರಿಯಾಜ್ ಅಹ್ಮದ್ ಗೋಡೆ ಪುಸ್ತಕ ಪರಿಚಯ ಮಾಡಿದರು, ಬಳ್ಳಾರಿಯ ಕನ್ನಡ ಸಾಹಿತ್ಯ ಪರಿಷತ್‌ ರಿಷ್ಕಿ ರುದ್ರಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು