5:51 AM Wednesday22 - April 2026
ಬ್ರೇಕಿಂಗ್ ನ್ಯೂಸ್
ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ…

ಇತ್ತೀಚಿನ ಸುದ್ದಿ

ಲಿಂಗಸಗೂರು: ಜಿಪಂ ಅನುದಾನದ ತುಂಡು ಗುತ್ತಿಗೆ ರದ್ದುಗೊಳಿಸಿ ಟೆಂಡರ್ ಕರೆಯಲು ಆಗ್ರಹ

30/12/2024, 20:27

ಅಮರೇಶ್ ಲಿಂಗಸಗೂರು ರಾಯಚೂರು

info.reporterkarnataka@gmail.com

ಲಿಂಗಸಗೂರು ತಾಲೂಕಿನ ಜಿಲ್ಲಾ ಪಂಚಾಯಿತಿ ಅನುದಾನ ಹಾಗೂ ಲಿಂಕ್ ಡಾಕುಮೆಂಟ್ ಅನುದಾನವನ್ನು ಪರ್ಸೇಂಟ ಮೇಲೆ ತುಂಡು ಗುತ್ತಿಗೆ ನೀಡಲಾಗುತ್ತಿದ್ದು, ಕೂಡಲೇ ಇದನ್ನು ರದ್ದುಗೊಳಿಸಿ ಟೆಂಡರ್ ಕರೆಯಬೇಕೆಂದು ಕರ್ನಾಟಕ ಬಹುಜನ ಚಳುವಳಿಯ ಅಮರೇಶ ಗೋಸಲೆ ಒತ್ತಾಯಿಸಿದ್ದಾರೆ.
ಅವರು ಮುಖ್ಯ ಕಾರ್ಯನಿರ್ವಾಹಕರು ರಾಯಚೂರು ಅವರಿಗೆ ಪತ್ರ ಬರೆದು ಲಿಂಗಸಗೂರು ತಾಲೂಕಿನ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಉಪವಿಭಾಗ ಲಿಂಗಸಗೂರು ಇವರು ಜಿಲ್ಲಾ ಪಂಚಾಯತ್ ಅನುದಾನ, ಹಾಗೂ ಲಿಂಕ್ ಡಾಕುಮೆಂಟ್ ಅನುದಾನದಲ್ಲಿ ದುರಸ್ತಿ ಕಾಮಗಾರಿಗಳ ಬಗ್ಗೆ ಸಾರ್ವಜನಿಕರಿಗೆ ಯಾವುದೆ ಮಾಹಿತಿ ನೀಡದೆ ತಮಗೆ ಬೇಕಾದ ಗುತ್ತಿಗೆದಾರ ಅಥವ ಜನಪ್ರತಿನಿಧಿಗಳ ಗಮನಕ್ಕೆ ಮಾತ್ರ ತಂದು ಹೊಂದಾಣಿಕೆ ಮಾಡಿಕೊಂಡು ಒಂದು ಲಕ್ಷಕ್ಕೆ 6ರಿಂದ 7 ಪರ್ಸೆಂಟೇಜ್ ಪಡೆದು ಕಾಮಗಾರಿಗಳನ್ನು ನೀಡಿ ಅಗ್ರಿಮೆಂಟ್ ಮಾಡುತಿದ್ದಾರೆ. ಇದರಲ್ಲಿ ಕಾರ್ಯನಿರ್ವಾಹಕ ಅಭಿಯಂತರರು ಶಾಮಿಲಾಗಿ ತುಂಡುಗುತ್ತಿಗೆ ನೀಡಿ ಸರಕಾರದ ಹಣ ಲೂಟಿ ಮಾಡುವ ಉನ್ನಾರ ನಡೆಸಿದ್ದಾರೆ. ಗುತ್ತಿಗೆದಾರರು 6ರಿಂದ 7 ಪರ್ಸಂಟೇಜ್ ನಿಡಿ ಕಾಮಗಾರಿಗಳನ್ನು ಗುತ್ತಿಗೆ ಪಡೆಯುವ ಗುತ್ತಿಗೆದಾರ ಅದೆಷ್ಟು ಗುಣಮಟ್ಟದ ಕಾಮಗಾರಿ ಮಾಡಬಲ್ಲ ಎನ್ನುವುದು ಮೇಲುನೋಟಕ್ಕೆ ಕಂಡುಬರುತ್ತಿದೆ. ಅದಕ್ಕಾಗಿ ತುಂಡುಗುತ್ತಿಗೆಯನ್ನು ರದ್ದುಗೊಳಿಸಬೇಕು ಟೆಂಡರ್ ಕರೆದು ಕಾಮಗಾರಿ ಪ್ರಾರಂಭ ಮಾಡಬೇಕು ಎಂದು ಅವರು ಒತ್ತಾಯಿಸಿ ಮನವಿ ಸಲ್ಲಿಸಿದಾರೆ.
ಈ ಸಂದರ್ಭದಲ್ಲಿ ಅಮರೇಶ ಗೋಸ್ಲೆ, ಅಮರೇಶ ಪವಾರ, ಶಿವಕುಮಾರ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು