11:39 PM Tuesday12 - August 2025
ಬ್ರೇಕಿಂಗ್ ನ್ಯೂಸ್
ಸ್ಮಶಾನ ಜಾಗ ಒತ್ತುವರಿ ಮಾಡಿಕೊಂಡಿರುವವರ ವಿರುದ್ಧ ಕ್ರಮ: ವಿಧಾನಸಭೆಯಲ್ಲಿ ಸಚಿವ ಕೃಷ್ಣ ಬೈರೇಗೌಡ ಬಂಡೀಪುರ: ಕಾಡಾನೆ ಜತೆ ಸೆಲ್ಫಿಗೆ ಹೋಗಿ ದಾಳಿಗೊಳಗಾಗಿದ್ದ ವ್ಯಕ್ತಿಗೆ 25 ಸಾವಿರ ರೂ.… ವಿಶ್ವ ವಿಖ್ಯಾತ ಮೈಸೂರು ದಸರಾ: ಗಜಪಡೆಯ ತೂಕ ಪರೀಕ್ಷೆ; ಯಾರ್ಯಾರು, ಎಷ್ಟೆಷ್ಟು ಕೆಜಿ? ವಿಧಾನ ಮಂಡಲ ಮುಂಗಾರು ಅಧಿವೇಶನ: ಧರ್ಮಸ್ಥಳ ಪ್ರಕರಣ ಪ್ರಸ್ತಾಪ; ಸನಾತನ ಧರ್ಮದ ಪಾವಿತ್ರ್ಯಕ್ಕೆ… ಬೆಂಗಳೂರು ಟೆಕ್ ಸಮ್ಮಿತ್-2025: 100ಕ್ಕೂ ಹೆಚ್ಚು ಕಂಪನಿಗಳ ಸಿಇಒಗಳ ಜತೆ ಮುಖ್ಯಮಂತ್ರಿ Breakfast… Kodagu | ವಿರಾಜಪೇಟೆ: ಚೆಂಬು ವ್ಯಾಪ್ತಿಯಲ್ಲಿ ಪುoಡಾನೆ ಸೆರೆಗೆ ಸರ್ಕಾರದ ಅನುಮತಿ; ತಂಡ… ಮೈಸೂರು -ಕೊಡಗು ಲೋಕಸಭೆ ಕ್ಷೇತ್ರದಲ್ಲೂ ಮತಗಳ್ಳತನ: ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಆರೋಪ Bangalore | ಆರ್.ವಿ. ರಸ್ತೆಯಿಂದ ಬೊಮ್ಮಸಂದ್ರಕ್ಕೆ: ಬೆಂಗಳೂರು ಮೆಟ್ರೋ 2ರ ಹಳದಿ ಮಾರ್ಗ… ಧರ್ಮಸ್ಥಳ: ಯೂಟ್ಯೂಬರ್ ಗಳ ಮೇಲೆ ಹಲ್ಲೆ ಪ್ರಕರಣ; 6 ಮಂದಿಯ ಬಂಧನ Bangalore | ಪ್ರಧಾನಿ ಮೋದಿಯವರ ಬೆಂಗಳೂರು ಕಾರ್ಯಕ್ರಮ; ಪ್ರತಿಪಕ್ಷದ ನಾಯಕ ಆರ್. ಅಶೋಕ್…

ಇತ್ತೀಚಿನ ಸುದ್ದಿ

ಮಂಜನಾಡಿ ಗ್ಯಾಸ್ ದುರಂತ; ಸರಕಾರದಿಂದ 15 ಲಕ್ಷ, ಗ್ಯಾಸ್ ಕಂಪೆನಿಯಿಂದ 20 ಲಕ್ಷ ಪರಿಹಾರ: ಸ್ಪೀಕರ್ ಖಾದರ್

30/12/2024, 22:50

ಮಂಗಳೂರು(reporterkarnataka.com): ಮಂಜನಾಡಿ ಗ್ಯಾಸ್ ಸಿಲಿಂಡರ್ ದುರಂತದಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 4 ಜನರನ್ನು ಬದುಕಿಸಲು ಸಕಲ ಪ್ರಯತ್ನಗಳನ್ನು ನಡೆಸಿಯೂ ನಿನ್ನೆ 3ನೇ ಗಾಯಾಳುವೂ ಮೃತಪಟ್ಟಿದ್ದು ಈ ಹಿನ್ನಲೆಯಲ್ಲಿ ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಮುಖ್ಯಮಂತ್ರಿ ಜೊತೆ ಮಾತನಾಡಿ ಮೃತ ಮೂವರಿಗೆ ಒಟ್ಟು 15 ಲಕ್ಷ ಪರಿಹಾರದ ವ್ಯವಸ್ಥೆ ಮಾಡಿದ್ದಾರೆ.


ಯು. ಟಿ ಖಾದರ್ ನಿನ್ನೆಯೇ ಮಂಜನಾಡಿ ಕಲ್ಕಟ್ಟದಲ್ಲಿರುವ ಘಟನೆ ನಡೆದ ಮನೆಯಲ್ಲಿಯೇ ವಿವಿಧ ಇಲಾಖೆಯ ಹಾಗೂ ಗ್ಯಾಸ್ ಕಂಪೆನಿಯ ಅಧಿಕಾರಿಗಳ ಸಭೆಯನ್ನು ನಡೆಸಿ ನಿಯಮಗಳ ಜೊತೆಗೆ ಮಾನವೀಯತೆ ಆಧಾರದ ಮೇಲೆ ವರದಿ ಕಳುಹಿಸಬೇಕೆಂದು ಗ್ಯಾಸ್ ಕಂಪೆನಿಯ ಅಧಿಕಾರಿಗಳಿಗೆ ಸೂಚಿಸಿದ್ದರು. ಲಭ್ಯ ಮಾಹಿತಿಯ ಪ್ರಕಾರ ಗ್ಯಾಸ್ ಕಂಪೆನಿ 20 ಲಕ್ಷ ಪರಿಹಾರ ಕೊಡುವ ವ್ಯವಸ್ಥೆಯನ್ನು ಮಾಡಿದ್ದು ಹೀಗಾಗಿ ಒಟ್ಟು 35 ಲಕ್ಷ ರೂಪಾಯಿ ಮೃತರ ಕುಟುಂಬಕ್ಕೆ ಸಿಗಲಿದೆ ಎನ್ನಲಾಗಿದೆ.
ಸ್ಥಳೀಯ
ಶಾಸಕರೂ ಆಗಿರುವ ಸ್ಪೀಕರ್ ಅವರ ಸೂಚನೆ ಮೇರೆಗೆ ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಗಳು, ಉಳ್ಳಾಲ ಉಪ ವಿಭಾಗಾಧಿಕಾರಿಗಳು, ಕಂದಾಯ ಇಲಾಖೆಯ ಅಧಿಕಾರಿಗಳು, ಅಗ್ನಿಶಾಮಕ, ಪೊಲೀಸ್, ಆರೋಗ್ಯ ಇಲಾಖೆಯ ಅಧಿಕಾರಿಗಳು ಈ ಕುರಿತ ಕಡತಗಳನ್ನು ಅಂತಿಮ ಗೊಳಿಸುತ್ತಿದ್ದು ಜಿಲ್ಲಾಧಿಕಾರಿಗಳು ಅಂತಿಮ ವರದಿ ಸಲ್ಲಿಸುತ್ತಿದ್ದಂತೆಯೇ ಪರಿಹಾರದ ಹಣ ಕುಟುಂಬಕ್ಕೆ ಸಿಗಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು