10:41 PM Saturday19 - April 2025
ಬ್ರೇಕಿಂಗ್ ನ್ಯೂಸ್
Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್…

ಇತ್ತೀಚಿನ ಸುದ್ದಿ

ಲಿಂಗಸಗೂರು: ಜಿಪಂ ಅನುದಾನದ ತುಂಡು ಗುತ್ತಿಗೆ ರದ್ದುಗೊಳಿಸಿ ಟೆಂಡರ್ ಕರೆಯಲು ಆಗ್ರಹ

30/12/2024, 20:27

ಅಮರೇಶ್ ಲಿಂಗಸಗೂರು ರಾಯಚೂರು

info.reporterkarnataka@gmail.com

ಲಿಂಗಸಗೂರು ತಾಲೂಕಿನ ಜಿಲ್ಲಾ ಪಂಚಾಯಿತಿ ಅನುದಾನ ಹಾಗೂ ಲಿಂಕ್ ಡಾಕುಮೆಂಟ್ ಅನುದಾನವನ್ನು ಪರ್ಸೇಂಟ ಮೇಲೆ ತುಂಡು ಗುತ್ತಿಗೆ ನೀಡಲಾಗುತ್ತಿದ್ದು, ಕೂಡಲೇ ಇದನ್ನು ರದ್ದುಗೊಳಿಸಿ ಟೆಂಡರ್ ಕರೆಯಬೇಕೆಂದು ಕರ್ನಾಟಕ ಬಹುಜನ ಚಳುವಳಿಯ ಅಮರೇಶ ಗೋಸಲೆ ಒತ್ತಾಯಿಸಿದ್ದಾರೆ.
ಅವರು ಮುಖ್ಯ ಕಾರ್ಯನಿರ್ವಾಹಕರು ರಾಯಚೂರು ಅವರಿಗೆ ಪತ್ರ ಬರೆದು ಲಿಂಗಸಗೂರು ತಾಲೂಕಿನ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಉಪವಿಭಾಗ ಲಿಂಗಸಗೂರು ಇವರು ಜಿಲ್ಲಾ ಪಂಚಾಯತ್ ಅನುದಾನ, ಹಾಗೂ ಲಿಂಕ್ ಡಾಕುಮೆಂಟ್ ಅನುದಾನದಲ್ಲಿ ದುರಸ್ತಿ ಕಾಮಗಾರಿಗಳ ಬಗ್ಗೆ ಸಾರ್ವಜನಿಕರಿಗೆ ಯಾವುದೆ ಮಾಹಿತಿ ನೀಡದೆ ತಮಗೆ ಬೇಕಾದ ಗುತ್ತಿಗೆದಾರ ಅಥವ ಜನಪ್ರತಿನಿಧಿಗಳ ಗಮನಕ್ಕೆ ಮಾತ್ರ ತಂದು ಹೊಂದಾಣಿಕೆ ಮಾಡಿಕೊಂಡು ಒಂದು ಲಕ್ಷಕ್ಕೆ 6ರಿಂದ 7 ಪರ್ಸೆಂಟೇಜ್ ಪಡೆದು ಕಾಮಗಾರಿಗಳನ್ನು ನೀಡಿ ಅಗ್ರಿಮೆಂಟ್ ಮಾಡುತಿದ್ದಾರೆ. ಇದರಲ್ಲಿ ಕಾರ್ಯನಿರ್ವಾಹಕ ಅಭಿಯಂತರರು ಶಾಮಿಲಾಗಿ ತುಂಡುಗುತ್ತಿಗೆ ನೀಡಿ ಸರಕಾರದ ಹಣ ಲೂಟಿ ಮಾಡುವ ಉನ್ನಾರ ನಡೆಸಿದ್ದಾರೆ. ಗುತ್ತಿಗೆದಾರರು 6ರಿಂದ 7 ಪರ್ಸಂಟೇಜ್ ನಿಡಿ ಕಾಮಗಾರಿಗಳನ್ನು ಗುತ್ತಿಗೆ ಪಡೆಯುವ ಗುತ್ತಿಗೆದಾರ ಅದೆಷ್ಟು ಗುಣಮಟ್ಟದ ಕಾಮಗಾರಿ ಮಾಡಬಲ್ಲ ಎನ್ನುವುದು ಮೇಲುನೋಟಕ್ಕೆ ಕಂಡುಬರುತ್ತಿದೆ. ಅದಕ್ಕಾಗಿ ತುಂಡುಗುತ್ತಿಗೆಯನ್ನು ರದ್ದುಗೊಳಿಸಬೇಕು ಟೆಂಡರ್ ಕರೆದು ಕಾಮಗಾರಿ ಪ್ರಾರಂಭ ಮಾಡಬೇಕು ಎಂದು ಅವರು ಒತ್ತಾಯಿಸಿ ಮನವಿ ಸಲ್ಲಿಸಿದಾರೆ.
ಈ ಸಂದರ್ಭದಲ್ಲಿ ಅಮರೇಶ ಗೋಸ್ಲೆ, ಅಮರೇಶ ಪವಾರ, ಶಿವಕುಮಾರ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು