2:43 PM Sunday6 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಲಿಂಗಸಗೂರು: ಜಿಪಂ ಅನುದಾನದ ತುಂಡು ಗುತ್ತಿಗೆ ರದ್ದುಗೊಳಿಸಿ ಟೆಂಡರ್ ಕರೆಯಲು ಆಗ್ರಹ

30/12/2024, 20:27

ಅಮರೇಶ್ ಲಿಂಗಸಗೂರು ರಾಯಚೂರು

info.reporterkarnataka@gmail.com

ಲಿಂಗಸಗೂರು ತಾಲೂಕಿನ ಜಿಲ್ಲಾ ಪಂಚಾಯಿತಿ ಅನುದಾನ ಹಾಗೂ ಲಿಂಕ್ ಡಾಕುಮೆಂಟ್ ಅನುದಾನವನ್ನು ಪರ್ಸೇಂಟ ಮೇಲೆ ತುಂಡು ಗುತ್ತಿಗೆ ನೀಡಲಾಗುತ್ತಿದ್ದು, ಕೂಡಲೇ ಇದನ್ನು ರದ್ದುಗೊಳಿಸಿ ಟೆಂಡರ್ ಕರೆಯಬೇಕೆಂದು ಕರ್ನಾಟಕ ಬಹುಜನ ಚಳುವಳಿಯ ಅಮರೇಶ ಗೋಸಲೆ ಒತ್ತಾಯಿಸಿದ್ದಾರೆ.
ಅವರು ಮುಖ್ಯ ಕಾರ್ಯನಿರ್ವಾಹಕರು ರಾಯಚೂರು ಅವರಿಗೆ ಪತ್ರ ಬರೆದು ಲಿಂಗಸಗೂರು ತಾಲೂಕಿನ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಉಪವಿಭಾಗ ಲಿಂಗಸಗೂರು ಇವರು ಜಿಲ್ಲಾ ಪಂಚಾಯತ್ ಅನುದಾನ, ಹಾಗೂ ಲಿಂಕ್ ಡಾಕುಮೆಂಟ್ ಅನುದಾನದಲ್ಲಿ ದುರಸ್ತಿ ಕಾಮಗಾರಿಗಳ ಬಗ್ಗೆ ಸಾರ್ವಜನಿಕರಿಗೆ ಯಾವುದೆ ಮಾಹಿತಿ ನೀಡದೆ ತಮಗೆ ಬೇಕಾದ ಗುತ್ತಿಗೆದಾರ ಅಥವ ಜನಪ್ರತಿನಿಧಿಗಳ ಗಮನಕ್ಕೆ ಮಾತ್ರ ತಂದು ಹೊಂದಾಣಿಕೆ ಮಾಡಿಕೊಂಡು ಒಂದು ಲಕ್ಷಕ್ಕೆ 6ರಿಂದ 7 ಪರ್ಸೆಂಟೇಜ್ ಪಡೆದು ಕಾಮಗಾರಿಗಳನ್ನು ನೀಡಿ ಅಗ್ರಿಮೆಂಟ್ ಮಾಡುತಿದ್ದಾರೆ. ಇದರಲ್ಲಿ ಕಾರ್ಯನಿರ್ವಾಹಕ ಅಭಿಯಂತರರು ಶಾಮಿಲಾಗಿ ತುಂಡುಗುತ್ತಿಗೆ ನೀಡಿ ಸರಕಾರದ ಹಣ ಲೂಟಿ ಮಾಡುವ ಉನ್ನಾರ ನಡೆಸಿದ್ದಾರೆ. ಗುತ್ತಿಗೆದಾರರು 6ರಿಂದ 7 ಪರ್ಸಂಟೇಜ್ ನಿಡಿ ಕಾಮಗಾರಿಗಳನ್ನು ಗುತ್ತಿಗೆ ಪಡೆಯುವ ಗುತ್ತಿಗೆದಾರ ಅದೆಷ್ಟು ಗುಣಮಟ್ಟದ ಕಾಮಗಾರಿ ಮಾಡಬಲ್ಲ ಎನ್ನುವುದು ಮೇಲುನೋಟಕ್ಕೆ ಕಂಡುಬರುತ್ತಿದೆ. ಅದಕ್ಕಾಗಿ ತುಂಡುಗುತ್ತಿಗೆಯನ್ನು ರದ್ದುಗೊಳಿಸಬೇಕು ಟೆಂಡರ್ ಕರೆದು ಕಾಮಗಾರಿ ಪ್ರಾರಂಭ ಮಾಡಬೇಕು ಎಂದು ಅವರು ಒತ್ತಾಯಿಸಿ ಮನವಿ ಸಲ್ಲಿಸಿದಾರೆ.
ಈ ಸಂದರ್ಭದಲ್ಲಿ ಅಮರೇಶ ಗೋಸ್ಲೆ, ಅಮರೇಶ ಪವಾರ, ಶಿವಕುಮಾರ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು