1:45 PM Monday22 - June 2026
ಬ್ರೇಕಿಂಗ್ ನ್ಯೂಸ್
ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ

ಇತ್ತೀಚಿನ ಸುದ್ದಿ

ಲಿಂಗಸಗೂರು: ಜಿಪಂ ಅನುದಾನದ ತುಂಡು ಗುತ್ತಿಗೆ ರದ್ದುಗೊಳಿಸಿ ಟೆಂಡರ್ ಕರೆಯಲು ಆಗ್ರಹ

30/12/2024, 20:27

ಅಮರೇಶ್ ಲಿಂಗಸಗೂರು ರಾಯಚೂರು

info.reporterkarnataka@gmail.com

ಲಿಂಗಸಗೂರು ತಾಲೂಕಿನ ಜಿಲ್ಲಾ ಪಂಚಾಯಿತಿ ಅನುದಾನ ಹಾಗೂ ಲಿಂಕ್ ಡಾಕುಮೆಂಟ್ ಅನುದಾನವನ್ನು ಪರ್ಸೇಂಟ ಮೇಲೆ ತುಂಡು ಗುತ್ತಿಗೆ ನೀಡಲಾಗುತ್ತಿದ್ದು, ಕೂಡಲೇ ಇದನ್ನು ರದ್ದುಗೊಳಿಸಿ ಟೆಂಡರ್ ಕರೆಯಬೇಕೆಂದು ಕರ್ನಾಟಕ ಬಹುಜನ ಚಳುವಳಿಯ ಅಮರೇಶ ಗೋಸಲೆ ಒತ್ತಾಯಿಸಿದ್ದಾರೆ.
ಅವರು ಮುಖ್ಯ ಕಾರ್ಯನಿರ್ವಾಹಕರು ರಾಯಚೂರು ಅವರಿಗೆ ಪತ್ರ ಬರೆದು ಲಿಂಗಸಗೂರು ತಾಲೂಕಿನ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಉಪವಿಭಾಗ ಲಿಂಗಸಗೂರು ಇವರು ಜಿಲ್ಲಾ ಪಂಚಾಯತ್ ಅನುದಾನ, ಹಾಗೂ ಲಿಂಕ್ ಡಾಕುಮೆಂಟ್ ಅನುದಾನದಲ್ಲಿ ದುರಸ್ತಿ ಕಾಮಗಾರಿಗಳ ಬಗ್ಗೆ ಸಾರ್ವಜನಿಕರಿಗೆ ಯಾವುದೆ ಮಾಹಿತಿ ನೀಡದೆ ತಮಗೆ ಬೇಕಾದ ಗುತ್ತಿಗೆದಾರ ಅಥವ ಜನಪ್ರತಿನಿಧಿಗಳ ಗಮನಕ್ಕೆ ಮಾತ್ರ ತಂದು ಹೊಂದಾಣಿಕೆ ಮಾಡಿಕೊಂಡು ಒಂದು ಲಕ್ಷಕ್ಕೆ 6ರಿಂದ 7 ಪರ್ಸೆಂಟೇಜ್ ಪಡೆದು ಕಾಮಗಾರಿಗಳನ್ನು ನೀಡಿ ಅಗ್ರಿಮೆಂಟ್ ಮಾಡುತಿದ್ದಾರೆ. ಇದರಲ್ಲಿ ಕಾರ್ಯನಿರ್ವಾಹಕ ಅಭಿಯಂತರರು ಶಾಮಿಲಾಗಿ ತುಂಡುಗುತ್ತಿಗೆ ನೀಡಿ ಸರಕಾರದ ಹಣ ಲೂಟಿ ಮಾಡುವ ಉನ್ನಾರ ನಡೆಸಿದ್ದಾರೆ. ಗುತ್ತಿಗೆದಾರರು 6ರಿಂದ 7 ಪರ್ಸಂಟೇಜ್ ನಿಡಿ ಕಾಮಗಾರಿಗಳನ್ನು ಗುತ್ತಿಗೆ ಪಡೆಯುವ ಗುತ್ತಿಗೆದಾರ ಅದೆಷ್ಟು ಗುಣಮಟ್ಟದ ಕಾಮಗಾರಿ ಮಾಡಬಲ್ಲ ಎನ್ನುವುದು ಮೇಲುನೋಟಕ್ಕೆ ಕಂಡುಬರುತ್ತಿದೆ. ಅದಕ್ಕಾಗಿ ತುಂಡುಗುತ್ತಿಗೆಯನ್ನು ರದ್ದುಗೊಳಿಸಬೇಕು ಟೆಂಡರ್ ಕರೆದು ಕಾಮಗಾರಿ ಪ್ರಾರಂಭ ಮಾಡಬೇಕು ಎಂದು ಅವರು ಒತ್ತಾಯಿಸಿ ಮನವಿ ಸಲ್ಲಿಸಿದಾರೆ.
ಈ ಸಂದರ್ಭದಲ್ಲಿ ಅಮರೇಶ ಗೋಸ್ಲೆ, ಅಮರೇಶ ಪವಾರ, ಶಿವಕುಮಾರ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು