8:56 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಮಂಜನಾಡಿ ಗ್ಯಾಸ್ ದುರಂತ; ಸರಕಾರದಿಂದ 15 ಲಕ್ಷ, ಗ್ಯಾಸ್ ಕಂಪೆನಿಯಿಂದ 20 ಲಕ್ಷ ಪರಿಹಾರ: ಸ್ಪೀಕರ್ ಖಾದರ್

30/12/2024, 22:50

ಮಂಗಳೂರು(reporterkarnataka.com): ಮಂಜನಾಡಿ ಗ್ಯಾಸ್ ಸಿಲಿಂಡರ್ ದುರಂತದಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 4 ಜನರನ್ನು ಬದುಕಿಸಲು ಸಕಲ ಪ್ರಯತ್ನಗಳನ್ನು ನಡೆಸಿಯೂ ನಿನ್ನೆ 3ನೇ ಗಾಯಾಳುವೂ ಮೃತಪಟ್ಟಿದ್ದು ಈ ಹಿನ್ನಲೆಯಲ್ಲಿ ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಮುಖ್ಯಮಂತ್ರಿ ಜೊತೆ ಮಾತನಾಡಿ ಮೃತ ಮೂವರಿಗೆ ಒಟ್ಟು 15 ಲಕ್ಷ ಪರಿಹಾರದ ವ್ಯವಸ್ಥೆ ಮಾಡಿದ್ದಾರೆ.


ಯು. ಟಿ ಖಾದರ್ ನಿನ್ನೆಯೇ ಮಂಜನಾಡಿ ಕಲ್ಕಟ್ಟದಲ್ಲಿರುವ ಘಟನೆ ನಡೆದ ಮನೆಯಲ್ಲಿಯೇ ವಿವಿಧ ಇಲಾಖೆಯ ಹಾಗೂ ಗ್ಯಾಸ್ ಕಂಪೆನಿಯ ಅಧಿಕಾರಿಗಳ ಸಭೆಯನ್ನು ನಡೆಸಿ ನಿಯಮಗಳ ಜೊತೆಗೆ ಮಾನವೀಯತೆ ಆಧಾರದ ಮೇಲೆ ವರದಿ ಕಳುಹಿಸಬೇಕೆಂದು ಗ್ಯಾಸ್ ಕಂಪೆನಿಯ ಅಧಿಕಾರಿಗಳಿಗೆ ಸೂಚಿಸಿದ್ದರು. ಲಭ್ಯ ಮಾಹಿತಿಯ ಪ್ರಕಾರ ಗ್ಯಾಸ್ ಕಂಪೆನಿ 20 ಲಕ್ಷ ಪರಿಹಾರ ಕೊಡುವ ವ್ಯವಸ್ಥೆಯನ್ನು ಮಾಡಿದ್ದು ಹೀಗಾಗಿ ಒಟ್ಟು 35 ಲಕ್ಷ ರೂಪಾಯಿ ಮೃತರ ಕುಟುಂಬಕ್ಕೆ ಸಿಗಲಿದೆ ಎನ್ನಲಾಗಿದೆ.
ಸ್ಥಳೀಯ
ಶಾಸಕರೂ ಆಗಿರುವ ಸ್ಪೀಕರ್ ಅವರ ಸೂಚನೆ ಮೇರೆಗೆ ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಗಳು, ಉಳ್ಳಾಲ ಉಪ ವಿಭಾಗಾಧಿಕಾರಿಗಳು, ಕಂದಾಯ ಇಲಾಖೆಯ ಅಧಿಕಾರಿಗಳು, ಅಗ್ನಿಶಾಮಕ, ಪೊಲೀಸ್, ಆರೋಗ್ಯ ಇಲಾಖೆಯ ಅಧಿಕಾರಿಗಳು ಈ ಕುರಿತ ಕಡತಗಳನ್ನು ಅಂತಿಮ ಗೊಳಿಸುತ್ತಿದ್ದು ಜಿಲ್ಲಾಧಿಕಾರಿಗಳು ಅಂತಿಮ ವರದಿ ಸಲ್ಲಿಸುತ್ತಿದ್ದಂತೆಯೇ ಪರಿಹಾರದ ಹಣ ಕುಟುಂಬಕ್ಕೆ ಸಿಗಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು