12:34 PM Saturday5 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಮಂಜನಾಡಿ ಗ್ಯಾಸ್ ದುರಂತ; ಸರಕಾರದಿಂದ 15 ಲಕ್ಷ, ಗ್ಯಾಸ್ ಕಂಪೆನಿಯಿಂದ 20 ಲಕ್ಷ ಪರಿಹಾರ: ಸ್ಪೀಕರ್ ಖಾದರ್

30/12/2024, 22:50

ಮಂಗಳೂರು(reporterkarnataka.com): ಮಂಜನಾಡಿ ಗ್ಯಾಸ್ ಸಿಲಿಂಡರ್ ದುರಂತದಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 4 ಜನರನ್ನು ಬದುಕಿಸಲು ಸಕಲ ಪ್ರಯತ್ನಗಳನ್ನು ನಡೆಸಿಯೂ ನಿನ್ನೆ 3ನೇ ಗಾಯಾಳುವೂ ಮೃತಪಟ್ಟಿದ್ದು ಈ ಹಿನ್ನಲೆಯಲ್ಲಿ ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಮುಖ್ಯಮಂತ್ರಿ ಜೊತೆ ಮಾತನಾಡಿ ಮೃತ ಮೂವರಿಗೆ ಒಟ್ಟು 15 ಲಕ್ಷ ಪರಿಹಾರದ ವ್ಯವಸ್ಥೆ ಮಾಡಿದ್ದಾರೆ.


ಯು. ಟಿ ಖಾದರ್ ನಿನ್ನೆಯೇ ಮಂಜನಾಡಿ ಕಲ್ಕಟ್ಟದಲ್ಲಿರುವ ಘಟನೆ ನಡೆದ ಮನೆಯಲ್ಲಿಯೇ ವಿವಿಧ ಇಲಾಖೆಯ ಹಾಗೂ ಗ್ಯಾಸ್ ಕಂಪೆನಿಯ ಅಧಿಕಾರಿಗಳ ಸಭೆಯನ್ನು ನಡೆಸಿ ನಿಯಮಗಳ ಜೊತೆಗೆ ಮಾನವೀಯತೆ ಆಧಾರದ ಮೇಲೆ ವರದಿ ಕಳುಹಿಸಬೇಕೆಂದು ಗ್ಯಾಸ್ ಕಂಪೆನಿಯ ಅಧಿಕಾರಿಗಳಿಗೆ ಸೂಚಿಸಿದ್ದರು. ಲಭ್ಯ ಮಾಹಿತಿಯ ಪ್ರಕಾರ ಗ್ಯಾಸ್ ಕಂಪೆನಿ 20 ಲಕ್ಷ ಪರಿಹಾರ ಕೊಡುವ ವ್ಯವಸ್ಥೆಯನ್ನು ಮಾಡಿದ್ದು ಹೀಗಾಗಿ ಒಟ್ಟು 35 ಲಕ್ಷ ರೂಪಾಯಿ ಮೃತರ ಕುಟುಂಬಕ್ಕೆ ಸಿಗಲಿದೆ ಎನ್ನಲಾಗಿದೆ.
ಸ್ಥಳೀಯ
ಶಾಸಕರೂ ಆಗಿರುವ ಸ್ಪೀಕರ್ ಅವರ ಸೂಚನೆ ಮೇರೆಗೆ ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಗಳು, ಉಳ್ಳಾಲ ಉಪ ವಿಭಾಗಾಧಿಕಾರಿಗಳು, ಕಂದಾಯ ಇಲಾಖೆಯ ಅಧಿಕಾರಿಗಳು, ಅಗ್ನಿಶಾಮಕ, ಪೊಲೀಸ್, ಆರೋಗ್ಯ ಇಲಾಖೆಯ ಅಧಿಕಾರಿಗಳು ಈ ಕುರಿತ ಕಡತಗಳನ್ನು ಅಂತಿಮ ಗೊಳಿಸುತ್ತಿದ್ದು ಜಿಲ್ಲಾಧಿಕಾರಿಗಳು ಅಂತಿಮ ವರದಿ ಸಲ್ಲಿಸುತ್ತಿದ್ದಂತೆಯೇ ಪರಿಹಾರದ ಹಣ ಕುಟುಂಬಕ್ಕೆ ಸಿಗಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು