2:02 AM Saturday19 - April 2025
ಬ್ರೇಕಿಂಗ್ ನ್ಯೂಸ್
Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್…

ಇತ್ತೀಚಿನ ಸುದ್ದಿ

ಮಂಜನಾಡಿ ಗ್ಯಾಸ್ ದುರಂತ; ಸರಕಾರದಿಂದ 15 ಲಕ್ಷ, ಗ್ಯಾಸ್ ಕಂಪೆನಿಯಿಂದ 20 ಲಕ್ಷ ಪರಿಹಾರ: ಸ್ಪೀಕರ್ ಖಾದರ್

30/12/2024, 22:50

ಮಂಗಳೂರು(reporterkarnataka.com): ಮಂಜನಾಡಿ ಗ್ಯಾಸ್ ಸಿಲಿಂಡರ್ ದುರಂತದಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 4 ಜನರನ್ನು ಬದುಕಿಸಲು ಸಕಲ ಪ್ರಯತ್ನಗಳನ್ನು ನಡೆಸಿಯೂ ನಿನ್ನೆ 3ನೇ ಗಾಯಾಳುವೂ ಮೃತಪಟ್ಟಿದ್ದು ಈ ಹಿನ್ನಲೆಯಲ್ಲಿ ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಮುಖ್ಯಮಂತ್ರಿ ಜೊತೆ ಮಾತನಾಡಿ ಮೃತ ಮೂವರಿಗೆ ಒಟ್ಟು 15 ಲಕ್ಷ ಪರಿಹಾರದ ವ್ಯವಸ್ಥೆ ಮಾಡಿದ್ದಾರೆ.


ಯು. ಟಿ ಖಾದರ್ ನಿನ್ನೆಯೇ ಮಂಜನಾಡಿ ಕಲ್ಕಟ್ಟದಲ್ಲಿರುವ ಘಟನೆ ನಡೆದ ಮನೆಯಲ್ಲಿಯೇ ವಿವಿಧ ಇಲಾಖೆಯ ಹಾಗೂ ಗ್ಯಾಸ್ ಕಂಪೆನಿಯ ಅಧಿಕಾರಿಗಳ ಸಭೆಯನ್ನು ನಡೆಸಿ ನಿಯಮಗಳ ಜೊತೆಗೆ ಮಾನವೀಯತೆ ಆಧಾರದ ಮೇಲೆ ವರದಿ ಕಳುಹಿಸಬೇಕೆಂದು ಗ್ಯಾಸ್ ಕಂಪೆನಿಯ ಅಧಿಕಾರಿಗಳಿಗೆ ಸೂಚಿಸಿದ್ದರು. ಲಭ್ಯ ಮಾಹಿತಿಯ ಪ್ರಕಾರ ಗ್ಯಾಸ್ ಕಂಪೆನಿ 20 ಲಕ್ಷ ಪರಿಹಾರ ಕೊಡುವ ವ್ಯವಸ್ಥೆಯನ್ನು ಮಾಡಿದ್ದು ಹೀಗಾಗಿ ಒಟ್ಟು 35 ಲಕ್ಷ ರೂಪಾಯಿ ಮೃತರ ಕುಟುಂಬಕ್ಕೆ ಸಿಗಲಿದೆ ಎನ್ನಲಾಗಿದೆ.
ಸ್ಥಳೀಯ
ಶಾಸಕರೂ ಆಗಿರುವ ಸ್ಪೀಕರ್ ಅವರ ಸೂಚನೆ ಮೇರೆಗೆ ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಗಳು, ಉಳ್ಳಾಲ ಉಪ ವಿಭಾಗಾಧಿಕಾರಿಗಳು, ಕಂದಾಯ ಇಲಾಖೆಯ ಅಧಿಕಾರಿಗಳು, ಅಗ್ನಿಶಾಮಕ, ಪೊಲೀಸ್, ಆರೋಗ್ಯ ಇಲಾಖೆಯ ಅಧಿಕಾರಿಗಳು ಈ ಕುರಿತ ಕಡತಗಳನ್ನು ಅಂತಿಮ ಗೊಳಿಸುತ್ತಿದ್ದು ಜಿಲ್ಲಾಧಿಕಾರಿಗಳು ಅಂತಿಮ ವರದಿ ಸಲ್ಲಿಸುತ್ತಿದ್ದಂತೆಯೇ ಪರಿಹಾರದ ಹಣ ಕುಟುಂಬಕ್ಕೆ ಸಿಗಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು